AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Corona Virus: ಮಹಾರಾಷ್ಟ್ರದಲ್ಲಿ ಮತ್ತೆ ಚುರುಕುಗೊಂಡ ಕೊರೊನಾ: ಲಾಕ್​ಡೌನ್​ ಸೂಚನೆ ನೀಡಿದ ಮುಂಬೈ ಮೇಯರ್​

ನೀವು ಕೊವಿಡ್​ ನಿಯಮ ಪಾಲನೆ ಮಾಡದೆ ಕೊರೊನಾ ಕೇಸ್​ಗಳ ಸಂಖ್ಯೆ ಹೆಚ್ಚುತ್ತಾ ಹೋದರೆ ಲಾಕ್​ಡೌನ್​ ಘೋಷಣೆ ಮಾಡಬೇಕಾಗುತ್ತದೆ ಎನ್ನುವ ಎಚ್ಚರಿಕೆ ನೀಡಲಾಗಿದೆ.

Corona Virus: ಮಹಾರಾಷ್ಟ್ರದಲ್ಲಿ ಮತ್ತೆ ಚುರುಕುಗೊಂಡ ಕೊರೊನಾ: ಲಾಕ್​ಡೌನ್​ ಸೂಚನೆ ನೀಡಿದ ಮುಂಬೈ ಮೇಯರ್​
ರಾಜೇಶ್ ದುಗ್ಗುಮನೆ
|

Updated on: Feb 20, 2021 | 8:33 PM

Share

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ ಎನ್ನುವಾಗಲೇ ಮತ್ತೆ ಪಾಸಿಟಿವ್​ ಕೇಸ್​ಗಳ ಸಂಖ್ಯೆ ಹೆಚ್ಚಾಗಿದೆ. ಆದಾಗ್ಯೂ, ಜನರು ಕೊರೊನಾ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರಿದರೆ ಮುಂಬೈನಲ್ಲಿ ಮತ್ತೆ ಲಾಕ್​ಡೌನ್​ ಘೋಷಣೆ ಮಾಡಬೇಕಾಗುತ್ತದೆ ಎಂದು ಮುಂಬೈ ಮೇಯರ್​ ಕಿಶೋರಿ ಪಡ್ನೇಕರ್​ ಎಚ್ಚರಿಕೆ ನೀಡಿದ್ದಾರೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ಸಾಕಷ್ಟು ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಸೂಚಿಸಲಾಗಿದೆ. ಕೊವಿಡ್​ ನಿಯಮದನ್ವಯ, ಮಾಸ್ಕ್​ ಹಾಕುವುದು ಕಡ್ಡಾಯವಾದರೆ, ಗುಂಪು ಸೇರುವುದರ ಮೇಲೆ ನಿಷೇಧ ಹೇರಲಾಗಿದೆ. ಆದಾಗ್ಯೂ, ಜನರು ನಿಯಮವನ್ನು ಪಾಲನೆ ಮಾಡುತ್ತಿಲ್ಲ. ಹೀಗಾಗಿ, ಕಟ್ಟುನಿಟ್ಟಾಗಿ ಕೊರೊನಾ ನಿಯಮ ಪಾಲನೆ ಸೂಚಿಸಲಾಗಿದೆ.

ನೀವು ಕೊವಿಡ್​ ನಿಯಮ ಪಾಲನೆ ಮಾಡದೆ ಕೊರೊನಾ ಕೇಸ್​ಗಳ ಸಂಖ್ಯೆ ಹೆಚ್ಚುತ್ತಾ ಹೋದರೆ ಲಾಕ್​ಡೌನ್​ ಘೋಷಣೆ ಮಾಡಬೇಕಾಗುತ್ತದೆ. ಇದನ್ನು ತಪ್ಪಿಸಬೇಕಾದರೆ ನೀವು ನಿಯಮ ಪಾಲನೆ ಮಾಡಿ ಎಂದು ಕಿಶೋರಿ ಹೇಳಿದ್ದಾರೆ.

ಮುಂಬೈನಲ್ಲಿ ಕೊರೊನಾ ಮಿತಿಮೀರಿ ಏರಿಕೆ ಕಾಣುತ್ತಿದ್ದು, ಪರಿಸ್ಥಿತಿ ತುಂಬಾನೇ ಗಂಭೀರವಾಗಿದೆ. ನಾವು ಅದಕ್ಕೆ ಬೇಕಿರುವ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ಶೀಘ್ರವೇ ಕೊರೊನಾ ನಿಯಂತ್ರಣಕ್ಕೆ ಬರುವ ವಿಶ್ವಾಸವಿದೆ. ಇದಕ್ಕೆ ಜನರ ಸಹಕಾರ ಕೂಡ ಅಗತ್ಯ ಎಂದು ಕಿಶೋರಿ ಮನವಿ ಮಾಡಿದ್ದಾರೆ.

ಕೊರೊನಾ ವೈರಸ್​ ದೇಶದಲ್ಲಿ ಕಾಲಿಟ್ಟಾಗಿನಿಂದಲೂ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪಾಸಿಟಿವ್​ ಪ್ರಕರಣಗಳು ದಾಖಲಾಗುತ್ತಿವೆ. ಶುಕ್ರವಾರ ಮಹಾರಾಷ್ಟ್ರದಲ್ಲಿ, 6,112 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದೆ. 44 ಜನರು ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ ಸಾಕಷ್ಟು ರೂಪಾಂತರಿ ವೈರಸ್​ಗಳು ಕೂಡ ಪತ್ತೆ ಆಗಿವೆ.

ಕೊರೊನಾ ಪ್ರಕರಣಗಳ ಸಂಖ್ಯೆ ಇತ್ತೀಚೆಗೆ ನಿಧಾನವಾಗಿ ಕಡಿಮೆ ಆಗುತ್ತಾ ಬಂದಿತ್ತು. ಆದರೆ, ಈಗ ಮತ್ತೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಕೇರಳ, ಮಹಾರಾಷ್ಟ್ರ, ಪಂಜಾಬ್​, ಛತ್ತೀಸ್​​ಗಢ ಹಾಗೂ ಮಧ್ಯಪ್ರದೇಶದಲ್ಲಿ ಕೊರೊನಾ ಕೇಸ್​ ಹೆಚ್ಚುತ್ತಿದೆ.

ಇದನ್ನೂ ಓದಿ: ಕರ್ನಾಟಕಕ್ಕೆ ಕೊರೊನಾ ‘ಮಹಾ‘ತಂಕ, ಅಪಾಯದಿಂದ ಪಾರಾಗಲು ಹೊಸ ನಿಯಮಾವಳಿ ಜಾರಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ