ಹಿಜಾಬ್ ಬಳಿಕ ಇದೀಗ ಜೀನ್ಸ್​ ಪ್ಯಾಂಟ್​, ಟಿ- ಶರ್ಟ್​ ನಿಷೇಧಿಸಿದ ಕಾಲೇಜು

ಈ ಮೊದಲು ಹಿಜಾಬ್​ ನಿಷೇಧಿಸಿದ್ದ ಚೆಂಬೂರಿನ ಆಚಾರ್ಯ ಮತ್ತು ಮರಾಠೆ ಕಾಲೇಜು ಈಗ ಟಿ-ಶರ್ಟ್​ ಹಾಗೂ ಜೀನ್ಸ್​ ತೊಡುವುದನ್ನು ನಿಷೇಧಿಸಿ ಮತ್ತೊಮ್ಮೆ ಸುದ್ದಿಯಲ್ಲಿದೆ. ಕಳೆದ ವರ್ಷ ವಸ್ತ್ರಸಂಹಿತೆ ಜಾರಿಗೊಳಿಸಿದ್ದ ಈ ಕಾಲೇಜು ವಿದ್ಯಾರ್ಥಿಗಳು ಹಿಜಾಬ್ ಮತ್ತಿತರ ಧಾರ್ಮಿಕ ಗುರುತುಗಳ ವಸ್ತ್ರತೊಟ್ಟು ಕಾಲೇಜಿಗೆ ಪ್ರವೇಶಿಸಬಾರದು ಎಂದು ಕಟ್ಟುನಿಟ್ಟಿನ ನಿಯಮವನ್ನು ಜಾರಿಗೆ ತಂದಿತ್ತು.

ಹಿಜಾಬ್ ಬಳಿಕ ಇದೀಗ ಜೀನ್ಸ್​ ಪ್ಯಾಂಟ್​, ಟಿ- ಶರ್ಟ್​ ನಿಷೇಧಿಸಿದ ಕಾಲೇಜು
ಕಾಲೇಜು
Follow us
|

Updated on: Jul 02, 2024 | 12:26 PM

ಹಿಜಾಬ್(Hijab) ನಿಷೇಧದ ನಂತರ ಮುಂಬೈನ ಈ ಕಾಳೇಜಿನಲ್ಲಿ ಜೀನ್ಸ್ ಮತ್ತು ಟೀ ಶರ್ಟ್‌ಗಳನ್ನು ಧರಿಸುವುದನ್ನು ಕೂಡ ನಿಷೇಧಿಸಲಾಗಿದೆ. ಸೋಮವಾರ ಚೆಂಬೂರಿನ ಎನ್‌ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಾಲೇಜಿನ ಗೇಟ್‌ನಲ್ಲಿ ಜೀನ್ಸ್ ಮತ್ತು ಟೀ ಶರ್ಟ್ ಧರಿಸಿದ್ದ ವಿದ್ಯಾರ್ಥಿಗಳನ್ನು ತಡೆದಿದ್ದರು. ಕಾಲೇಜು ಹೊಸ ವಸ್ತ್ರಸಂಹಿತೆಯನ್ನು ಬಿಡುಗಡೆ ಮಾಡಿದೆ. ಕೆಲ ದಿನಗಳ ಹಿಂದೆಯಷ್ಟೇ ಕಾಲೇಜಿನಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿತ್ತು.

ಜೂನ್ 27 ರಂದು ಆಚಾರ್ಯ ಮತ್ತು ಮರಾಠೆ ಕಾಲೇಜು ಹೊರಡಿಸಿದ ನೋಟಿಸ್ ಪ್ರಕಾರ, ಹರಿದ ಜೀನ್ಸ್, ಟಿ-ಶರ್ಟ್, ತೆರೆದ ಬಟ್ಟೆ ಮತ್ತು ಜೆರ್ಸಿಗಳಿಗೆ ಅನುಮತಿ ಇಲ್ಲ ಎಂದು ಹೇಳಿದೆ. ಕಾಲೇಜು ಪ್ರಾಂಶುಪಾಲರಾದ ಡಾ.ವಿದ್ಯಾಗೌರಿ ಲೇಲೆ ಅವರು ನೋಟಿಸ್ ಜಾರಿ ಮಾಡಿದ್ದಾರೆ.

ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಔಪಚಾರಿಕ ಮತ್ತು ಯೋಗ್ಯವಾದ ಉಡುಪನ್ನು ಧರಿಸಬೇಕು. ಅವರು ಅರ್ಧ-ಶರ್ಟ್ ಅಥವಾ ಪೂರ್ಣ-ಶರ್ಟ್ ಮತ್ತು ಪ್ಯಾಂಟ್ ಧರಿಸಬಹುದು. ಹುಡುಗಿಯರು ಭಾರತೀಯ ಅಥವಾ ಪಾಶ್ಚಿಮಾತ್ಯ ಉಡುಗೆಯನ್ನು ಧರಿಸಬಹುದು. ವಿದ್ಯಾರ್ಥಿಗಳು ಧರ್ಮ ಅಥವಾ ಸಾಂಸ್ಕೃತಿಕ ಅಸಮಾನತೆಯನ್ನು ಪ್ರತಿಬಿಂಬಿಸುವ ಯಾವುದೇ ಉಡುಪನ್ನು ಧರಿಸಬಾರದು.

ಮತ್ತಷ್ಟು ಓದಿ: Hijab Ban: ಮುಸ್ಲಿಂ ರಾಷ್ಟ್ರವಾದ ತಜಿಕಿಸ್ತಾನದಲ್ಲಿ ಹಿಜಾಬ್ ಬ್ಯಾನ್​

ನಿಖಾಬ್, ಹಿಜಾಬ್, ಬುರ್ಖಾ, ಸ್ಟೋಲ್, ಕ್ಯಾಪ್, ಬ್ಯಾಡ್ಜ್ ಇತ್ಯಾದಿಗಳನ್ನು ಕೊಠಡಿಯಲ್ಲಿಯೇ ಇರಿಸಿಕೊಳ್ಳಬೇಕು ಆಗ ಅವರು ಇಡೀ ಕಾಲೇಜು ಆವರಣದಲ್ಲಿ ಓಡಾಡಬಹುದಾಗಿದೆ. ಕಳೆದ ವರ್ಷ ಹಿಜಾಬ್​ಗೆ ನಿಷೇಧ ಹೇರಲಾಗಿತ್ತು, ಇದೀಗ ಟಿ-ಶರ್ಟ್​ ಹಾಗೂ ಜೀನ್ಸ್​ಗೆ ನಿಷೇಧ ಹೇರಲಾಗಿದೆ.

ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿರುವಾಗ ಔಪಚಾರಿಕ ಮತ್ತು ಯೋಗ್ಯವಾದ ಉಡುಗೆಯನ್ನು ಧರಿಸಬೇಕು. ಕಾಲೇಜಿನ ಪ್ರಕಾರ, ಕಾರ್ಪೊರೇಟ್ ಜಗತ್ತಿಗೆ ಸಿದ್ಧವಾಗಲು ಆಡಳಿತವು ಅವರನ್ನು ಸಿದ್ಧಪಡಿಸುತ್ತಿದೆ. ದಾಖಲಾತಿ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಡ್ರೆಸ್​ಕೋಡ್​ ಬಗ್ಗೆ ತಿಳಿಸಲಾಗಿತ್ತು. ಈ ಹಿಂದೆ ಹಿಜಾಬ್ ನಿಷೇಧದ ವಿರುದ್ಧ 9 ವಿದ್ಯಾರ್ಥಿಗಳು ಬಾಂಬೆ ಹೈಕೋರ್ಟ್​ ಮೆಟ್ಟಿಲೇರಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಮಂಗಳೂರು, ಉಡುಪಿಯಲ್ಲಿ ಮಳೆ, ಕೆಲ ಪ್ರವಾಸಿ ತಾಣಗಳಿಗೆ ತೆರಳದಂತೆ ನಿರ್ಬಂಧ
ಮಂಗಳೂರು, ಉಡುಪಿಯಲ್ಲಿ ಮಳೆ, ಕೆಲ ಪ್ರವಾಸಿ ತಾಣಗಳಿಗೆ ತೆರಳದಂತೆ ನಿರ್ಬಂಧ
ಐಟಿಸಿ ಮೌರ್ಯ ಹೋಟೆಲ್​​ನಲ್ಲಿ ​​ಕೇಕ್​​ ಕತ್ತರಿಸಿದ ರಾಹುಲ್ ದ್ರಾವಿಡ್
ಐಟಿಸಿ ಮೌರ್ಯ ಹೋಟೆಲ್​​ನಲ್ಲಿ ​​ಕೇಕ್​​ ಕತ್ತರಿಸಿದ ರಾಹುಲ್ ದ್ರಾವಿಡ್
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ