AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಕ್ತಿ ತಮ್ಮ 7 ವಾಹನಗಳಿಗೆ ಮಾಡಿಸಿದ್ದ ವಿಮೆ ನಕಲಿ, ಇನ್ಶೂರೆನ್ಸ್​ ಮಾಡಿಸುವ ಮುನ್ನ ಎಚ್ಚರ

ವಾಹನಗಳ ನಕಲಿ ವಿಮಾ ಪಾಲಿಸಿಗಳನ್ನು ಆಟೋಮೊಬೈಲ್ ಬಿಡಿಭಾಗಗಳ ಅಂಗಡಿ ಮಾಲೀಕರಿಗೆ ನೀಡಿದ ಆರೋಪದ ಮೇಲೆ ಮುಂಬೈ ಪೊಲೀಸರು ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ವ್ಯಕ್ತಿ ತಮ್ಮ 7 ವಾಹನಗಳಿಗೆ ಮಾಡಿಸಿದ್ದ ವಿಮೆ ನಕಲಿ, ಇನ್ಶೂರೆನ್ಸ್​ ಮಾಡಿಸುವ ಮುನ್ನ ಎಚ್ಚರ
ವಿಮೆImage Credit source: NDTV
ನಯನಾ ರಾಜೀವ್
|

Updated on: Jul 02, 2023 | 11:18 AM

Share

ವಾಹನಗಳ ನಕಲಿ ವಿಮಾ ಪಾಲಿಸಿಗಳನ್ನು ಆಟೋಮೊಬೈಲ್ ಬಿಡಿಭಾಗಗಳ ಅಂಗಡಿ ಮಾಲೀಕರಿಗೆ ನೀಡಿದ ಆರೋಪದ ಮೇಲೆ ಮುಂಬೈ ಪೊಲೀಸರು ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಜೂನ್ 2018 ರಲ್ಲಿ, ಕಲಾಂಬೋಲಿ ಪ್ರದೇಶದಲ್ಲಿ ಅಂಗಡಿಯನ್ನು ನಡೆಸುತ್ತಿದ್ದ ವ್ಯಕ್ತಿಯು, ತನ್ನ ಏಳು ವಾಹನಗಳಿಗೆ  ಇನ್ಶೂರೆನ್ಸ್​ ಪಡೆಯಲು ಆರೋಪಿಗೆ 46,370 ರೂ. ಪಾವತಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾಹನವೊಂದು ಅಪಘಾತಕ್ಕೀಡಾದಾಗ ಸಂದರ್ಭದಲ್ಲಿ ವಿಮೆಗಾಗಿ ಅರ್ಜಿ ಸಲ್ಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪರಿಶೀಲನೆಯ ವೇಳೆ ಆರೋಪಿ ನೀಡಿದ ಪಾಲಿಸಿ ನಕಲಿ ಎಂಬುದು ತಿಳಿದುಬಂದಿದೆ ಎಂದು ಎಪಿಎಂಸಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅರುಣ್ ಬಿಲಾರೆ ತಿಳಿಸಿದ್ದಾರೆ.

ಮತ್ತಷ್ಟು ಓದಿ: Health Insurance: ತೂಕ ಕಡಿಮೆ ಮಾಡಿಕೊಂಡ್ರೆ ಸಿಗುತ್ತೆ ಅಗ್ಗದ ಆರೋಗ್ಯ ವಿಮೆ!

ಬಳಿಕ ಎಲ್ಲಾ ವಾಹನಗಳಿಗೆ ನೀಡಲಾಗಿರುವ ಇನ್ಶೂರೆನ್ಸ್ ಪೇಪರ್​ಗಳು ನಕಲಿ ಎಂಬುದು ತಿಳಿದುಬಂದಿದೆ. ದೂರಿನ ಆಧಾರದ ಮೇರೆಗೆ, ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 420 (ವಂಚನೆ ), 406 ,  465 (ನಕಲಿ) ಅಡಿ ಘನ್ಸೋಲಿ ಪ್ರದೇಶದ ನಿವಾಸಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ