Sign In

By signing in or creating an account, you agree with Associated Broadcasting Company's Terms & Conditions and Privacy Policy.

BMW Hit and Run Case: ತಾನೇ ಕಾರು ಓಡಿಸುತ್ತಿದ್ದುದಾಗಿ ಒಪ್ಪಿಕೊಂಡ ಆರೋಪಿ ಮಿಹಿರ್​

ಮುಂಬೈನಲ್ಲಿ ನಡೆದ ಬಿಎಂಡಬ್ಲ್ಯೂ ಹಿಟ್ ಅಂಡ್ ರನ್ ಪ್ರಕರಣದ ಪ್ರಮುಖ ಆರೋಪಿ ಮಿಹಿರ್ ಶಾ, ಜುಲೈ 7 ರಂದು ಬೆಳಗ್ಗೆ ಅಪಘಾತದ ಸಮಯದಲ್ಲಿ ಐಷಾರಾಮಿ ಕಾರನ್ನು ತಾನೇ ಚಾಲನೆ ಮಾಡುತ್ತಿದ್ದುದಾಗಿ ಒಪ್ಪಿಕೊಂಡಿದ್ದಾರೆ. ಮುಂಬೈ ಪೊಲೀಸರು ಮಿಹಿರ್ ಶಾ ಅವರನ್ನು ದಾದರ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿದರು ಮತ್ತು 24 ವರ್ಷದ ಆರೋಪಿಯನ್ನು ಜುಲೈ 16 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದರು.

BMW Hit and Run Case: ತಾನೇ ಕಾರು ಓಡಿಸುತ್ತಿದ್ದುದಾಗಿ ಒಪ್ಪಿಕೊಂಡ ಆರೋಪಿ ಮಿಹಿರ್​
ಮಿಹಿರ್Image Credit source: Hindustan Times
Follow us
ನಯನಾ ರಾಜೀವ್
|

Updated on: Jul 11, 2024 | 8:47 AM

ಬಿಎಂಡಬ್ಲ್ಯೂ ಕಾರು ಹಿಟ್​ ಆ್ಯಂಡ್​ ರನ್ ಪ್ರಕರಣದಲ್ಲಿ ಪ್ರಮುಖ ಆರೋಪಿ ಮಿಹಿರ್ ಶಾ ಅಪಘಾತದ ಸಂದರ್ಭದಲ್ಲಿ ತಾನೇ ಕಾರು ಚಲಾಯಿಸುತ್ತಿದ್ದುದಾಗಿ ಒಪ್ಪಿಕೊಂಡಿದ್ದಾರೆ. ಮೀನು ತರಲೆಂದು ಪತಿಯೊಂದಿಗೆ ಬೈಕ್​ನಲ್ಲಿ ಹೋಗಿದ್ದ ಮಹಿಳೆ ಹಿಂದಿರುಗಿ ಮನೆಗೆ ಮರಳಲಿಲ್ಲ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ದಂಪತಿ ಮೀನು ಖರೀದಿಸಿ ಮನೆಗೆ ವಾಪಸಾಗುತ್ತಿದ್ದ ಸಮಯದಲ್ಲಿ ಮಿಹಿರ್​ ಚಲಾಯಿಸುತ್ತಿದ್ದ ಬಿಎಂಡಬ್ಲ್ಯೂ ಕಾರು ಬೈಕ್​ಗೆ ಗುದ್ದಿದ ಪರಿಣಾಮ ಇಬ್ಬರು ಕಾರಿನ ಬಾನೆಟ್​ ಮೇಲೆ ಬಿದ್ದಿದ್ದರು. ಮಹಿಳೆಯ ಪತಿ ಕಾರಿನಿಂದ ಹಾರಿ ಬಚಾವಾಗಿದ್ದಾರೆ ಆದರೆ ಮಹಿಳೆ ಅಲ್ಲಿಯೇ ಮೃತಪಟ್ಟಿದ್ದಾರೆ.

ಇದಾದ ಬಳಿಕ ಮಿಹಿರ್​ ಸ್ವಲ್ಪ ದೂರ ಹೋದ ಬಳಿಕ ಕಾರಿನಿಂದ ಇಳಿದು ಆ ಜಾಗದಲ್ಲಿ ಡ್ರೈವರ್​ನ್ನು ಕೂರಿಸಿ ತಾನು ಹಿಂದೆ ಕುಳಿತು ಅಲ್ಲಿಂದ ಪರಾರಿಯಾಗಿದ್ದ. ಆತ ತಲೆ ಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಶಿವಸೇನೆ ನಾಯಕರಾಗಿರುವ ಆತನ ತಂದೆಯನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಆತನನ್ನೂ ಬಂಧಿಸಿದ್ದರು.

ಮೊದಲು ಕಾರು ತಾನು ಚಲಾಯಿಸುತ್ತಿರಲಿಲ್ಲ ಎಂದು ಹೇಳಿದ್ದ ಮಿಹಿರ್ ಇದೀಗ ತಾನೇ ಕಾರು ಚಲಾಯಿಸುತ್ತಿದ್ದುದಾಗಿ ಒಪ್ಪಿಕೊಂಡಿದ್ದಾರೆ. ಆರೋಪಿ ಜುಲೈ 16ರವರೆಗೆ ಪೊಲೀಸ್​ ಕಸ್ಟಡಿಯಲ್ಲಿರಲಿದ್ದಾರೆ. ಆತನ ಬಳಿಕ ಚಾಲನಾ ಪರವಾನಗಿ ಇದೆ ಎಂದು ಹೇಳಿದ್ದರೂ ಕೂಡ ಪೊಲೀಸರಿಗೆ ಯಾವುದೇ ದಾಖಲೆ ಕೊಟ್ಟಿಲ್ಲ.

ಮಿಹಿರ್​ನ ತಾಯಿ, ಸಹೋದರಿಯರು ಮತ್ತು ಸ್ನೇಹಿತರು ಸೇರಿದಂತೆ ಒಟ್ಟು 14 ಜನರ ಹೇಳಿಕೆಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಪೊಲೀಸರು ದಕ್ಷಿಣ ಮಧ್ಯ ಮುಂಬೈನ ವರ್ಲಿಯಲ್ಲಿ ಅಪಘಾತ ಸ್ಥಳಕ್ಕೆ ಭೇಟಿ ನೀಡಬಹುದು ಮತ್ತು ಅವರ ತನಿಖೆಯ ಭಾಗವಾಗಿ ಸಂಪೂರ್ಣ ಅಪರಾಧದ ದೃಶ್ಯವನ್ನು ಮರುಸೃಷ್ಟಿಸಬಹುದು ಎಂದು ಮಾಲೆಮೆಯಲ್ಲಿನ ಅಧಿಕಾರಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಮೀನು ತರಲೆಂದು ಹೊರಗೆ ಹೋಗಿದ್ದ ಮಹಿಳೆಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ, ಸ್ಥಳದಲ್ಲೇ ಸಾವು

ಪಾಲ್ಘಢದ ಜಿಲ್ಲೆಯ ಶಿವಸೇನಾ ನಾಯಕರಾಗಿದ್ದ ಆರೋಪಿ ಮಿಹಿರ್ ಶಾ ಅವರ ತಂದೆ ರಾಜೇಶ್ ಶಾ ಕೂಡ ಪ್ರಕರಣದಲ್ಲಿ ಆರೋಪಿಯಾಗಿದ್ದು, ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾರೆ. ಈ ಅಪಘಾತದ ವೇಳೆ ಮಿಹಿರ್ ಶಾ ಜೊತೆ ಕಾರಿನಲ್ಲಿ ಇದ್ದ ಚಾಲಕ ಬಿಡಾವತ್ ಕೂಡ ಆರೋಪಿಯಾಗಿದ್ದಾನೆ.

ಪುಣೆಯಲ್ಲೂ ಇಂಥದ್ದೇ ಪ್ರಕರಣ ನಡೆದಿತ್ತು

ಪುಣೆಯಲ್ಲಿ 17 ವರ್ಷದ ವೇದಾಂತ್ ಅಗರ್ವಾಲ್ ಎಂಬಾತ ಪೋಷೆ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಬಂದು ಬೈಕ್​ಗೆ ಗುದ್ದಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದರು. ಬಳಿಕ ಚಾಲಕನ ಸೀಟಿನಲ್ಲಿ ತಾನಿರಲಿಲ್ಲ ಬೇರೆಯವರಿದ್ದರು ಎಂದು ಹೇಳಲು ಪ್ರಯತ್ನಿಸಿದರೂ ಸತ್ಯ ಆಚೆ ಬಂದಿತ್ತು. ಇದೀಗ ಆತ ಜಾಮೀನಿನ ಮೇಲೆ ಹೊರಗಿದ್ದಾರೆ. ಆತನ ತಂದೆ, ಅಜ್ಜ ಹಾಗೂ ತಾಯಿಯ ಮೇಲೂ ಕೂಡ ಪ್ರಕರಣ ದಾಖಲಿಸಲಾಗಿದ್ದು, ಜೈಲಿನಲ್ಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್