AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಮಲಾಡ್ ಕೊಳೆಗೇರಿಯಲ್ಲಿ ಅಗ್ನಿ ಅವಘಡ, ಆವರಿಸಿದ ದಟ್ಟ ಹೊಗೆ; ಕೇಳಿ ಬಂತು ಸ್ಫೋಟದ ಸದ್ದು

ಸಂಜೆ 4.52 ರ ಸುಮಾರಿಗೆ ಆನಂದ್ ನಗರದಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಅಗ್ನಿಶಾಮಕ ಅಧಿಕಾರಿಗಳು ಮೊದಲ ಕರೆಯನ್ನು ಸ್ವೀಕರಿಸಿದರು, ಇದನ್ನು ಬೃಹನ್‌ಮುಂಬೈ ಮುನಿಪಿಕಲ್ ಕಾರ್ಪೊರೇಷನ್ (ಬಿಎಂಸಿ) ಹಂತ 1 ಎಂದು ಘೋಷಿಸಿತು.

ರಶ್ಮಿ ಕಲ್ಲಕಟ್ಟ
| Updated By: ಅಕ್ಷಯ್​ ಪಲ್ಲಮಜಲು​​|

Updated on:Mar 13, 2023 | 6:39 PM

Share

ಮುಂಬೈನ ಮಲಾಡ್ ಪೂರ್ವದ (Malad East)ಕೊಳೆಗೇರಿ (Slum) ಪ್ರದೇಶದಲ್ಲಿ ಎರಡು ಪ್ರಮುಖ ಬೆಂಕಿ ಕಾಣಿಸಿಕೊಂಡಿದ್ದು, ಒಂದನ್ನು ಹಂತ-3 ಎಂದು ಘೋಷಿಸಲಾಗಿದೆ. ಮಲಾಡ್ ಪೂರ್ವದ ಆನಂದ್ ನಗರ ಮತ್ತು ಅಪ್ಪಾಪಾಡಾ ಪ್ರದೇಶಗಳಿಂದ ಹೊಗೆ ಬರುತ್ತಿರುವ ವಿಡಿಯೊಗಳನ್ನು ನೆಟ್ಟಿಗರು ಟ್ವೀಟ್ ಮಾಡಿದ್ದಾರೆ. ಸಂಜೆ 4.52 ರ ಸುಮಾರಿಗೆ ಆನಂದ್ ನಗರದಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಅಗ್ನಿಶಾಮಕ ಅಧಿಕಾರಿಗಳು ಮೊದಲ ಕರೆಯನ್ನು ಸ್ವೀಕರಿಸಿದರು, ಇದನ್ನು ಬೃಹನ್‌ಮುಂಬೈ ಮುನಿಪಿಕಲ್ ಕಾರ್ಪೊರೇಷನ್ (BMC) ಹಂತ 1 ಎಂದು ಘೋಷಿಸಿತ್ತು. ನಂತರ ಅದನ್ನು 2 ನೇ ಹಂತಕ್ಕೆ ಎಂದು ಹೇಳಿದೆ.

ಇಲ್ಲಿಯವರೆಗೆ ಯಾವುದೇ ಸಾವು ನೋವು ವರದಿ ಆಗಿಲ್ಲ.

ಇದಕ್ಕಿಂತ ಮುಂಚೆ ಜೋಗೇಶ್ವರಿ (ಪಶ್ಚಿಮ) ದ ರಿಲೀಫ್ ರಸ್ತೆಯಲ್ಲಿರುವ ಪೆಟ್ರೋಲ್ ಪಂಪ್ ಎದುರು ಘಾಸ್ ಕಾಂಪೌಂಡ್‌ನಲ್ಲಿರುವ ಪೀಠೋಪಕರಣಗಳ ಗೋಡೌನ್‌ನಲ್ಲಿ ಬೆಳಿಗ್ಗೆ 11.00 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತು.ಜೋಗೇಶ್ವರಿಯಲ್ಲಿ ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸಿವೆ.

ಅಗ್ನಿಶಾಮಕ ದಳದ ಅಧಿಕಾರಿಗಳ ಪ್ರಕಾರ, 3 ನೇ ಹಂತದ ಬೆಂಕಿ  ಬೆಳಿಗ್ಗೆ 11.21 ಕ್ಕೆ ವರದಿಯಾಗಿದೆ.

“ಫರ್ನಿಚರ್ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮುಂಬೈ ಅಗ್ನಿಶಾಮಕ ದಳವರದಿ ಮಾಡಿದೆ. ಘಟನೆಯಲ್ಲಿ ಯಾವುದೇ ಗಾಯಗಳು ವರದಿಯಾಗಿಲ್ಲ” ಎಂದು ಬಿಎಂಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:15 pm, Mon, 13 March 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?