AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ ಬಳಿಕ ಇದೀಗ ಜೀನ್ಸ್​ ಪ್ಯಾಂಟ್​, ಟಿ- ಶರ್ಟ್​ ನಿಷೇಧಿಸಿದ ಕಾಲೇಜು

ಈ ಮೊದಲು ಹಿಜಾಬ್​ ನಿಷೇಧಿಸಿದ್ದ ಚೆಂಬೂರಿನ ಆಚಾರ್ಯ ಮತ್ತು ಮರಾಠೆ ಕಾಲೇಜು ಈಗ ಟಿ-ಶರ್ಟ್​ ಹಾಗೂ ಜೀನ್ಸ್​ ತೊಡುವುದನ್ನು ನಿಷೇಧಿಸಿ ಮತ್ತೊಮ್ಮೆ ಸುದ್ದಿಯಲ್ಲಿದೆ. ಕಳೆದ ವರ್ಷ ವಸ್ತ್ರಸಂಹಿತೆ ಜಾರಿಗೊಳಿಸಿದ್ದ ಈ ಕಾಲೇಜು ವಿದ್ಯಾರ್ಥಿಗಳು ಹಿಜಾಬ್ ಮತ್ತಿತರ ಧಾರ್ಮಿಕ ಗುರುತುಗಳ ವಸ್ತ್ರತೊಟ್ಟು ಕಾಲೇಜಿಗೆ ಪ್ರವೇಶಿಸಬಾರದು ಎಂದು ಕಟ್ಟುನಿಟ್ಟಿನ ನಿಯಮವನ್ನು ಜಾರಿಗೆ ತಂದಿತ್ತು.

ಹಿಜಾಬ್ ಬಳಿಕ ಇದೀಗ ಜೀನ್ಸ್​ ಪ್ಯಾಂಟ್​, ಟಿ- ಶರ್ಟ್​ ನಿಷೇಧಿಸಿದ ಕಾಲೇಜು
ಕಾಲೇಜು
ನಯನಾ ರಾಜೀವ್
|

Updated on: Jul 02, 2024 | 12:26 PM

Share

ಹಿಜಾಬ್(Hijab) ನಿಷೇಧದ ನಂತರ ಮುಂಬೈನ ಈ ಕಾಳೇಜಿನಲ್ಲಿ ಜೀನ್ಸ್ ಮತ್ತು ಟೀ ಶರ್ಟ್‌ಗಳನ್ನು ಧರಿಸುವುದನ್ನು ಕೂಡ ನಿಷೇಧಿಸಲಾಗಿದೆ. ಸೋಮವಾರ ಚೆಂಬೂರಿನ ಎನ್‌ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಾಲೇಜಿನ ಗೇಟ್‌ನಲ್ಲಿ ಜೀನ್ಸ್ ಮತ್ತು ಟೀ ಶರ್ಟ್ ಧರಿಸಿದ್ದ ವಿದ್ಯಾರ್ಥಿಗಳನ್ನು ತಡೆದಿದ್ದರು. ಕಾಲೇಜು ಹೊಸ ವಸ್ತ್ರಸಂಹಿತೆಯನ್ನು ಬಿಡುಗಡೆ ಮಾಡಿದೆ. ಕೆಲ ದಿನಗಳ ಹಿಂದೆಯಷ್ಟೇ ಕಾಲೇಜಿನಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿತ್ತು.

ಜೂನ್ 27 ರಂದು ಆಚಾರ್ಯ ಮತ್ತು ಮರಾಠೆ ಕಾಲೇಜು ಹೊರಡಿಸಿದ ನೋಟಿಸ್ ಪ್ರಕಾರ, ಹರಿದ ಜೀನ್ಸ್, ಟಿ-ಶರ್ಟ್, ತೆರೆದ ಬಟ್ಟೆ ಮತ್ತು ಜೆರ್ಸಿಗಳಿಗೆ ಅನುಮತಿ ಇಲ್ಲ ಎಂದು ಹೇಳಿದೆ. ಕಾಲೇಜು ಪ್ರಾಂಶುಪಾಲರಾದ ಡಾ.ವಿದ್ಯಾಗೌರಿ ಲೇಲೆ ಅವರು ನೋಟಿಸ್ ಜಾರಿ ಮಾಡಿದ್ದಾರೆ.

ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಔಪಚಾರಿಕ ಮತ್ತು ಯೋಗ್ಯವಾದ ಉಡುಪನ್ನು ಧರಿಸಬೇಕು. ಅವರು ಅರ್ಧ-ಶರ್ಟ್ ಅಥವಾ ಪೂರ್ಣ-ಶರ್ಟ್ ಮತ್ತು ಪ್ಯಾಂಟ್ ಧರಿಸಬಹುದು. ಹುಡುಗಿಯರು ಭಾರತೀಯ ಅಥವಾ ಪಾಶ್ಚಿಮಾತ್ಯ ಉಡುಗೆಯನ್ನು ಧರಿಸಬಹುದು. ವಿದ್ಯಾರ್ಥಿಗಳು ಧರ್ಮ ಅಥವಾ ಸಾಂಸ್ಕೃತಿಕ ಅಸಮಾನತೆಯನ್ನು ಪ್ರತಿಬಿಂಬಿಸುವ ಯಾವುದೇ ಉಡುಪನ್ನು ಧರಿಸಬಾರದು.

ಮತ್ತಷ್ಟು ಓದಿ: Hijab Ban: ಮುಸ್ಲಿಂ ರಾಷ್ಟ್ರವಾದ ತಜಿಕಿಸ್ತಾನದಲ್ಲಿ ಹಿಜಾಬ್ ಬ್ಯಾನ್​

ನಿಖಾಬ್, ಹಿಜಾಬ್, ಬುರ್ಖಾ, ಸ್ಟೋಲ್, ಕ್ಯಾಪ್, ಬ್ಯಾಡ್ಜ್ ಇತ್ಯಾದಿಗಳನ್ನು ಕೊಠಡಿಯಲ್ಲಿಯೇ ಇರಿಸಿಕೊಳ್ಳಬೇಕು ಆಗ ಅವರು ಇಡೀ ಕಾಲೇಜು ಆವರಣದಲ್ಲಿ ಓಡಾಡಬಹುದಾಗಿದೆ. ಕಳೆದ ವರ್ಷ ಹಿಜಾಬ್​ಗೆ ನಿಷೇಧ ಹೇರಲಾಗಿತ್ತು, ಇದೀಗ ಟಿ-ಶರ್ಟ್​ ಹಾಗೂ ಜೀನ್ಸ್​ಗೆ ನಿಷೇಧ ಹೇರಲಾಗಿದೆ.

ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿರುವಾಗ ಔಪಚಾರಿಕ ಮತ್ತು ಯೋಗ್ಯವಾದ ಉಡುಗೆಯನ್ನು ಧರಿಸಬೇಕು. ಕಾಲೇಜಿನ ಪ್ರಕಾರ, ಕಾರ್ಪೊರೇಟ್ ಜಗತ್ತಿಗೆ ಸಿದ್ಧವಾಗಲು ಆಡಳಿತವು ಅವರನ್ನು ಸಿದ್ಧಪಡಿಸುತ್ತಿದೆ. ದಾಖಲಾತಿ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಡ್ರೆಸ್​ಕೋಡ್​ ಬಗ್ಗೆ ತಿಳಿಸಲಾಗಿತ್ತು. ಈ ಹಿಂದೆ ಹಿಜಾಬ್ ನಿಷೇಧದ ವಿರುದ್ಧ 9 ವಿದ್ಯಾರ್ಥಿಗಳು ಬಾಂಬೆ ಹೈಕೋರ್ಟ್​ ಮೆಟ್ಟಿಲೇರಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?