AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷ ಬರಮಾಡಿಕೊಳ್ಳುವ ಸಂಭ್ರಮದ ನಡುವೆ ಬಾಂಬ್​ ಸ್ಫೋಟದ ಬೆದರಿಕೆ, ಮುಂಬೈನಲ್ಲಿ ಹೈ ಅಲರ್ಟ್​

ಇಡೀ ದೇಶದಾದ್ಯಂತ ಜನರು ಹೊಸ ವರ್ಷವನ್ನು ಬರಮಾಡಿಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದಾರೆ, ಈ ಸಂದರ್ಭದಲ್ಲಿ ಬಾಂಬ್​ ಸ್ಫೋಟದ ಬೆದರಿಕೆ ಬಂದಿದ್ದು, ಆತಂಕ ಮೂಡಿದೆ. ಮುಂಬೈ ಪೊಲೀಸರಿಗೆ ಬಾಂಬ್​ ಬೆದರಿಕೆ ಕರೆ ಬಂದಿದ್ದು, ಹೈ ಅಲರ್ಟ್​ ಘೋಷಿಸಿದ್ದಾರೆ. ಶನಿವಾರ ಸಂಜೆ ಸುಮಾರು 6 ಗಂಟೆಗೆ ಮುಂಬೈ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಬಂದಿತ್ತು.

ಹೊಸ ವರ್ಷ ಬರಮಾಡಿಕೊಳ್ಳುವ ಸಂಭ್ರಮದ ನಡುವೆ ಬಾಂಬ್​ ಸ್ಫೋಟದ ಬೆದರಿಕೆ, ಮುಂಬೈನಲ್ಲಿ ಹೈ ಅಲರ್ಟ್​
ಪೊಲೀಸ್​Image Credit source: India Today
ನಯನಾ ರಾಜೀವ್
|

Updated on: Dec 31, 2023 | 12:21 PM

Share

ಇಡೀ ದೇಶದಾದ್ಯಂತ ಜನರು ಹೊಸ ವರ್ಷವನ್ನು ಬರಮಾಡಿಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದಾರೆ, ಈ ಸಂದರ್ಭದಲ್ಲಿ ಬಾಂಬ್​ ಸ್ಫೋಟ(Bomb Blast) ದ ಬೆದರಿಕೆ ಬಂದಿದ್ದು, ಆತಂಕ ಮೂಡಿದೆ. ಮುಂಬೈ ಪೊಲೀಸರಿಗೆ ಬಾಂಬ್​ ಬೆದರಿಕೆ ಕರೆ ಬಂದಿದ್ದು, ಹೈ ಅಲರ್ಟ್​ ಘೋಷಿಸಿದ್ದಾರೆ. ಶನಿವಾರ ಸಂಜೆ ಸುಮಾರು 6 ಗಂಟೆಗೆ ಮುಂಬೈ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಬಂದಿತ್ತು.

ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ ಮುಂಬೈನಲ್ಲಿ ಸ್ಫೋಟ ಸಂಭವಿಸುತ್ತದೆ ಎಂದು ಹೇಳಿದ್ದ ಎನ್ನುವ ವಿಚಾರವನ್ನು ಪೊಲೀಸರು ತಿಳಿಸಿದ್ದಾರೆ. ಕರೆ ಬಂದ ಬಳಿಕ ತಪಾಸಣೆ ಶುರು ಮಾಡಲಾಗಿದೆ ಆದರೆ ಈವರೆಗೆ ಅನುಮಾನಾಸ್ಪದ ವಸ್ತುಗಳು ಎಲ್ಲೂ ಕಂಡುಬಂದಿಲ್ಲ. ಪೊಲೀಸರು ಕರೆ ಮಾಡಿದವರ ಪತ್ತೆಗೆ ಯತ್ನಿಸುತ್ತಿದ್ದಾರೆ, ಹೊಸ ವರ್ಷದ ಆಚರಣೆಯನ್ನು ಪರಿಗಣಿಸಿ, ಮುಂಬೈ ಪೊಲೀಸರು ನಗರದಾದ್ಯಂತ ಬಿಗಿ ಭದ್ರತೆಯನ್ನು ಕಲ್ಪಿಸಿದ್ದಾರೆ.

ಗೇಟ್‌ವೇ ಆಫ್ ಇಂಡಿಯಾ, ಮರೈನ್ ಡ್ರೈವ್, ದಾದರ್, ಬಾಂದ್ರಾ, ಬ್ಯಾಂಡ್‌ಸ್ಟ್ಯಾಂಡ್, ಜುಹು, ಮಾಧ್ ಮತ್ತು ಮಾರ್ವೆ ಬೀಚ್‌ಗಳು ಮತ್ತು ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸ್ಥಳಗಳಲ್ಲಿ ಇಂದು ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

ಭದ್ರತೆಯ ಭಾಗವಾಗಿ 22 ಉಪ ಪೊಲೀಸ್ ಆಯುಕ್ತರು, 45 ಸಹಾಯಕ ಆಯುಕ್ತರು, 2051 ಅಧಿಕಾರಿಗಳು ಮತ್ತು 11,500 ಕಾನ್‌ಸ್ಟೆಬಲ್‌ಗಳನ್ನು ವಿವಿಧೆಡೆ ನಿಯೋಜಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು: ಪರ್ಸ್ ಹುಡುಕಲು ನೆರವಾಗಲಿಲ್ಲವೆಂದು ಬಾಂಬ್ ಬೆದರಿಕೆ ಕರೆ ಮಾಡಿದ ವಿಮಾನ ಪ್ರಯಾಣಿಕ ಅರೆಸ್ಟ್

ಹೊಸ ವರ್ಷದ ಮುನ್ನಾದಿನದಂದು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮುಂಬೈ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಪ್ರಮುಖ ರಸ್ತೆಗಳು ಮತ್ತು ಪ್ರಮುಖ ಸ್ಥಳಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಲಾಗುವುದು ಎಂದಿದ್ದಾರೆ.

ಇದು ಮೊದಲ ಪ್ರಕರಣವಲ್ಲ ಮುಂಬೈ ಪೊಲೀಸರಿಗೆ ಬಾಂಬ್​ ಸ್ಪೋಟದ ಬೆದರಿಕೆ ಕರೆ ಬಂದಿರುವುದು ಮೊದಲಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ