AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷ ಬರಮಾಡಿಕೊಳ್ಳುವ ಸಂಭ್ರಮದ ನಡುವೆ ಬಾಂಬ್​ ಸ್ಫೋಟದ ಬೆದರಿಕೆ, ಮುಂಬೈನಲ್ಲಿ ಹೈ ಅಲರ್ಟ್​

ಇಡೀ ದೇಶದಾದ್ಯಂತ ಜನರು ಹೊಸ ವರ್ಷವನ್ನು ಬರಮಾಡಿಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದಾರೆ, ಈ ಸಂದರ್ಭದಲ್ಲಿ ಬಾಂಬ್​ ಸ್ಫೋಟದ ಬೆದರಿಕೆ ಬಂದಿದ್ದು, ಆತಂಕ ಮೂಡಿದೆ. ಮುಂಬೈ ಪೊಲೀಸರಿಗೆ ಬಾಂಬ್​ ಬೆದರಿಕೆ ಕರೆ ಬಂದಿದ್ದು, ಹೈ ಅಲರ್ಟ್​ ಘೋಷಿಸಿದ್ದಾರೆ. ಶನಿವಾರ ಸಂಜೆ ಸುಮಾರು 6 ಗಂಟೆಗೆ ಮುಂಬೈ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಬಂದಿತ್ತು.

ಹೊಸ ವರ್ಷ ಬರಮಾಡಿಕೊಳ್ಳುವ ಸಂಭ್ರಮದ ನಡುವೆ ಬಾಂಬ್​ ಸ್ಫೋಟದ ಬೆದರಿಕೆ, ಮುಂಬೈನಲ್ಲಿ ಹೈ ಅಲರ್ಟ್​
ಪೊಲೀಸ್​Image Credit source: India Today
ನಯನಾ ರಾಜೀವ್
|

Updated on: Dec 31, 2023 | 12:21 PM

Share

ಇಡೀ ದೇಶದಾದ್ಯಂತ ಜನರು ಹೊಸ ವರ್ಷವನ್ನು ಬರಮಾಡಿಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದಾರೆ, ಈ ಸಂದರ್ಭದಲ್ಲಿ ಬಾಂಬ್​ ಸ್ಫೋಟ(Bomb Blast) ದ ಬೆದರಿಕೆ ಬಂದಿದ್ದು, ಆತಂಕ ಮೂಡಿದೆ. ಮುಂಬೈ ಪೊಲೀಸರಿಗೆ ಬಾಂಬ್​ ಬೆದರಿಕೆ ಕರೆ ಬಂದಿದ್ದು, ಹೈ ಅಲರ್ಟ್​ ಘೋಷಿಸಿದ್ದಾರೆ. ಶನಿವಾರ ಸಂಜೆ ಸುಮಾರು 6 ಗಂಟೆಗೆ ಮುಂಬೈ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಬಂದಿತ್ತು.

ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ ಮುಂಬೈನಲ್ಲಿ ಸ್ಫೋಟ ಸಂಭವಿಸುತ್ತದೆ ಎಂದು ಹೇಳಿದ್ದ ಎನ್ನುವ ವಿಚಾರವನ್ನು ಪೊಲೀಸರು ತಿಳಿಸಿದ್ದಾರೆ. ಕರೆ ಬಂದ ಬಳಿಕ ತಪಾಸಣೆ ಶುರು ಮಾಡಲಾಗಿದೆ ಆದರೆ ಈವರೆಗೆ ಅನುಮಾನಾಸ್ಪದ ವಸ್ತುಗಳು ಎಲ್ಲೂ ಕಂಡುಬಂದಿಲ್ಲ. ಪೊಲೀಸರು ಕರೆ ಮಾಡಿದವರ ಪತ್ತೆಗೆ ಯತ್ನಿಸುತ್ತಿದ್ದಾರೆ, ಹೊಸ ವರ್ಷದ ಆಚರಣೆಯನ್ನು ಪರಿಗಣಿಸಿ, ಮುಂಬೈ ಪೊಲೀಸರು ನಗರದಾದ್ಯಂತ ಬಿಗಿ ಭದ್ರತೆಯನ್ನು ಕಲ್ಪಿಸಿದ್ದಾರೆ.

ಗೇಟ್‌ವೇ ಆಫ್ ಇಂಡಿಯಾ, ಮರೈನ್ ಡ್ರೈವ್, ದಾದರ್, ಬಾಂದ್ರಾ, ಬ್ಯಾಂಡ್‌ಸ್ಟ್ಯಾಂಡ್, ಜುಹು, ಮಾಧ್ ಮತ್ತು ಮಾರ್ವೆ ಬೀಚ್‌ಗಳು ಮತ್ತು ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸ್ಥಳಗಳಲ್ಲಿ ಇಂದು ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

ಭದ್ರತೆಯ ಭಾಗವಾಗಿ 22 ಉಪ ಪೊಲೀಸ್ ಆಯುಕ್ತರು, 45 ಸಹಾಯಕ ಆಯುಕ್ತರು, 2051 ಅಧಿಕಾರಿಗಳು ಮತ್ತು 11,500 ಕಾನ್‌ಸ್ಟೆಬಲ್‌ಗಳನ್ನು ವಿವಿಧೆಡೆ ನಿಯೋಜಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು: ಪರ್ಸ್ ಹುಡುಕಲು ನೆರವಾಗಲಿಲ್ಲವೆಂದು ಬಾಂಬ್ ಬೆದರಿಕೆ ಕರೆ ಮಾಡಿದ ವಿಮಾನ ಪ್ರಯಾಣಿಕ ಅರೆಸ್ಟ್

ಹೊಸ ವರ್ಷದ ಮುನ್ನಾದಿನದಂದು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮುಂಬೈ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಪ್ರಮುಖ ರಸ್ತೆಗಳು ಮತ್ತು ಪ್ರಮುಖ ಸ್ಥಳಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಲಾಗುವುದು ಎಂದಿದ್ದಾರೆ.

ಇದು ಮೊದಲ ಪ್ರಕರಣವಲ್ಲ ಮುಂಬೈ ಪೊಲೀಸರಿಗೆ ಬಾಂಬ್​ ಸ್ಪೋಟದ ಬೆದರಿಕೆ ಕರೆ ಬಂದಿರುವುದು ಮೊದಲಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!