AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMW Hit and Run Case: ತಾನೇ ಕಾರು ಓಡಿಸುತ್ತಿದ್ದುದಾಗಿ ಒಪ್ಪಿಕೊಂಡ ಆರೋಪಿ ಮಿಹಿರ್​

ಮುಂಬೈನಲ್ಲಿ ನಡೆದ ಬಿಎಂಡಬ್ಲ್ಯೂ ಹಿಟ್ ಅಂಡ್ ರನ್ ಪ್ರಕರಣದ ಪ್ರಮುಖ ಆರೋಪಿ ಮಿಹಿರ್ ಶಾ, ಜುಲೈ 7 ರಂದು ಬೆಳಗ್ಗೆ ಅಪಘಾತದ ಸಮಯದಲ್ಲಿ ಐಷಾರಾಮಿ ಕಾರನ್ನು ತಾನೇ ಚಾಲನೆ ಮಾಡುತ್ತಿದ್ದುದಾಗಿ ಒಪ್ಪಿಕೊಂಡಿದ್ದಾರೆ. ಮುಂಬೈ ಪೊಲೀಸರು ಮಿಹಿರ್ ಶಾ ಅವರನ್ನು ದಾದರ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿದರು ಮತ್ತು 24 ವರ್ಷದ ಆರೋಪಿಯನ್ನು ಜುಲೈ 16 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದರು.

BMW Hit and Run Case: ತಾನೇ ಕಾರು ಓಡಿಸುತ್ತಿದ್ದುದಾಗಿ ಒಪ್ಪಿಕೊಂಡ ಆರೋಪಿ ಮಿಹಿರ್​
ಮಿಹಿರ್Image Credit source: Hindustan Times
ನಯನಾ ರಾಜೀವ್
|

Updated on: Jul 11, 2024 | 8:47 AM

Share

ಬಿಎಂಡಬ್ಲ್ಯೂ ಕಾರು ಹಿಟ್​ ಆ್ಯಂಡ್​ ರನ್ ಪ್ರಕರಣದಲ್ಲಿ ಪ್ರಮುಖ ಆರೋಪಿ ಮಿಹಿರ್ ಶಾ ಅಪಘಾತದ ಸಂದರ್ಭದಲ್ಲಿ ತಾನೇ ಕಾರು ಚಲಾಯಿಸುತ್ತಿದ್ದುದಾಗಿ ಒಪ್ಪಿಕೊಂಡಿದ್ದಾರೆ. ಮೀನು ತರಲೆಂದು ಪತಿಯೊಂದಿಗೆ ಬೈಕ್​ನಲ್ಲಿ ಹೋಗಿದ್ದ ಮಹಿಳೆ ಹಿಂದಿರುಗಿ ಮನೆಗೆ ಮರಳಲಿಲ್ಲ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ದಂಪತಿ ಮೀನು ಖರೀದಿಸಿ ಮನೆಗೆ ವಾಪಸಾಗುತ್ತಿದ್ದ ಸಮಯದಲ್ಲಿ ಮಿಹಿರ್​ ಚಲಾಯಿಸುತ್ತಿದ್ದ ಬಿಎಂಡಬ್ಲ್ಯೂ ಕಾರು ಬೈಕ್​ಗೆ ಗುದ್ದಿದ ಪರಿಣಾಮ ಇಬ್ಬರು ಕಾರಿನ ಬಾನೆಟ್​ ಮೇಲೆ ಬಿದ್ದಿದ್ದರು. ಮಹಿಳೆಯ ಪತಿ ಕಾರಿನಿಂದ ಹಾರಿ ಬಚಾವಾಗಿದ್ದಾರೆ ಆದರೆ ಮಹಿಳೆ ಅಲ್ಲಿಯೇ ಮೃತಪಟ್ಟಿದ್ದಾರೆ.

ಇದಾದ ಬಳಿಕ ಮಿಹಿರ್​ ಸ್ವಲ್ಪ ದೂರ ಹೋದ ಬಳಿಕ ಕಾರಿನಿಂದ ಇಳಿದು ಆ ಜಾಗದಲ್ಲಿ ಡ್ರೈವರ್​ನ್ನು ಕೂರಿಸಿ ತಾನು ಹಿಂದೆ ಕುಳಿತು ಅಲ್ಲಿಂದ ಪರಾರಿಯಾಗಿದ್ದ. ಆತ ತಲೆ ಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಶಿವಸೇನೆ ನಾಯಕರಾಗಿರುವ ಆತನ ತಂದೆಯನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಆತನನ್ನೂ ಬಂಧಿಸಿದ್ದರು.

ಮೊದಲು ಕಾರು ತಾನು ಚಲಾಯಿಸುತ್ತಿರಲಿಲ್ಲ ಎಂದು ಹೇಳಿದ್ದ ಮಿಹಿರ್ ಇದೀಗ ತಾನೇ ಕಾರು ಚಲಾಯಿಸುತ್ತಿದ್ದುದಾಗಿ ಒಪ್ಪಿಕೊಂಡಿದ್ದಾರೆ. ಆರೋಪಿ ಜುಲೈ 16ರವರೆಗೆ ಪೊಲೀಸ್​ ಕಸ್ಟಡಿಯಲ್ಲಿರಲಿದ್ದಾರೆ. ಆತನ ಬಳಿಕ ಚಾಲನಾ ಪರವಾನಗಿ ಇದೆ ಎಂದು ಹೇಳಿದ್ದರೂ ಕೂಡ ಪೊಲೀಸರಿಗೆ ಯಾವುದೇ ದಾಖಲೆ ಕೊಟ್ಟಿಲ್ಲ.

ಮಿಹಿರ್​ನ ತಾಯಿ, ಸಹೋದರಿಯರು ಮತ್ತು ಸ್ನೇಹಿತರು ಸೇರಿದಂತೆ ಒಟ್ಟು 14 ಜನರ ಹೇಳಿಕೆಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಪೊಲೀಸರು ದಕ್ಷಿಣ ಮಧ್ಯ ಮುಂಬೈನ ವರ್ಲಿಯಲ್ಲಿ ಅಪಘಾತ ಸ್ಥಳಕ್ಕೆ ಭೇಟಿ ನೀಡಬಹುದು ಮತ್ತು ಅವರ ತನಿಖೆಯ ಭಾಗವಾಗಿ ಸಂಪೂರ್ಣ ಅಪರಾಧದ ದೃಶ್ಯವನ್ನು ಮರುಸೃಷ್ಟಿಸಬಹುದು ಎಂದು ಮಾಲೆಮೆಯಲ್ಲಿನ ಅಧಿಕಾರಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಮೀನು ತರಲೆಂದು ಹೊರಗೆ ಹೋಗಿದ್ದ ಮಹಿಳೆಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ, ಸ್ಥಳದಲ್ಲೇ ಸಾವು

ಪಾಲ್ಘಢದ ಜಿಲ್ಲೆಯ ಶಿವಸೇನಾ ನಾಯಕರಾಗಿದ್ದ ಆರೋಪಿ ಮಿಹಿರ್ ಶಾ ಅವರ ತಂದೆ ರಾಜೇಶ್ ಶಾ ಕೂಡ ಪ್ರಕರಣದಲ್ಲಿ ಆರೋಪಿಯಾಗಿದ್ದು, ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾರೆ. ಈ ಅಪಘಾತದ ವೇಳೆ ಮಿಹಿರ್ ಶಾ ಜೊತೆ ಕಾರಿನಲ್ಲಿ ಇದ್ದ ಚಾಲಕ ಬಿಡಾವತ್ ಕೂಡ ಆರೋಪಿಯಾಗಿದ್ದಾನೆ.

ಪುಣೆಯಲ್ಲೂ ಇಂಥದ್ದೇ ಪ್ರಕರಣ ನಡೆದಿತ್ತು

ಪುಣೆಯಲ್ಲಿ 17 ವರ್ಷದ ವೇದಾಂತ್ ಅಗರ್ವಾಲ್ ಎಂಬಾತ ಪೋಷೆ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಬಂದು ಬೈಕ್​ಗೆ ಗುದ್ದಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದರು. ಬಳಿಕ ಚಾಲಕನ ಸೀಟಿನಲ್ಲಿ ತಾನಿರಲಿಲ್ಲ ಬೇರೆಯವರಿದ್ದರು ಎಂದು ಹೇಳಲು ಪ್ರಯತ್ನಿಸಿದರೂ ಸತ್ಯ ಆಚೆ ಬಂದಿತ್ತು. ಇದೀಗ ಆತ ಜಾಮೀನಿನ ಮೇಲೆ ಹೊರಗಿದ್ದಾರೆ. ಆತನ ತಂದೆ, ಅಜ್ಜ ಹಾಗೂ ತಾಯಿಯ ಮೇಲೂ ಕೂಡ ಪ್ರಕರಣ ದಾಖಲಿಸಲಾಗಿದ್ದು, ಜೈಲಿನಲ್ಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ