AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ದೌರ್ಜನ್ಯ ಆರೋಪಗಳ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಕೋರಿ ಬಾಂಬೆ ಹೈಕೋರ್ಟ್​ ಮೊರೆ ಹೊಕ್ಕ ವಕೀಲರು

ತಮ್ಮ ವಿರುದ್ಧ ಆರೋಪ ಮಾಡಿರುವ ಮಹಿಳಾ ವಕೀಲೆಯ ವಿರುದ್ಧ ಈಗಾಗಲೇ ಹಲವು ಪ್ರಕರಣಗಳು ದಾಖಲಾಗಿವೆ ಎಂದು ವಕೀಲರು ಹೇಳಿದ್ದಾರೆ.

ಲೈಂಗಿಕ ದೌರ್ಜನ್ಯ ಆರೋಪಗಳ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಕೋರಿ ಬಾಂಬೆ ಹೈಕೋರ್ಟ್​ ಮೊರೆ ಹೊಕ್ಕ ವಕೀಲರು
ಬಾಂಬೆ ಹೈಕೋರ್ಟ್​
TV9 Web
| Edited By: |

Updated on: Aug 24, 2021 | 3:36 PM

Share

ಮುಂಬೈ: ತಮ್ಮ ವಿರುದ್ಧ ಮಹಿಳಾ ಸಹೋದ್ಯೋಗಿಯೊಬ್ಬರು ಮಾಡಿರುವ ಲೈಂಗಿಕ ದೌರ್ಜನ್ಯ ಆರೋಪಗಳ ಬಗ್ಗೆ ಸಿಬಿಐ (Central Bureau of Investigation – CBI) ತನಿಖೆ ನಡೆಸಲು ನಿರ್ದೇಶನ ನೀಡಬೇಕು ಕೋರಿರುವ ಮೂವರು ವಕೀಲರು ತಮ್ಮ ವಿರುದ್ಧ ದಾಖಲಾಗಿರುವ ಎಫ್​ಐಆರ್​ ರದ್ದುಪಡಿಸಬೇಕು ಎಂದು ವಿನಂತಿಸಿದ್ದಾರೆ. ತಮ್ಮ ವಿರುದ್ಧ ಆರೋಪ ಮಾಡಿರುವ ಮಹಿಳಾ ವಕೀಲೆಯ ವಿರುದ್ಧ ಈಗಾಗಲೇ ಹಲವು ಪ್ರಕರಣಗಳು ದಾಖಲಾಗಿವೆ ಎಂದು ವಕೀಲರು ಹೇಳಿದ್ದಾರೆ.

ನ್ಯಾಯಮೂರ್ತಿಗಳಾದ ಪಿ.ಬಿ.ವರೇಲ್ ಮತ್ತು ಎನ್.ಆರ್.ಬೋರ್ಕರ್ ಅವರಿದ್ದ ನ್ಯಾಯಪೀಠದ ಎದುರು ವಾದ ಮಂಡಿಸಿದ ಅರ್ಜಿದಾರರ ಪರ ವಕೀಲರು, ದೂರು ಸಲ್ಲಿಸಿರುವ ವಕೀಲರು ಕ್ರಿಮಿನಲ್ ಕಾನೂನನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದ್ದಾರೆ. ಈ ಹಿಂದೆಯೂ ಹಲವು ಮುಗ್ಧರನ್ನು ಇಂಥ ತಪ್ಪು ದೂರುಗಳ ಮೂಲಕ ತೊಂದರೆಗೆ ಸಿಲುಕಿಸಿದ್ದಾರೆ ಎಂದು ವಾದಿಸಿದರು. ಇನ್ನೊಂದು ದಿನದ ಒಳಗೆ ಅರ್ಜಿದಾರರು ತಮ್ಮ ಪ್ರತಿಕ್ರಿಯೆ ದಾಖಲಿಸಲು ಸೂಚಿಸಬೇಕು. ಇಲ್ಲದಿದ್ದರೆ ಈ ಪ್ರಕರಣವು ವಿನಾಕಾರಣ ಮುಂದಕ್ಕೆ ಹೋಗುತ್ತಿರುತ್ತದೆ ಎಂದು ಹೇಳಿದರು.

ಇದು ಹಿಟ್ ಅಂಡ್ ರನ್​ಗೆ ಸೂಕ್ತ ಉದಾಹರಣೆಯಾಗಿದೆ. ಅವರ ವಾದ ಆಲಿಸಲು ಮತ್ತೊಂದು ಅವಕಾಶ ನೀಡಿದರೆ ನ್ಯಾಯಾಲಯದಲ್ಲಿ ಅವರಿಂದ ನಾಟಕವೇ ನಡೆದುಹೋಗುತ್ತದೆ ಎಂದು ಹೇಳಿದರು. ಸುಪ್ರೀಂಕೋರ್ಟ್​ನಿಂದ ಮಹಿಳೆಯರಿಗೆ ಸಿಕ್ಕಿರುವ ರಕ್ಷಣೆಯನ್ನು ಈ ರೀತಿ ಕೆಲವರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ ವಕೀಲರು ಈ ಪ್ರಕರಣದ ಬಗ್ಗೆ ಶೀಘ್ರ ವಿಚಾರಣೆ ನಡೆಸಬೇಕು ಎಂದು ವಿನಂತಿಸಿದರು. ಆರೋಪಿ ವಕೀಲರು ಇದೀಗ ಮರೈನ್ ಡ್ರೈವ್ ಪೊಲೀಸ್ ಠಾಣೆಗೆ ಹೋಗಿ ಸಹಿಹಾಕಬೇಕಾಗಿದೆ ಎಂದು ಹೇಳಿದರು.

(Mumbai Lawyers request Bombay High Court to initiate CBI investigation against sexual assault case)

ಇದನ್ನೂ ಓದಿ: ಎಲ್​​ಜೆಪಿ ಸಂಸದ ಪ್ರಿನ್ಸ್ ರಾಜ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ ಮಹಿಳೆಯಿಂದ ದೆಹಲಿ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ

ಇದನ್ನೂ ಓದಿ: ವಿವಾಹ ನಂತರ ಬಲವಂತದ ಲೈಂಗಿಕ ಕ್ರಿಯೆ ಕಾನೂನುಬಾಹಿರ ಎಂದು ಹೇಳಲಾಗುವುದಿಲ್ಲ: ಮುಂಬೈ ನ್ಯಾಯಾಲಯ

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ