AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai: ರೀಲ್ಸ್​ ಮಾಡಲು ಹೋಗಿ ಬಾವಿಗೆ ಬಿದ್ದು ಯುವಕ ಸಾವು, 32 ಗಂಟೆಗಳ ಬಳಿಕ ಸಿಕ್ತು ಶವ

ರೀಲ್ಸ್ ಮಾಡಲು ಹೋಗಿ ಯುವಕನೊಬ್ಬ ತನ್ನ ಪ್ರಾಣಕ್ಕೆ ಕುತ್ತು ತಂದುಕೊಂಡಿದ್ದಾನೆ. ದೊಂಬಿವ್ಲಿಯ ಠಾಕುರ್ಲಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ, ಯುವಕನೊಬ್ಬ ತನ್ನ ಸ್ನೇಹಿತರ ಜತೆ ರೀಲ್ಸ್​ ಮಾಡಲು ತೆರಳಿ ಆಯತಪ್ಪಿ ಬಾವಿಗೆ ಬಿದ್ದು ಮೃತಪಟ್ಟಿದ್ದಾನೆ.

Mumbai: ರೀಲ್ಸ್​ ಮಾಡಲು ಹೋಗಿ ಬಾವಿಗೆ ಬಿದ್ದು ಯುವಕ ಸಾವು, 32 ಗಂಟೆಗಳ ಬಳಿಕ ಸಿಕ್ತು ಶವ
ಪಂಪ್​ಹೌಸ್Image Credit source: India TV
ನಯನಾ ರಾಜೀವ್
|

Updated on: Jun 15, 2023 | 10:01 AM

Share

ರೀಲ್ಸ್ ಮಾಡಲು ಹೋಗಿ ಯುವಕನೊಬ್ಬ ತನ್ನ ಪ್ರಾಣಕ್ಕೆ ಕುತ್ತು ತಂದುಕೊಂಡಿದ್ದಾನೆ. ದೊಂಬಿವ್ಲಿಯ ಠಾಕುರ್ಲಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ, ಯುವಕನೊಬ್ಬ ತನ್ನ ಸ್ನೇಹಿತರ ಜತೆ ರೀಲ್ಸ್​ ಮಾಡಲು ತೆರಳಿ ಆಯತಪ್ಪಿ ಬಾವಿಗೆ ಬಿದ್ದು ಮೃತಪಟ್ಟಿದ್ದಾನೆ. ಠಾಕುರ್ಲಿಯ ಬ್ರಿಟಿಷರ ಕಾಲದ ಪಂಪ್ ಹೌಸ್‌ನ ಬಾವಿಯಲ್ಲಿ ಮುಳುಗಿ ಈತ ಮೃತಪಟ್ಟಿದ್ದಾನೆ. ಯುವಕ ತನ್ನ ಇಬ್ಬರು ಸ್ನೇಹಿತರೊಂದಿಗೆ ತನ್ನ ಸಾಮಾಜಿಕ ಮಾಧ್ಯಮ ಖಾತೆಗಾಗಿ ರೀಲ್ ಶೂಟ್ ಮಾಡಲು ಹೋಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸತತ 32 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ವ್ಯಕ್ತಿಯ ಮೃತದೇಹವನ್ನು ಹುಡುಕಲಾಯಿತು. ಪೊಲೀಸರಿಂದ ಬಂದ ಮಾಹಿತಿಯ ಪ್ರಕಾರ ಮೃತರನ್ನು 18 ವರ್ಷದ ಬಿಲಾಲ್ ಸೊಹೈಲ್ ಶೇಖ್ ಎಂದು ಗುರುತಿಸಲಾಗಿದೆ.

ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಅಧಿಕಾರಿ, ಬಿಲಾಲ್ ಬಾವಿಗೆ ಬೀಳುವುದನ್ನು ನೋಡಿದ ಇಬ್ಬರು ಸ್ನೇಹಿತರು ಸಹಾಯಕ್ಕಾಗಿ ಭದ್ರತಾ ಸಿಬ್ಬಂದಿಯ ಬಳಿಗೆ ಹೋದರು.

ಮತ್ತಷ್ಟು ಓದಿ: ರೀಲ್ಸ್ ಹುಚ್ಚು! ಚೆಕ್ ಡ್ಯಾಂ ರೀಲ್ಸ್ ಮಾಡುವಾಗ ಇಬ್ಬರು ಯುವಕರು ನೀರುಪಾಲು, ರೀಲ್ಸ್ ಮಾಡ್ತಿದ್ದ 6 ಮಹಿಳಾ ಪೊಲೀಸ್​ ಸಿಬ್ಬಂದಿ ಸೀದಾ ಮನೆಗೆ!

ಬಳಿಕ ವಿಷ್ಣುನಗರ ಠಾಣೆಗೆ ಮಾಹಿತಿ ನೀಡಿದ ಸಿಬ್ಬಂದಿ ಕೂಡಲೇ ಹುಡುಕಾಟ ಆರಂಭಿಸಿದ್ದಾರೆ. ಮುಂಬ್ರಾದ ಚಂದನಗರದ ನಿವಾಸಿಗಳಾದ ಮೂವರು ಸ್ನೇಹಿತರು ಕುಡಿದ ಅಮಲಿನಲ್ಲಿದ್ದರು ಎಂದು ಶಂಕಿಸಲಾಗಿದೆ.

ಹಿಂದೂಸ್ತಾನ್ ಟೈಮ್ಸ್ ಪ್ರಕಾರ, ಬಿಲಾಲ್ ರೀಲ್ ಮಾಡುವ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದಾನೆ ಎಂದು ಬಿಲಾಲ್ ಸ್ನೇಹಿತರು ಹೇಳಿದ್ದಾರೆ. ಬ್ರಿಟಿಷರ ಕಾಲದಲ್ಲಿ ಪಂಪ್ ಹೌಸ್ ನಿರ್ಮಿಸಲಾಗಿತ್ತು. ಅಲ್ಲದೆ ಈ ಸ್ಥಳಕ್ಕೆ ಜನರು ಬರುವುದು ಕಡಿಮೆ.

ಬಾಲಕನ ಶವಕ್ಕಾಗಿ ಒಂದು ದಿನಕ್ಕೂ ಹೆಚ್ಚು ಕಾಲ ಶೋಧ ನಡೆಸಿತ್ತು, ಘಟನೆ ನಡೆದ 32 ಗಂಟೆಗಳ ನಂತರ ಶವ ಪತ್ತೆಯಾಗಿದೆ. ಬಿಲಾಲ್ ಅವರ ಚಿಕ್ಕಪ್ಪ ಖಾಲಿದ್ ಭಾಯ್ ಅವರು ತಮ್ಮ ಸ್ನೇಹಿತರೊಂದಿಗೆ ಠಾಕುರ್ಲಿಗೆ ಹೋಗುವುದಾಗಿ ನಮಗೆ ಹೇಳಿದರು ಎಂದು ಹೇಳಿದರು. ರಾತ್ರಿಯ ಹೊತ್ತಿಗೆ ಮನೆಗೆ ಹಿಂತಿರುಗುತ್ತಾನೆ ಎಂದು ನಾವು ಭಾವಿಸಿದ್ದೆವು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​