Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ಚಲಿಸುತ್ತಿದ್ದ ರೈಲಿನಿಂದ ಮಹಿಳೆಯನ್ನು ತಳ್ಳಿದ್ದ ವ್ಯಕ್ತಿಯ ಬಂಧನ

ಮುಂಬೈನ ಜನನಿಬಿಡ ದಾದರ್ ರೈಲು ನಿಲ್ದಾಣದಲ್ಲಿ ಮಹಿಳೆಯನ್ನು ಚಲಿಸುತ್ತಿರುವ ರೈಲಿನಿಂದ ತಳ್ಳಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮುಂಬೈನಲ್ಲಿ ಚಲಿಸುತ್ತಿದ್ದ ರೈಲಿನಿಂದ ಮಹಿಳೆಯನ್ನು ತಳ್ಳಿದ್ದ ವ್ಯಕ್ತಿಯ ಬಂಧನ
ರೈಲು
Follow us
ನಯನಾ ರಾಜೀವ್
|

Updated on: Aug 08, 2023 | 9:47 AM

ಮುಂಬೈನ ಜನನಿಬಿಡ ದಾದರ್ ರೈಲು ನಿಲ್ದಾಣದಲ್ಲಿ ಮಹಿಳೆಯನ್ನು ಚಲಿಸುತ್ತಿರುವ ರೈಲಿನಿಂದ ತಳ್ಳಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆತ ರೈಲಿನಲ್ಲಿ ದರೋಡೆ ಮಾಡುವ ಯೋಜನೆ ರೂಪಿಸಿದ್ದ, ಆದರೆ ಕದ್ದು ಇನ್ನೇನು ಓಡಬೇಕು ಎನ್ನುವಷ್ಟರಲ್ಲಿ ಮಹಿಳೆ ಆತನನ್ನು ತಡೆದಿದ್ದರು, ಆಗ ಆತ ಮಹಿಳೆಯನ್ನು ರೈಲಿನಿಂದ ತಳ್ಳಿ ತಾನು ಪರಾರಿಯಾಗಿದ್ದ.

ಬೆಂಗಳೂರು-ಮುಂಬೈ ಸಿಎಸ್‌ಎಂಟಿ ಉದ್ಯಾನ್ ಎಕ್ಸ್‌ಪ್ರೆಸ್‌ನಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರೈಲು ದಾದರ್‌ನಿಂದ ರಾತ್ರಿ 8.30 ರ ಸುಮಾರಿಗೆ ಹೊರಡುತ್ತಿರುವಾಗ, ಒಬ್ಬ ವ್ಯಕ್ತಿ ಕೆಲವು ಪ್ರಯಾಣಿಕರನ್ನು ಹೊಂದಿದ್ದ ಕಾಯ್ದಿರಿಸದ ಮಹಿಳಾ ಕಂಪಾರ್ಟ್‌ಮೆಂಟ್‌ಗೆ ಬಂದಿದ್ದ. ಆತ ಮಹಿಳೆಗೆ ಕಿರುಕುಳ ನೀಡಿ ನಗದು ಇದ್ದ ನೀಲಿ ಬಣ್ಣದ ಬ್ಯಾಗ್ ಅನ್ನು ಕಸಿದುಕೊಂಡಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕಲಬುರಗಿ-ಬೀದರ್​ ಪ್ಯಾಸೆಂಜರ್ ರೈಲಿನ ಮೇಲೆ ಕಲ್ಲು ತೂರಾಟ; ಓರ್ವ ಮಹಿಳೆಗೆ ಗಾಯ

ಸಂತ್ರಸ್ತೆ ಆತನ ದರೋಡೆ ಯತ್ನವನ್ನು ವಿರೋಧಿಸಿದ್ದರಿಂದ ಆರೋಪಿಯು ಮಹಿಳೆಯನ್ನು ಕಂಪಾರ್ಟ್‌ಮೆಂಟ್‌ನಿಂದ ಹೊರಕ್ಕೆ ತಳ್ಳಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ಬಗ್ಗೆ ಹೆಚ್ಚಿನ ವಿಷಯಗಳು ಲಭ್ಯವಾಗಿಲ್ಲ

ಸಂತ್ರಸ್ತೆಯ ಕಡೆಯವರು ದೂರು ದಾಖಲಿಸಿದ್ದಾರೆ ಎಂದು ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ತಿಳಿಸಿದ್ದಾರೆ. ಔಪಚಾರಿಕ ಎಫ್‌ಐಆರ್ ದಾಖಲಿಸುವ ಮೊದಲೇ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರು, ಕೊಲೆ ಯತ್ನ ಮತ್ತು ದರೋಡೆ ಮಾಡುವ ಪ್ರಯತ್ನದಲ್ಲಿ ನೋವುಂಟು ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!