AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲ್ಮೆಟ್​ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಮಹಿಳಾ ಪೊಲೀಸರ ಫೋಟೊ ವೈರಲ್, ಇಲಾಖೆ ಹೇಳಿದ್ದೇನು?

ನಿಯಮಗಳು ಎಂಬುದು ಎಲ್ಲರಿಗೂ ಒಂದೇ, ನಿಯಮಗಳನ್ನು ಪಾಲಿಸಿ ಎಂದು ಹೇಳಬೇಕಾದವರೇ ಉಲ್ಲಂಘಿಸಿದರೆ ಹೇಗೆ?. ಹೆಲ್ಮೆಟ್​ ಧರಿಸದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಮುಂಬೈ ಮಹಿಳಾ ಪೊಲೀಸರಿಬ್ಬರ ಚಿತ್ರ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.

ಹೆಲ್ಮೆಟ್​ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಮಹಿಳಾ ಪೊಲೀಸರ ಫೋಟೊ ವೈರಲ್, ಇಲಾಖೆ ಹೇಳಿದ್ದೇನು?
ಮುಂಬೈ ಪೊಲೀಸ್
ನಯನಾ ರಾಜೀವ್
|

Updated on: Apr 11, 2023 | 12:30 PM

Share

ನಿಯಮಗಳು ಎಂಬುದು ಎಲ್ಲರಿಗೂ ಒಂದೇ, ನಿಯಮಗಳನ್ನು ಪಾಲಿಸಿ ಎಂದು ಹೇಳಬೇಕಾದವರೇ ಉಲ್ಲಂಘಿಸಿದರೆ ಹೇಗೆ?. ಹೆಲ್ಮೆಟ್​ ಧರಿಸದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಮುಂಬೈ ಮಹಿಳಾ ಪೊಲೀಸರಿಬ್ಬರ ಚಿತ್ರ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಚಿತ್ರವನ್ನು ಟ್ವಿಟ್ಟರ್​ನಲ್ಲಿ ಹಂಚಿಕೊಳ್ಳಲಾಗಿದೆ, ನಾವು ಕೂಡ ಹೀಗೆ ಪ್ರಯಾಣಿಸಿದರೆ ನೀವು ದಂಡ ಹಾಕುತ್ತೀರಿ, ಇದು ಸಂಚಾರ ನಿಯಮ ಉಲ್ಲಂಘನೆಯಲ್ಲವೇ ಎಂದು ರಾಹುಲ್ ಬರ್ಮನ್ ಎಂಬುವವರು ಪ್ರಶ್ನಿಸಿದ್ದಾರೆ.

ಶಾಂತಿ ಕಾಪಾಡಲು ದೇಶದ ವಿವಿಧ ರಾಜ್ಯಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಪರಾಧ ನಿಯಂತ್ರಣದ ಜತೆಗೆ ಟ್ರಾಫಿಕ್ ನಿಯಂತ್ರಣದಲ್ಲಿಡಲು ಪೊಲೀಸ್ ಇಲಾಖೆಯ ಟ್ರಾಫಿಕ್ ಪೊಲೀಸ್ ವಿಭಾಗ ಹಲವು ನಿಯಮಗಳನ್ನು ರೂಪಿಸಿ, ಪಾಲಿಸದಿದ್ದರೆ ಚಲನ್ ಕೂಡ ನೀಡುತ್ತಿದೆ. ಸದ್ಯ ಜನಸಾಮಾನ್ಯರು ಸಂಚಾರಿ ನಿಯಮ ಪಾಲಿಸಬೇಕಾದ ಅನಿವಾರ್ಯತೆ ಅನಿವಾರ್ಯತೆ ಇದೆ, ಅದೇ ಸಮಯದಲ್ಲಿ, ಪೊಲೀಸ್ ಇಲಾಖೆಯವರೇ ಈ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ.

ಮತ್ತಷ್ಟು ಓದಿ: Video Viral: ಪುಟ್ಟ ಸಹಾಯದ ಮೂಲಕ ಟ್ರಾಫಿಕ್ ಪೊಲೀಸರ ಮುಖದಲ್ಲಿ ನಗು ಮೂಡಿಸಿದ ವ್ಯಕ್ತಿ

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಯಾರೋ ತಮ್ಮ ಕ್ಯಾಮರಾದಲ್ಲಿ ಈ ದೃಶ್ಯವನ್ನು ಸೆರೆಹಿಡಿದಿದ್ದಾರೆ, ಅದರ ನಂತರ ಈ ಚಿತ್ರವು ಹೆಚ್ಚು ವೈರಲ್ ಆಗುತ್ತಿದೆ. ಚಿತ್ರವನ್ನು ಮಹಾರಾಷ್ಟ್ರದ ಬಗ್ಗೆ ಹೇಳಲಾಗುತ್ತಿದೆ. ಇದರಲ್ಲಿ ಮುಂಬೈ ಪೊಲೀಸ್‌ನ ಮಹಿಳಾ ಪೊಲೀಸ್ ಪೇದೆಯೊಬ್ಬರು ಸಂಚಾರಿ ನಿಯಮಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಿದೆ.

ಬಳಕೆದಾರರು ಮುಂಬೈ ಪೊಲೀಸರು, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಟ್ಯಾಗ್ ಮಾಡಿದ್ದಾರೆ. ಮುಂಬೈ ಪೊಲೀಸ್ @MumbaiPolice ಈ ಟ್ವೀಟ್​ಗೆ ಪ್ರತಿಕ್ರಿಯಿಸಿದ್ದು, @DrRudrayadav01 ನಾವು ಈ ವಿಚಾರವನ್ನು ಟ್ರಾಫಿಕ್ ಪೊಲೀಸರಿಗೆ ವರ್ಗಾಯಿಸುತ್ತೇವೆ ಎಂದಷ್ಟೇ ಹೇಳಿಕೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ