Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಗ್ನಲ್ ಜಂಪ್​ ಮಾಡಿ ಹೋಗುತ್ತಿದ್ದ ಕಾರನ್ನು ತಡೆಯಲು ಹೋದ ಟ್ರಾಫಿಕ್​ ಪೊಲೀಸ್​ರನ್ನು ಬಾನೆಟ್​ ಮೇಲೆ 20 ಕಿ.ಮೀ ಎಳೆದೊಯ್ದ ಚಾಲಕ

ಟ್ರಾಫಿಕ್ ನಿಯಮ(Traffic Rules) ವನ್ನು ಉಲ್ಲಂಘಿಸಿರುವ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಟ್ರಾಫಿಕ್​ ಪೊಲೀಸರನ್ನೇ ಕಾರಿನ ಬಾನೆಟ್​ ಮೇಲೆ 20 ಕಿ.ಮೀ ಎಳೆದೊಯ್ದಿರುವ ಘಟನೆ ಮುಂಬೈನಲ್ಲಿ ನಡೆದಿದೆ.

ಸಿಗ್ನಲ್ ಜಂಪ್​ ಮಾಡಿ ಹೋಗುತ್ತಿದ್ದ ಕಾರನ್ನು ತಡೆಯಲು ಹೋದ ಟ್ರಾಫಿಕ್​ ಪೊಲೀಸ್​ರನ್ನು  ಬಾನೆಟ್​ ಮೇಲೆ 20 ಕಿ.ಮೀ ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್
Follow us
ನಯನಾ ರಾಜೀವ್
|

Updated on: Apr 16, 2023 | 12:00 PM

ಟ್ರಾಫಿಕ್ ನಿಯಮ(Traffic Rules) ವನ್ನು ಉಲ್ಲಂಘಿಸಿರುವ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಟ್ರಾಫಿಕ್​ ಪೊಲೀಸರನ್ನೇ ಕಾರಿನ ಬಾನೆಟ್​ ಮೇಲೆ 20 ಕಿ.ಮೀ ಎಳೆದೊಯ್ದಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಯಾವುದೇ ಪ್ರಾಣಾಪಾಯವಾಗಿಲ್ಲ, ಸಿಗ್ನಲ್​ ಜಂಪ್ ಮಾಡಿ ಹೋಗಲು ಯತ್ನಿಸುತ್ತಿದ್ದ ಚಾಲಕನನ್ನು ತಡೆಯಲು ಹೋದ ಟ್ರಾಫಿಕ್ ಪೊಲೀಸರೊಬ್ಬರನ್ನು ಬಾನೆಟ್​ ಮೇಲೆ 20 ಕಿ.ಮೀ ದೂರ ಎಳೆದೊಯ್ದಿರುವ ಘಟನೆ ವರದಿಯಾಗಿದೆ. ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಾರ, ಪೊಲೀಸರು ಕಾರು ಚಾಲಕ ನೆರೂಲ್ ನಿವಾಸಿ ಆದಿತ್ಯ ಬೆಮ್ಡೆ (23) ನನ್ನು ಬಂಧಿಸಿದ್ದಾರೆ.

ಕುಡಿದ ಅಮಲಿನಲ್ಲಿ ವಾಹನ ಚಲಾಯಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಟ್ರಾಫಿಕ್ ಕಾನ್‌ಸ್ಟೆಬಲ್ ಸಿದ್ಧೇಶ್ವರ ಮಾಳಿ (37) ಕಾರಿನ ಮುಂಭಾಗದಲ್ಲಿ ತೀವ್ರವಾಗಿ ಸಿಕ್ಕಿಹಾಕಿಕೊಂಡಿದ್ದರಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಸಾಮಾನ್ಯವಾಗಿ ಈ ದೂರವನ್ನು ಕ್ರಮಿಸಲು ಕನಿಷ್ಠ 15-20 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ. ಪಾಮ್ ಬೀಚ್ ರಸ್ತೆಯ ಹಲವೆಡೆ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಘಟನೆ ಸೆರೆಯಾಗಿದೆ.

ಕಾನ್ಸ್‌ಟೇಬಲ್ ಸಿದ್ಧೇಶ್ವರ ಮಾಳಿ ಅವರು ಬ್ಲೂ ಡೈಮಂಡ್ ಜಂಕ್ಷನ್‌ನಲ್ಲಿ ಸಿಗ್ನಲ್ ಜಂಪ್ ಮಾಡಿ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಕಾರು ಚಾಲಕನನ್ನು ನಿಲ್ಲಿಸಲು ಪ್ರಯತ್ನಿಸಿದರು. ಆದರೆ ಚಾಲಕ ವೇಗ ಹೆಚ್ಚಿಸಿದ್ದ, ಪೊಲೀಸ್​ ಕಾರಿನ ಬಾನೆಟ್​ ಮೇಲೆ ಬಿದ್ದರೂ ನಿಲ್ಲಿಸಿದ ವ್ಯಕ್ತಿ ಬರೋಬ್ಬರಿ 20 ಕಿ.ಮೀ ಕಾರು ಚಲಾಯಿಸಿದ್ದಾನೆ.

ಮತ್ತಷ್ಟು ಓದಿ: ಹೆಲ್ಮೆಟ್​ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಮಹಿಳಾ ಪೊಲೀಸರ ಫೋಟೊ ವೈರಲ್, ಇಲಾಖೆ ಹೇಳಿದ್ದೇನು?

ವಾಶಿ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಶಶಿಕಾಂತ್ ಚಂಡೇಕರ್ ಮಾತನಾಡಿ, ಚಾಲಕನ ವೈದ್ಯಕೀಯ ಪರೀಕ್ಷೆಯಲ್ಲಿ ಕುಡಿದಿರುವುದು ತಿಳಿದುಬಂದಿದೆ, ಬಂಧಿತ ವ್ಯಕ್ತಿಯ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಿಸಲಾಗಿದೆ ಮತ್ತು ಮಾದಕ ದ್ರವ್ಯಗಳು ಮತ್ತು ಸೈಕೋಟ್ರೋಪಿಕ್ ಪದಾರ್ಥಗಳ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿಯೂ ಪ್ರಕರಣ ದಾಖಲಿಸಲಾಗಿದೆ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್
ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!