AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai: ಮುಂಬ್ರಾ ನಿಲ್ದಾಣದಲ್ಲಿ ಟ್ರ್ಯಾಕ್ ಬಿಟ್ಟು ಪ್ಲಾಟ್​ಫಾರಂಗೆ ಗುದ್ದಿದ ರೈಲು

ಮುಂಬೈ ಲೋಕಲ್ ರೈಲೊಂದು ಥಾಣೆಯ ಮುಂಬ್ರಾ ನಿಲ್ದಾಣದಲ್ಲಿ ಟ್ರ್ಯಾಕ್​ ಬಿಟ್ಟು ಪ್ಲಾಟ್​ಫಾರಂಗೆ ಡಿಕ್ಕಿ ಹೊಡೆದಿದೆ. ಮುಂಬ್ರಾ ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್‌ನ ಅಂಚಿಗೆ ಬಡಿದ ಪರಿಣಾಮ ರೈಲುಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು.

Mumbai: ಮುಂಬ್ರಾ ನಿಲ್ದಾಣದಲ್ಲಿ ಟ್ರ್ಯಾಕ್ ಬಿಟ್ಟು ಪ್ಲಾಟ್​ಫಾರಂಗೆ ಗುದ್ದಿದ ರೈಲು
ರೈಲುImage Credit source: Mid-Day.com
ನಯನಾ ರಾಜೀವ್
|

Updated on: Jul 06, 2023 | 7:47 AM

Share

ಮುಂಬೈ ಲೋಕಲ್ ರೈಲೊಂದು ಥಾಣೆಯ ಮುಂಬ್ರಾ ನಿಲ್ದಾಣದಲ್ಲಿ ಟ್ರ್ಯಾಕ್​ ಬಿಟ್ಟು ಪ್ಲಾಟ್​ಫಾರಂಗೆ ಡಿಕ್ಕಿ ಹೊಡೆದಿದೆ. ಮುಂಬ್ರಾ ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್‌ನ ಅಂಚಿಗೆ ಬಡಿದ ಪರಿಣಾಮ ರೈಲುಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಿಂದ (ಸಿಎಸ್‌ಎಂಟಿ) ಪ್ರಯಾಣ ಆರಂಭಿಸಿದ ರೈಲು ಮುಂಬ್ರಾ ನಿಲ್ದಾಣಕ್ಕೆ ಆಗಮಿಸುತ್ತಿದ್ದಾಗ ಈ ಘಟನೆ ನಡೆದಿದೆ. ಯಾರಿಗೂ ಯಾವುದೇ ರೀತಿಯ ಅಪಾಯವಾಗಿಲ್ಲ.

ಪಿಟಿಐ ಜೊತೆ ಮಾತನಾಡಿದ ಸೆಂಟ್ರಲ್ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಶಿವರಾಜ್ ಮನಸ್ಪುರೆ, ರಾತ್ರಿ 9.20 ರ ಸುಮಾರಿಗೆ ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 1 ಕ್ಕೆ ರೈಲು ನಿಧಾನವಾಗಿ ಆಗಮಿಸುತ್ತಿದ್ದಾಗ ಈ ಘಟನೆ ನಡೆದಿದೆ.

ಮತ್ತಷ್ಟು ಓದಿ: Odisha Train Accident: ಒಡಿಶಾ ರೈಲು ದುರಂತದಲ್ಲಿ ಬೆಂಗಳೂರಿನ ಹೊಟೇಲ್ ಕಾರ್ಮಿಕ ಸಾವು

ಪ್ಲಾಟ್​ಫಾರಂಗೆ ರೈಲು ತಗುಲುತ್ತಿದ್ದಂತೆಯೇ ರೈಲನ್ನು ನಿಲ್ಲಿಸಲಾಗಿತ್ತು. ರೈಲು ಹಳಿತಪ್ಪಿಲ್ಲ ಎಂದು ಕೇಂದ್ರ ರೈಲ್ವೆ ಸ್ಪಷ್ಟಪಡಿಸಿದೆ. ಹಲವು ರೈಲುಗಳ ಸಂಚಾರವನ್ನು ಕೆಲಕಾಲ ಸ್ಥಗಿತಗೊಳಿಸಲಾಯಿತು ಹೀಗಾಗಿ ಪ್ಲಾಟ್​ಫಾರಂನಲ್ಲಿ ಜನಸಂದಣಿ ಹೆಚ್ಚಾಗಿತ್ತು.

ಇತ್ತೀಚೆಗಷ್ಟೇ ಒಡಿಶಾದ ಬಾಲಸೋರ್​ನಲ್ಲಿ ತ್ರಿವಳಿ ರೈಲು ಅಪಘಾತ ಸಂಭವಿಸಿತ್ತು, ನೂರಾರು ಮಂದಿ ಇದರಲ್ಲಿ ಪ್ರಾಣ ಕಳೆದುಕೊಂಡಿದ್ದರು. ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ