AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai: ನಿರ್ಮಾಣ ಹಂತದಲ್ಲಿದ್ದ ಲಿಫ್ಟ್​ ಕುಸಿದುಬಿದ್ದು 6 ಮಂದಿ ಸಾವು; ಗುತ್ತಿಗೆದಾರ, ಮೇಲ್ವಿಚಾರಕ ಅರೆಸ್ಟ್​

ಎನ್​​ಎಂ ಜೋಶಿ ಮಾರ್ಗ್​ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದರಲ್ಲಿ ಕೇವಲ ಗುತ್ತಿಗೆದಾರ, ಮೇಲ್ವಿಚಾರಕನ ಪಾತ್ರವಷ್ಟೇ ಅಲ್ಲ, ಇನ್ನೂ ಹಲವರು ಆರೋಪಿಗಳು ಇದ್ದಾರೆ ಎಂದು ತಿಳಿಸಿದ್ದಾರೆ.

Mumbai: ನಿರ್ಮಾಣ ಹಂತದಲ್ಲಿದ್ದ ಲಿಫ್ಟ್​ ಕುಸಿದುಬಿದ್ದು 6 ಮಂದಿ ಸಾವು; ಗುತ್ತಿಗೆದಾರ, ಮೇಲ್ವಿಚಾರಕ ಅರೆಸ್ಟ್​
ಲಿಫ್ಟ್ ಕುಸಿತವಾದ ಕಟ್ಟಡ
TV9 Web
| Edited By: |

Updated on: Jul 25, 2021 | 6:23 PM

Share

ಮುಂಬೈನ ವರ್ಲಿ ಏರಿಯಾದಲ್ಲಿ ನಿರ್ಮಾಣ ಹಂತದಲ್ಲಿರುವ ಲಿಫ್ಟ್​ ಕುಸಿದು ಬಿದ್ದು(Lift Collapse) 6 ಮಂದಿ ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಟ್ಟಡದ ಗುತ್ತಿಗೆದಾರ (Contractor) ಮತ್ತು ಮೇಲ್ವಿಚಾರಕ(Supervisor)ನನ್ನು ಪೊಲೀಸರು ಬಂಧಿಸಿದ್ದಾರೆ. ಲಿಫ್ಟ್​ ನಿರ್ಮಾಣ ಮಾಡುವಾಗ ತೆಗೆದುಕೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ, ಕೆಲಸಗಾರರ ಪ್ರಾಣವನ್ನೇ ಪಣಕ್ಕಿಟ್ಟಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಲಲಿತ್​ ಅಂಬಿಕಾ ಬಿಲ್ಡರ್​ಗಳಿಗೆ ಸೇರಿದ ಸೈಟ್​​ನಲ್ಲಿರುವ ಕಟ್ಟಡದಲ್ಲಿ ನಿರ್ಮಾಣ ಹಂತದಲ್ಲಿದ್ದ ಲಿಫ್ಟ್ ಇಂದು ಬೆಳಗ್ಗೆ ಕುಸಿದಿತ್ತು. ಸ್ಥಳದಲ್ಲೇ ಐವರು ಮೃತಪಟ್ಟಿದ್ದು, ಇನ್ನೊಬ್ಬಾತ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರೂ ಸಹ ಇದೀಗ ಸಾವನ್ನಪ್ಪಿದ್ದಾರೆ. ಮೃತರದನ್ನು ಚಿನ್ಮಯ್​ ಆನಂದ್​ ಮಂಡಲ್​, ಭಾರತ್ ಆನಂದ್​ ಮಂಡಲ್​, ಅನಿಲ್​ಕುಮಾರ್​ ನಂದಲಾಲ್ ಯಾದವ್​, ಅವಿನಾಶ್​ ದಾಸ್​, ಅಭಯ್​ ಮಿಸ್ಟ್ರಿ ಯಾದವ್​, ಲಕ್ಷ್ಮಣ್​ ಮಂಡಲ್​​ ಎಂದು ಗುರುತಿಸಲಾಗಿದೆ. ಇವರೆಲ್ಲ 30 ರಿಂದ 35 ವರ್ಷದ ಆಸುಪಾಸಿನವರೇ ಆಗಿದ್ದಾರೆ.

ಎನ್​​ಎಂ ಜೋಶಿ ಮಾರ್ಗ್​ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದರಲ್ಲಿ ಕೇವಲ ಗುತ್ತಿಗೆದಾರ, ಮೇಲ್ವಿಚಾರಕನ ಪಾತ್ರವಷ್ಟೇ ಅಲ್ಲ, ಇನ್ನೂ ಹಲವರು ಆರೋಪಿಗಳು ಇದ್ದು, ಅವರನ್ನೆಲ್ಲ ಶೀಘ್ರವೇ ಬಂಧಿಸುತ್ತೇವೆ ಎಂದೂ ಪೊಲೀಸರು ಹೇಳಿದ್ದಾರೆ.

ಘಟನೆ ನಡೆದದ್ದು ಹೇಗೆ? ನಿರ್ಮಾಣ ಹಂತದಲ್ಲಿದ್ದ ಲಿಫ್ಟ್​ನ 9ನೇ ಫ್ಲೋರ್​ನಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಅದು ಕುಸಿದಿದೆ. ಕಳಪೆ ಕಾಮಗಾರಿಯೇ ಲಿಫ್ಟ್ ಕುಸಿಯಲು ಕಾರಣ ಎಂದು ಹೇಳಲಾಗಿದೆ. ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವಿಚಾರದಲ್ಲಿ ಸೂಕ್ತ ತನಿಖೆ ನಡೆಸಲು ಪೊಲೀಸರಿಗೆ ಹೇಳಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಫಿನಾಲೆಗೂ ಮೊದಲೇ ರಘು ಗೌಡ-ರಾಜೀವ್ ಅಭಿಮಾನಿಗಳಿಗೆ ಗುಡ್ ನ್ಯೂಸ್​

Karnataka Rains: ದಾವಣಗೆರೆ ಜಿಲ್ಲೆಯಲ್ಲಿ ನಿಲ್ಲದ ಪ್ರವಾಹ: ಸಾಲಬಾಳು-ಗಂಜೇನಹಳ್ಳಿ ನಡುವೆ ಸಂಪರ್ಕ ಕಡಿತ

Mumbai lift collapse 6 People Died and contractor supervisor arrested

Follow Us
Web contact
Web contact

TV9 Kannada

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ