AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai: ನಿರ್ಮಾಣ ಹಂತದಲ್ಲಿದ್ದ ಲಿಫ್ಟ್​ ಕುಸಿದುಬಿದ್ದು 6 ಮಂದಿ ಸಾವು; ಗುತ್ತಿಗೆದಾರ, ಮೇಲ್ವಿಚಾರಕ ಅರೆಸ್ಟ್​

ಎನ್​​ಎಂ ಜೋಶಿ ಮಾರ್ಗ್​ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದರಲ್ಲಿ ಕೇವಲ ಗುತ್ತಿಗೆದಾರ, ಮೇಲ್ವಿಚಾರಕನ ಪಾತ್ರವಷ್ಟೇ ಅಲ್ಲ, ಇನ್ನೂ ಹಲವರು ಆರೋಪಿಗಳು ಇದ್ದಾರೆ ಎಂದು ತಿಳಿಸಿದ್ದಾರೆ.

Mumbai: ನಿರ್ಮಾಣ ಹಂತದಲ್ಲಿದ್ದ ಲಿಫ್ಟ್​ ಕುಸಿದುಬಿದ್ದು 6 ಮಂದಿ ಸಾವು; ಗುತ್ತಿಗೆದಾರ, ಮೇಲ್ವಿಚಾರಕ ಅರೆಸ್ಟ್​
ಲಿಫ್ಟ್ ಕುಸಿತವಾದ ಕಟ್ಟಡ
TV9 Web
| Edited By: |

Updated on: Jul 25, 2021 | 6:23 PM

Share

ಮುಂಬೈನ ವರ್ಲಿ ಏರಿಯಾದಲ್ಲಿ ನಿರ್ಮಾಣ ಹಂತದಲ್ಲಿರುವ ಲಿಫ್ಟ್​ ಕುಸಿದು ಬಿದ್ದು(Lift Collapse) 6 ಮಂದಿ ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಟ್ಟಡದ ಗುತ್ತಿಗೆದಾರ (Contractor) ಮತ್ತು ಮೇಲ್ವಿಚಾರಕ(Supervisor)ನನ್ನು ಪೊಲೀಸರು ಬಂಧಿಸಿದ್ದಾರೆ. ಲಿಫ್ಟ್​ ನಿರ್ಮಾಣ ಮಾಡುವಾಗ ತೆಗೆದುಕೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ, ಕೆಲಸಗಾರರ ಪ್ರಾಣವನ್ನೇ ಪಣಕ್ಕಿಟ್ಟಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಲಲಿತ್​ ಅಂಬಿಕಾ ಬಿಲ್ಡರ್​ಗಳಿಗೆ ಸೇರಿದ ಸೈಟ್​​ನಲ್ಲಿರುವ ಕಟ್ಟಡದಲ್ಲಿ ನಿರ್ಮಾಣ ಹಂತದಲ್ಲಿದ್ದ ಲಿಫ್ಟ್ ಇಂದು ಬೆಳಗ್ಗೆ ಕುಸಿದಿತ್ತು. ಸ್ಥಳದಲ್ಲೇ ಐವರು ಮೃತಪಟ್ಟಿದ್ದು, ಇನ್ನೊಬ್ಬಾತ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರೂ ಸಹ ಇದೀಗ ಸಾವನ್ನಪ್ಪಿದ್ದಾರೆ. ಮೃತರದನ್ನು ಚಿನ್ಮಯ್​ ಆನಂದ್​ ಮಂಡಲ್​, ಭಾರತ್ ಆನಂದ್​ ಮಂಡಲ್​, ಅನಿಲ್​ಕುಮಾರ್​ ನಂದಲಾಲ್ ಯಾದವ್​, ಅವಿನಾಶ್​ ದಾಸ್​, ಅಭಯ್​ ಮಿಸ್ಟ್ರಿ ಯಾದವ್​, ಲಕ್ಷ್ಮಣ್​ ಮಂಡಲ್​​ ಎಂದು ಗುರುತಿಸಲಾಗಿದೆ. ಇವರೆಲ್ಲ 30 ರಿಂದ 35 ವರ್ಷದ ಆಸುಪಾಸಿನವರೇ ಆಗಿದ್ದಾರೆ.

ಎನ್​​ಎಂ ಜೋಶಿ ಮಾರ್ಗ್​ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದರಲ್ಲಿ ಕೇವಲ ಗುತ್ತಿಗೆದಾರ, ಮೇಲ್ವಿಚಾರಕನ ಪಾತ್ರವಷ್ಟೇ ಅಲ್ಲ, ಇನ್ನೂ ಹಲವರು ಆರೋಪಿಗಳು ಇದ್ದು, ಅವರನ್ನೆಲ್ಲ ಶೀಘ್ರವೇ ಬಂಧಿಸುತ್ತೇವೆ ಎಂದೂ ಪೊಲೀಸರು ಹೇಳಿದ್ದಾರೆ.

ಘಟನೆ ನಡೆದದ್ದು ಹೇಗೆ? ನಿರ್ಮಾಣ ಹಂತದಲ್ಲಿದ್ದ ಲಿಫ್ಟ್​ನ 9ನೇ ಫ್ಲೋರ್​ನಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಅದು ಕುಸಿದಿದೆ. ಕಳಪೆ ಕಾಮಗಾರಿಯೇ ಲಿಫ್ಟ್ ಕುಸಿಯಲು ಕಾರಣ ಎಂದು ಹೇಳಲಾಗಿದೆ. ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವಿಚಾರದಲ್ಲಿ ಸೂಕ್ತ ತನಿಖೆ ನಡೆಸಲು ಪೊಲೀಸರಿಗೆ ಹೇಳಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಫಿನಾಲೆಗೂ ಮೊದಲೇ ರಘು ಗೌಡ-ರಾಜೀವ್ ಅಭಿಮಾನಿಗಳಿಗೆ ಗುಡ್ ನ್ಯೂಸ್​

Karnataka Rains: ದಾವಣಗೆರೆ ಜಿಲ್ಲೆಯಲ್ಲಿ ನಿಲ್ಲದ ಪ್ರವಾಹ: ಸಾಲಬಾಳು-ಗಂಜೇನಹಳ್ಳಿ ನಡುವೆ ಸಂಪರ್ಕ ಕಡಿತ

Mumbai lift collapse 6 People Died and contractor supervisor arrested

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?