AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನ ಅಪಾರ್ಟ್​ಮೆಂಟ್​ನಲ್ಲಿ ಭಾರೀ ಅಗ್ನಿ ದುರಂತ; ಓರ್ವ ಸಾವು, 26 ಜನರ ರಕ್ಷಣೆ

Mumbai Fire: ಮುಂಬೈನ ಕರೇ ರಸ್ತೆಯಲ್ಲಿರುವ ಲೋವರ್ ಪರೇಲ್ ಏರಿಯಾದ ಅವಿಜ್ಞಾ ಪಾರ್ಕ್ ಅಪಾರ್ಟ್​ಮೆಂಟ್​ನ 19ನೇ ಮಹಡಿಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದೆ. ಕಟ್ಟಡದೊಳಗೆ ಸಾಕಷ್ಟು ಜನರು ಸಿಲುಕಿರುವ ಸಾಧ್ಯತೆಯಿದೆ.

ಮುಂಬೈನ ಅಪಾರ್ಟ್​ಮೆಂಟ್​ನಲ್ಲಿ ಭಾರೀ ಅಗ್ನಿ ದುರಂತ; ಓರ್ವ ಸಾವು, 26 ಜನರ ರಕ್ಷಣೆ
ಮುಂಬೈನಲ್ಲಿ ಹೊತ್ತಿ ಉರಿಯುತ್ತಿರುವ ಕಟ್ಟಡ
TV9 Web
| Edited By: |

Updated on:Oct 22, 2021 | 3:02 PM

Share

ಮುಂಬೈ: ಮಹಾರಾಷ್ಟ್ರದ ಮುಂಬೈನಲ್ಲಿ ಮತ್ತೊಮ್ಮೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಬಹುಮಹಡಿ ಕಟ್ಟಡವೊಂದರಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಮುಂಬೈನ ಕರೇ ರಸ್ತೆಯಲ್ಲಿರುವ ಲೋವರ್ ಪರೇಲ್ ಏರಿಯಾದ ಅವಿಜ್ಞಾ ಪಾರ್ಕ್ ಅಪಾರ್ಟ್​ಮೆಂಟ್​ನ 19ನೇ ಮಹಡಿಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದು, ಅಗ್ನಿಶಾಮಕ ದಳದ ವಾಹನಗಳು ಆಗಮಿಸಿ, ಬೆಂಕಿ ನಂದಿಸುವ ಪ್ರಯತ್ನದಲ್ಲಿವೆ. ಈ ದುರಂತದಲ್ಲಿ ಬೆಂಕಿ ಹೊತ್ತಿಕೊಂಡಿರುವ ಫ್ಲಾಟ್​ನ ಕಿಟಕಿಯಿಂದ ಬಚಾವಾಗಲು ಪ್ರಯತ್ನಿಸಿದ ವ್ಯಕ್ತಿಯೊಬ್ಬ ಮೇಲಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ. 

ಇದು ರೆಸಿಡೆನ್ಷಿಯಲ್ ಕಟ್ಟಡವಾಗಿರುವುದರಿಂದ ಕಟ್ಟಡದೊಳಗೆ ಕುಟುಂಬಗಳು ವಾಸವಾಗಿದ್ದಾರೆ. ಹೀಗಾಗಿ, ಬೆಂಕಿ ಹೊತ್ತಿಕೊಂಡ ಕಟ್ಟಡದೊಳಗೆ ಸಾಕಷ್ಟು ಜನರು ಸಿಲುಕಿರುವ ಸಾಧ್ಯತೆಯಿದೆ. ಮುಂಬೈನ 60 ಮಹಡಿಯ ಅಪಾರ್ಟ್​ಮೆಂಟ್​ನ 19ನೇ ಮಹಡಿಯಲ್ಲಿ ಅಗ್ನಿ ಆಕಸ್ಮಿಕ ನಡೆದಿದ್ದು, 17ರಿಂದ 25ನೇ ಮಹಡಿಯವರೆಗೂ ಬೆಂಕಿ ವ್ಯಾಪಿಸಿದೆ. ಕಟ್ಟಡದ ಮೇಲಿಂದ ಬಿದ್ದು ಸಾವನನ್ಪ್ಪಿದ ವ್ಯಕ್ತಿಯನ್ನು 30 ವರ್ಷದ ಅರುಣ್​ ತಿವಾರಿ ಎಂದು ಗುರುತಿಸಲಾಗಿದೆ. ಬೆಂಕಿಯಿಂದ ರಕ್ಷಿಸಿಕೊಳ್ಳುವಾಗ ಕೆಳಗೆ ಬಿದ್ದು ಆತ ಸಾವನ್ನಪ್ಪಿದ್ದಾನೆ.

60 ಮಹಡಿಗಳಿರುವ ಈ ಪಾರ್ಟ್​ಮೆಂಟ್​ನ 19ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಈಗಾಗಲೇ 26 ಜನರನ್ನು ರಕ್ಷಿಸಲಾಗಿದೆ. ಮೇಯರ್ ಸೇರಿದಂತೆ ಬಿಎಂಸಿಯ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ  ನಡೆಸಿದ್ದಾರೆ. ವ್ಯಾಪಿಸುತ್ತಲೇ ಇರುವ ಬೆಂಕಿಯನ್ನು ಆರಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಈ ಅಗ್ನಿ ಅವಘಡದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಬಿಎಂಸಿ ಮುಖ್ಯಸ್ಥ ಇಕ್ಬಾಲ್ ಸಿಂಗ್ ಚಹಾಲ್ ಆದೇಶ ನೀಡಿದ್ದಾರೆ. ಅಪಾರ್ಟ್​ಮೆಂಟ್​ ನಿವಾಸಿಗಳ ಪ್ರಕಾರ ಆ ಅಪಾರ್ಟ್​ಮೆಂಟ್​ನಲ್ಲಿ ಎಲ್ಲ ರೀತಿಯ ಬೆಂಕಿ ಸುರಕ್ಷತಾ ಕ್ರಮಗಳನ್ನು ಅಳವಡಿಸಲಾಗಿತ್ತು. ಆದರೂ ಬೆಂಕಿ ದುರಂತ ಸಂಭವಿಸಿದೆ.

ಇದನ್ನೂ ಓದಿ: Bengaluru: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ; ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ

ಸೂರತ್​ನ ಪ್ಯಾಕೇಜಿಂಗ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ; ಇಬ್ಬರು ಸಾವು, 125 ಮಂದಿಗೆ ಗಾಯ

Published On - 12:43 pm, Fri, 22 October 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!