AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಮಲಾಡ್ ಕೊಳೆಗೇರಿಯಲ್ಲಿ ಅಗ್ನಿ ಅವಘಡ, ಆವರಿಸಿದ ದಟ್ಟ ಹೊಗೆ; ಕೇಳಿ ಬಂತು ಸ್ಫೋಟದ ಸದ್ದು

ಸಂಜೆ 4.52 ರ ಸುಮಾರಿಗೆ ಆನಂದ್ ನಗರದಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಅಗ್ನಿಶಾಮಕ ಅಧಿಕಾರಿಗಳು ಮೊದಲ ಕರೆಯನ್ನು ಸ್ವೀಕರಿಸಿದರು, ಇದನ್ನು ಬೃಹನ್‌ಮುಂಬೈ ಮುನಿಪಿಕಲ್ ಕಾರ್ಪೊರೇಷನ್ (ಬಿಎಂಸಿ) ಹಂತ 1 ಎಂದು ಘೋಷಿಸಿತು.

ರಶ್ಮಿ ಕಲ್ಲಕಟ್ಟ
| Edited By: |

Updated on:Mar 13, 2023 | 6:39 PM

Share

ಮುಂಬೈನ ಮಲಾಡ್ ಪೂರ್ವದ (Malad East)ಕೊಳೆಗೇರಿ (Slum) ಪ್ರದೇಶದಲ್ಲಿ ಎರಡು ಪ್ರಮುಖ ಬೆಂಕಿ ಕಾಣಿಸಿಕೊಂಡಿದ್ದು, ಒಂದನ್ನು ಹಂತ-3 ಎಂದು ಘೋಷಿಸಲಾಗಿದೆ. ಮಲಾಡ್ ಪೂರ್ವದ ಆನಂದ್ ನಗರ ಮತ್ತು ಅಪ್ಪಾಪಾಡಾ ಪ್ರದೇಶಗಳಿಂದ ಹೊಗೆ ಬರುತ್ತಿರುವ ವಿಡಿಯೊಗಳನ್ನು ನೆಟ್ಟಿಗರು ಟ್ವೀಟ್ ಮಾಡಿದ್ದಾರೆ. ಸಂಜೆ 4.52 ರ ಸುಮಾರಿಗೆ ಆನಂದ್ ನಗರದಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಅಗ್ನಿಶಾಮಕ ಅಧಿಕಾರಿಗಳು ಮೊದಲ ಕರೆಯನ್ನು ಸ್ವೀಕರಿಸಿದರು, ಇದನ್ನು ಬೃಹನ್‌ಮುಂಬೈ ಮುನಿಪಿಕಲ್ ಕಾರ್ಪೊರೇಷನ್ (BMC) ಹಂತ 1 ಎಂದು ಘೋಷಿಸಿತ್ತು. ನಂತರ ಅದನ್ನು 2 ನೇ ಹಂತಕ್ಕೆ ಎಂದು ಹೇಳಿದೆ.

ಇಲ್ಲಿಯವರೆಗೆ ಯಾವುದೇ ಸಾವು ನೋವು ವರದಿ ಆಗಿಲ್ಲ.

ಇದಕ್ಕಿಂತ ಮುಂಚೆ ಜೋಗೇಶ್ವರಿ (ಪಶ್ಚಿಮ) ದ ರಿಲೀಫ್ ರಸ್ತೆಯಲ್ಲಿರುವ ಪೆಟ್ರೋಲ್ ಪಂಪ್ ಎದುರು ಘಾಸ್ ಕಾಂಪೌಂಡ್‌ನಲ್ಲಿರುವ ಪೀಠೋಪಕರಣಗಳ ಗೋಡೌನ್‌ನಲ್ಲಿ ಬೆಳಿಗ್ಗೆ 11.00 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತು.ಜೋಗೇಶ್ವರಿಯಲ್ಲಿ ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸಿವೆ.

ಅಗ್ನಿಶಾಮಕ ದಳದ ಅಧಿಕಾರಿಗಳ ಪ್ರಕಾರ, 3 ನೇ ಹಂತದ ಬೆಂಕಿ  ಬೆಳಿಗ್ಗೆ 11.21 ಕ್ಕೆ ವರದಿಯಾಗಿದೆ.

“ಫರ್ನಿಚರ್ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮುಂಬೈ ಅಗ್ನಿಶಾಮಕ ದಳವರದಿ ಮಾಡಿದೆ. ಘಟನೆಯಲ್ಲಿ ಯಾವುದೇ ಗಾಯಗಳು ವರದಿಯಾಗಿಲ್ಲ” ಎಂದು ಬಿಎಂಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:15 pm, Mon, 13 March 23

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ