AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: 90 ಅಡಿ ಉದ್ದ, 6,000 ಕೆಜಿ ಕಬ್ಬಿಣದ ಸೇತುವೆಯನ್ನು ಕದ್ದ ನಾಲ್ವರ ಬಂಧನ

ಸ್ಥಳದಲ್ಲಿ ಯಾವುದೇ ಸಿಸಿಟಿವಿ ಕ್ಯಾಮೆರಾಗಳಿಲ್ಲದ ಕಾರಣ, ಪೊಲೀಸರು ಹತ್ತಿರದ ಪ್ರದೇಶಗಳಲ್ಲಿ ಅಳವಡಿಸಲಾಗಿರುವ ಕಣ್ಗಾವಲು ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಜೂನ್ 11 ರಂದು ಸೇತುವೆಯಿದ್ದೆಡೆ ದೊಡ್ಡ ವಾಹನವೊಂದು ಹೋಗುತ್ತಿರುವುದು ಕಂಡು ಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮುಂಬೈ: 90 ಅಡಿ ಉದ್ದ, 6,000 ಕೆಜಿ ಕಬ್ಬಿಣದ ಸೇತುವೆಯನ್ನು ಕದ್ದ ನಾಲ್ವರ ಬಂಧನ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on: Jul 08, 2023 | 5:31 PM

Share

ಮುಂಬೈ: ಪಶ್ಚಿಮ ಉಪನಗರದಲ್ಲಿ (western suburb) ಚರಂಡಿಯ ಮೇಲಿದ್ದ 6,000 ಕೆಜಿ ತೂಕದ ಕಬ್ಬಿಣದ ಸೇತುವೆಯನ್ನು ಕದ್ದ ಆರೋಪದ ಮೇಲೆ ಮುಂಬೈ ಪೊಲೀಸರು (Mumbai Police) ನಾಲ್ವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಬೃಹತ್ ವಿದ್ಯುತ್ ಕೇಬಲ್‌ಗಳನ್ನು ಕೊಂಡೊಯ್ಯುವುದಕ್ಕಾಗಿ ಮಲಾಡ್‌ನಲ್ಲಿ (ಪಶ್ಚಿಮ)ದಲ್ಲಿ 90 ಅಡಿ ಉದ್ದದ ಸೇತುವೆಯನ್ನು ನಿರ್ಮಿಸಲಾಗಿತ್ತು ಎಂದು ಬಂಗೂರ್ ನಗರ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ. ಚರಂಡಿ ಮೇಲೆ ಶಾಶ್ವತ ಸೇತುವೆ ನಿರ್ಮಿಸಿದ ಬಳಿಕ ತಾತ್ಕಾಲಿಕವಾಗಿ ನಿರ್ಮಿಸಿದ್ದ ಸೇತುವೆಯನ್ನು ಕೆಲ ತಿಂಗಳ ಹಿಂದೆ ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ಆದಾಗ್ಯೂ, ಜೂನ್ 26 ರಂದು ತಾತ್ಕಾಲಿಕ ಸೇತುವೆ ಕಾಣೆಯಾಗಿದೆ ಎಂದು ಗಮನಕ್ಕೆ ಬಂದ ನಂತರ ನಿರ್ಮಾಣ ಕಂಪನಿಯು ಪೊಲೀಸ್ ದೂರು ದಾಖಲಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ತಮ್ಮ ತನಿಖೆಯ ಸಮಯದಲ್ಲಿ, ಸೇತುವೆಯು ಜೂನ್ 6 ರಂದು ಅದರ ಸ್ಥಳದಲ್ಲಿ ಕೊನೆಯದಾಗಿ ಕಂಡುಬಂದಿದೆ ಎಂದು ಪೊಲೀಸರು ಕಂಡುಕೊಂಡರು.

ಸ್ಥಳದಲ್ಲಿ ಯಾವುದೇ ಸಿಸಿಟಿವಿ ಕ್ಯಾಮೆರಾಗಳಿಲ್ಲದ ಕಾರಣ, ಪೊಲೀಸರು ಹತ್ತಿರದ ಪ್ರದೇಶಗಳಲ್ಲಿ ಅಳವಡಿಸಲಾಗಿರುವ ಕಣ್ಗಾವಲು ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಜೂನ್ 11 ರಂದು ಸೇತುವೆಯಿದ್ದೆಡೆ ದೊಡ್ಡ ವಾಹನವೊಂದು ಹೋಗುತ್ತಿರುವುದು ಕಂಡು ಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ನಾನು ದಣಿದಿಲ್ಲ, ನಿವೃತ್ತಿಯೂ ಆಗಿಲ್ಲ: ಅಜಿತ್ ಪವಾರ್ ಟೀಕೆಗೆ ಖಡಕ್ ಪ್ರತಿಕ್ರಿಯೆ ನೀಡಿದ ಶರದ್ ಪವಾರ್

ನಂತರ ಪೊಲೀಸರು ಅದರ ನೋಂದಣಿ ಸಂಖ್ಯೆಯಿಂದ ವಾಹನವನ್ನು ಪತ್ತೆಹಚ್ಚಿದರು. ಸೇತುವೆಯನ್ನು ಕೆಡವಲು ಮತ್ತು 6,000 ಕೆಜಿ ತೂಕದ ಕಬ್ಬಿಣವನ್ನು ಕದಿಯಲು ಬಳಸಲಾದ ಗ್ಯಾಸ್ ಕಟಿಂಗ್ ಯಂತ್ರಗಳನ್ನು ವಾಹನ ಹೊಂದಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಹೆಚ್ಚಿನ ತನಿಖೆ ಮಾಡಿದಾಗ ಸೇತುವೆಯನ್ನು ನಿರ್ಮಿಸುವ ಗುತ್ತಿಗೆಯನ್ನು ಪಡೆದ ಸಂಸ್ಥೆಯ ಉದ್ಯೋಗಿಯೊಬ್ಬರು ಇದರಲ್ಲಿ ಭಾಗಿಯಾಗಿರುವುದು ತಿಳಿದು ಬಂತು. ಕಳೆದ ವಾರ ಪೊಲೀಸರು ಸಿಬ್ಬಂದಿ ಮತ್ತು ಆತನ ಮೂವರು ಸಹಚರರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಸ್ಥಳದಿಂದ ಕಳವು ಮಾಡಲಾದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ