AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai: ನಿರ್ಮಾಣ ಹಂತದಲ್ಲಿರುವ ಕಟ್ಟಡದ 42ನೇ ಮಹಡಿಯಿಂದ ಬಿದ್ದ ಬೃಹತ್ ಕಲ್ಲು, ಇಬ್ಬರು ಸಾವು, ಹಲವು ವಾಹನಗಳು ಜಖಂ

ನಿರ್ಮಾಣ ಹಂತದಲ್ಲಿರುವ ಕಟ್ಟಡದ 42ನೇ ಮಹಡಿಯಿಂದ ಬೃಹತ್ ಕಲ್ಲೊಂದು ಕೆಳಗೆ ಬಿದ್ದಿದ್ದು, ಇಬ್ಬರು ಮೃತಪಟ್ಟಿರುವ ಘಟನೆ ಮುಂಬೈನ ವರ್ಲಿ ಪ್ರದೇಶದಲ್ಲಿ ಸಂಭವಿಸಿದೆ.

Mumbai: ನಿರ್ಮಾಣ ಹಂತದಲ್ಲಿರುವ ಕಟ್ಟಡದ 42ನೇ ಮಹಡಿಯಿಂದ ಬಿದ್ದ ಬೃಹತ್ ಕಲ್ಲು, ಇಬ್ಬರು ಸಾವು, ಹಲವು ವಾಹನಗಳು ಜಖಂ
ಕಾರುImage Credit source: ANI
Follow us
ನಯನಾ ರಾಜೀವ್
|

Updated on: Feb 15, 2023 | 9:44 AM

ನಿರ್ಮಾಣ ಹಂತದಲ್ಲಿರುವ ಕಟ್ಟಡದ 42ನೇ ಮಹಡಿಯಿಂದ ಬೃಹತ್ ಕಲ್ಲೊಂದು ಕೆಳಗೆ ಬಿದ್ದು, ಇಬ್ಬರು ಮೃತಪಟ್ಟಿರುವ ಘಟನೆ ಮುಂಬೈನ ವರ್ಲಿ ಪ್ರದೇಶದಲ್ಲಿ ಸಂಭವಿಸಿದೆ. ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನಗಳು ಈ ದೊಡ್ಡ ಕಲ್ಲು ಬಿದ್ದು ಜಖಂಗೊಂಡಿದೆ. ಜನವರಿ 9 ರಂದು ವರ್ಲಿ ಪ್ರದೇಶದಲ್ಲಿ ಲಿಫ್ಟ್​ನಲ್ಲಿ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದರು.

ಇನ್ನು ಬೆಂಗಳೂರಿನಲ್ಲು ಕೂಡ ಇಂಥದ್ದೇ ಘಟನೆ ವರದಿಯಾಗಿತ್ತು, ನಿರ್ಮಾಣ ಹಂತದಲ್ಲಿರುವ ಮೆಟ್ರೋ ಪಿಲ್ಲರ್ ಬಿದ್ದು, ತಾಯಿ ಮಗಳು ಸಾವನ್ನಪ್ಪಿದ್ದರು. ಮಹಾರಾಷ್ಟ್ರದ ಮುಂಬೈನಲ್ಲಿ ನಿರ್ಮಾಣ ಹಂತದ ಬಹುಮಹಡಿ ಕಟ್ಟಡದಿಂದ ಕಲ್ಲು ಬಿದ್ದು ರಸ್ತೆಯಲ್ಲಿ ಹೋಗುತ್ತಿದ್ದ ಸಬೀರ್ ಅಲಿ (36) ಮತ್ತು ಇಮ್ರಾನ್ ಅಲಿ (30) ಗಾಯಗೊಂಡಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಆಂಬ್ಯುಲೆನ್ಸ್ ಅವರನ್ನು ಕೂಡಲೇ ಆಸ್ಪತ್ರೆಗೆ ರವಾನಿಸಿತ್ತು, ಆದರೆ ಅವರು ಬದುಕುಳಿಯಲಿಲ್ಲ.

ಮತ್ತಷ್ಟು ಓದಿ: Metro Pillar collapsed ಮೆಟ್ರೋ ಕಂಬಿ ಕುಸಿದು ತಾಯಿ, ಮಗು ಸಾವು ಪ್ರಕರಣ: ಐವರ ವಿರುದ್ಧ ಕೇಸ್ ಬುಕ್

ಈ ಕಟ್ಟಡವು ಮುಂಬೈನ ವರ್ಲಿಯ ಗಾಂಧಿನಗರ ಪ್ರದೇಶದಲ್ಲಿದೆ. ಈ ಕುರಿತು ಬಿಎಂಸಿ ಮಾಹಿತಿ ನೀಡಿದೆ. ಫೆಬ್ರವರಿ 14 ರಂದು ರಾತ್ರಿ 9.40ಕ್ಕೆ ಈ ಘಟನೆ ನಡೆದಿದೆ.

ಈ ಘಟನೆ ಕುರಿತು ಮಾಹಿತಿ ಪಡೆದು ತಕ್ಷಣವೇ ಮುಂಬೈ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು. ಅಪಘಾತದ ಸ್ಥಳದಲ್ಲಿ ಹಲವು ವಾಹನಗಳು ಜಖಂ ಆಗಿವೆ. ಘಟನೆ ಕಾರಣರಾದವರ ವಿರುದ್ಧ ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ