AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಸಿಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಸೋರಿಕೆ: 22 ಕೊವಿಡ್ ರೋಗಿಗಳ ದುರ್ಮರಣ

ಆಸ್ಪತ್ರೆಯಲ್ಲಿ 150ಕ್ಕೂ ಹೆಚ್ಚು ರೋಗಿಗಳು ವೆಂಟಿಲೇಟರ್​ನ ಸಹಾಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರಲ್ಲಿ 22 ರೋಗಿಗಳು ಮೃತಪಟ್ಟಿದ್ದಾರೆ. ಮೃತಪಟ್ಟ ರೋಗಿಗಳು ಕೊವಿಡ್ ಸೋಂಕಿನ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಎನ್​ಡಿಟಿವಿ ಜಾಲತಾಣ ವರದಿ ಮಾಡಿದೆ. 

ನಾಸಿಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಸೋರಿಕೆ: 22 ಕೊವಿಡ್ ರೋಗಿಗಳ ದುರ್ಮರಣ
ಆಸ್ಪತ್ರೆಯ ದೃಶ್ಯ
guruganesh bhat
| Edited By: |

Updated on:Apr 21, 2021 | 3:32 PM

Share

ಮುಂಬೈ: ಮಹಾರಾಷ್ಟ್ರದ ನಾಸಿಕ್​ನ ಝಾಕಿತ್ ಹುಸೇನ್ ಆಸ್ಪತ್ರೆಯ ಹೊರಭಾಗದಲ್ಲಿ ಆಕ್ಸಿಜನ್ ಟ್ಯಾಂಕರ್​ ಸೋರಿಕೆಯಾಗಿ ಅರ್ಧ ಘಂಟೆಗಳ ಕಾಲ ಆಮ್ಲಜನಕ ಸರಬರಾಜು ನಿಂತ ಕಾರಣ ಆಸ್ಪತ್ರೆಯಲ್ಲಿ ದಾಖಲಾಗಿದ್ದ  22 ರೋಗಿಗಳು ಮೃತಪಟ್ಟ ಘಟನೆ ಇಂದು ನಡೆದಿದೆ. ಆಮ್ಲಜನಕದ ಸರಬರಾಜು ನಿಲುಗಡೆಯಾದ ಕಾರಣ ರೋಗಿಗಳ ಸಂಬಂಧಿಕರು ಕಂಗಾಲಾದರು. ಆಸ್ಪತ್ರೆಯಲ್ಲಿ 150ಕ್ಕೂ ಹೆಚ್ಚು ರೋಗಿಗಳು ವೆಂಟಿಲೇಟರ್​ನ ಸಹಾಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರಲ್ಲಿ 22 ರೋಗಿಗಳು ಮೃತಪಟ್ಟಿದ್ದಾರೆ. ಮೃತಪಟ್ಟ ರೋಗಿಗಳು ಕೊವಿಡ್ ಸೋಂಕಿನ ಚಿಕಿತ್ಸೆ ಪಡೆಯುತ್ತಿದ್ದರು.  

ಮಹಾರಾಷ್ಟ್ರ ಸರ್ಕಾರದ ಗೃಹ ಸಚಿವ ರಾಜೇಶ್ ಟೋಪೆ ಘಟನೆಯ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ‘ಈ ದುರ್ಘಟನೆಯನ್ನು ಮಹಾರಾಷ್ಟ್ರ ಸರ್ಕಾರ ಗಂಭಿರವಾಗಿ ಪರಿಗಣಿಸಿದೆ. ಘಟನೆಯ ಕುರಿತು ಸೂಕ್ತ ತನಿಖೆ ನಡೆಸಲು ವಿಶೇಷ ತಂಡ ರಚಿಸಲಾಗುವುದು’ ಎಂದು ತಿಳಿಸಿದ್ದಾರೆ.

ಟ್ಯಾಂಕರ್​ನಿಂದ ಸೋರಿಕೆಯಾದ ಆಮ್ಲಜನಕ ಸುತ್ತಮುತ್ತಲಿನ ವಾತಾವರಣದಲ್ಲಿ ಹರಡರುವುದನ್ನು ಕಂಡು ಆಸ್ಪತ್ರೆಯ ಸುತ್ತ ನೆರೆದಿದ್ದ ಜನರು, ರೋಗಿಗಳ ಸಂಬಂಧಿಕರು ಗಾಬರಿಗೊಳಗಾದರು. ನೀರು ಚಿಮುಕಿಸಿ ಆಮ್ಲಜನಕ ಸೋರಿಕೆಯನ್ನು ತಡೆಯಲು ಪ್ರಯತ್ನಿಸಿದರು. ಈ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿವೆ.

ಈ ಘಟನೆ ನಡೆದ ನಂತರ ಆಮ್ಲಜನಕದ ಸಹಾಯದಿಂದ ಚಿಕಿತ್ಸೆ ಪಡೆಯುತ್ತಿದ್ದ 31 ರೋಗಿಗಳನ್ನು ಇನ್ನೊಂದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.  ಎನ್​ಸಿಪಿ ಪಕ್ಷ ಮುಖಂಡ ಮಜೀದ್ ಮೆಮನ್, ಈ ಘಟನೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.ಕೇಂದ್ರ ಗೃಹ ಸಚಿವ ಅಮಿತ್ ಶಾ, ಘಟನೆಯಲ್ಲಿ ಮೃತಪಟ್ಟವರ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 

ದಿನಕ್ಕೆ 700 ಟನ್ ಆಮ್ಲಜನಕ ಪೂರೈಸುವ ರಿಲಯನ್ಸ್​ನಿಂದ 70 ಸಾವಿರಕ್ಕೂ ಹೆಚ್ಚು ಜೀವ ರಕ್ಷಣೆ

JSW steel: ದಿನಕ್ಕೆ 400 ಟನ್ ದ್ರವೀಕೃತ ಆಮ್ಲಜನಕ ಪೂರೈಕೆಗೆ ಜೆಎಸ್‌ಡಬ್ಲ್ಯೂ ಸ್ಟೀಲ್ ಸಮ್ಮತಿ

Published On - 3:14 pm, Wed, 21 April 21

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು