AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TRP ಹಗರಣದಲ್ಲಿ ಅರ್ನಬ್​ ಗೋಸ್ವಾಮಿ ಶಾಮೀಲು.. ಮೊಟ್ಟಮೊದಲ ಬಾರಿಗೆ ಅರ್ನಬ್​ ಹೆಸರು ಪ್ರಸ್ತಾಪಿಸಿದ ಮುಂಬೈ ಪೊಲೀಸರು

ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ಅರ್ನಬ್​ ಗೋಸ್ವಾಮಿ ಹೆಸರು ನೇರವಾಗಿ ಪ್ರಸ್ತಾಪವಾಗಿಲ್ಲವಾದರೂ ರಿಪಬ್ಲಿಕ್​ ಟಿವಿ ವಾಹಿನಿಯ ಮಾಲೀಕರು ಅಕ್ರಮದಲ್ಲಿ ಶಾಮೀಲಾಗಿದ್ದಾರೆ ಎಂದು ಆಪಾದನೆ ಮಾಡಲಾಗಿದೆ. ಆದರೆ, ಈ ಕುರಿತಾದ ಹೇಳಿಕೆ ನೀಡುವ ಸಂದರ್ಭದಲ್ಲಿ ಮಾತ್ರ ಮುಂಬೈ ಪೊಲೀಸರು ಅರ್ನಬ್​ ಗೋಸ್ವಾಮಿ ಹೆಸರನ್ನು ಉಚ್ಛರಿಸಿದ್ದಾರೆ.

TRP ಹಗರಣದಲ್ಲಿ ಅರ್ನಬ್​ ಗೋಸ್ವಾಮಿ ಶಾಮೀಲು.. ಮೊಟ್ಟಮೊದಲ ಬಾರಿಗೆ ಅರ್ನಬ್​ ಹೆಸರು ಪ್ರಸ್ತಾಪಿಸಿದ ಮುಂಬೈ ಪೊಲೀಸರು
ಅರ್ನಬ್​ ಗೋಸ್ವಾಮಿ
Skanda
| Edited By: |

Updated on: Dec 29, 2020 | 11:30 AM

Share

ಮುಂಬೈ: ಟಿಆರ್​ಪಿ ಗೋಲ್​ಮಾಲ್​ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್​ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಹೆಸರು ಮತ್ತೆ ಮುನ್ನೆಲೆಗೆ ಬಂದಿದೆ. ಸೋಮವಾರದಂದು ಮುಂಬೈ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ವರದಿಯಲ್ಲಿ (Remand Report) ರಿಪಬ್ಲಿಕ್​ ಟಿವಿ ವಾಹಿನಿಯ ಮಾಲೀಕರು, ಮಾಜಿ ಸಿಇಓ ಪಾರ್ಥೋ ದಾಸ್​ಗುಪ್ತಾ ಅವರಿಗೆ ಲಕ್ಷಗಟ್ಟಲೆ ಹಣ ನೀಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ಅರ್ನಬ್​ ಗೋಸ್ವಾಮಿ ಹೆಸರು ನೇರವಾಗಿ ಪ್ರಸ್ತಾಪವಾಗಿಲ್ಲವಾದರೂ ರಿಪಬ್ಲಿಕ್​ ಟಿವಿ ವಾಹಿನಿಯ ಮಾಲೀಕರು ಅಕ್ರಮದಲ್ಲಿ ಶಾಮೀಲಾಗಿದ್ದಾರೆ ಎಂದು ಆಪಾದಿಸಲಾಗಿದೆ. ಆದರೆ,  ಹೇಳಿಕೆಯ ಮುಂದುವರಿದ ಭಾಗದಲ್ಲಿ.. ಮುಂಬೈ ಪೊಲೀಸರು ಅರ್ನಬ್​ ಗೋಸ್ವಾಮಿ ಹೆಸರನ್ನು ಉಲ್ಲೇಖಿಸಿದ್ದಾರೆ.

ರಿಪಬ್ಲಿಕ್​ ಟಿವಿ ಮತ್ತು ರಿಪಬ್ಲಿಕ್​ ಭಾರತ್​ ವಾಹಿನಿಗಳ ಟಿಆರ್​ಪಿಯನ್ನು ಅಕ್ರಮವಾಗಿ ಹೆಚ್ಚಿಸುವ ಸಲುವಾಗಿ ಬಾರ್ಕ್​ ಸಂಸ್ಥೆಯ ಮಾಜಿ ಸಿಇಓ ಪಾರ್ಥೋ ದಾಸ್​ಗುಪ್ತಾ ಅವರಿಗೆ ಅರ್ನಬ್​ ಗೋಸ್ವಾಮಿ ಬೇರೆ ಬೇರೆ ಸಂದರ್ಭದಲ್ಲಿ ಲಕ್ಷಾಂತರ ರೂಪಾಯಿ ಹಣ ಸಂದಾಯಿಸಿದ್ದಾರೆ ಎಂದು ಮುಂಬೈ ಪೊಲೀಸರು ತಾವು ಕೋರ್ಟ್​ಗೆ ಸಲ್ಲಿಸಿರುವ Remand Report ನಲ್ಲಿ ಉಲ್ಲೇಖಿಸಿದ್ದಾರೆ. ಈ ಮೂಲಕ ಟಿಆರ್​ಪಿ ಅಕ್ರಮ ಪ್ರಕರಣದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಮುಂಬೈ ಪೊಲೀಸರು ರಿಪಬ್ಲಿಕ್​ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಹೆಸರನ್ನು ನೇರವಾಗಿ ಪ್ರಸ್ತಾಪಿಸಿದ್ದಾರೆ.

ಪಾರ್ಥೋ ದಾಸ್​ಗುಪ್ತಾ ಅವರು ಬಾರ್ಕ್​ ಸಂಸ್ಥೆಯ ಸಿಇಓ ಆಗಿದ್ದಾಗ ಅವರೊಂದಿಗೆ ಅಂದಿನ ಇತರೆ ಸಿಬ್ಬಂದಿ ಕೂಡಾ ಅಕ್ರಮದಲ್ಲಿ ಶಾಮೀಲಾಗಿರಬಹುದು ಎಂದು Remand Report ವರದಿಯಲ್ಲಿ ಅನುಮಾನಿಸಲಾಗಿದೆ. ಟೈಮ್ಸ್ ನೌ ವಾಹಿನಿಯಲ್ಲಿ ಜೊತೆಯಾಗಿ ಕೆಲಸ ಮಾಡಿದ್ದ ಅರ್ನಬ್​ ಮತ್ತು ದಾಸ್​ಗುಪ್ತಾ ಇಬ್ಬರೂ ರಿಪಬ್ಲಿಕ್ ಟಿವಿಯ ಟಿಆರ್​ಪಿ ಹೆಚ್ಚಳದಲ್ಲಿ ಅಕ್ರಮ ಎಸಗಿದ್ದಾರೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಮುಂಬೈನ ಹೊಟೇಲುಗಳಲ್ಲಿ ಡಾಲರ್​ ರೂಪದಲ್ಲಿ ಹಣ ನೀಡಿದ್ದಾರೆ ಟಿಆರ್​ಪಿ ಹೆಚ್ಚಿಸುವುದಕ್ಕಾಗಿ ಅವರಿಬ್ಬರೂ ಕನಿಷ್ಠ 3 ಬಾರಿ ಮುಂಬೈನ ಬೇರೆ ಬೇರೆ ಹೊಟೇಲುಗಳಲ್ಲಿ ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ದಾಸ್​ಗುಪ್ತಾ ಅವರಿಗೆ ಅರ್ನಬ್​ ದೊಡ್ಡ ಮೊತ್ತದ ನಗದನ್ನು ನೀಡಿದ್ದಾರೆ ಮತ್ತು ಒಂದು ಬಾರಿ ಯುಎಸ್​ ಡಾಲರ್​ನಲ್ಲಿ ಅವರಿಗೆ ಹಣ ಸಂದಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಿಆರ್​ಪಿ ಹಗರಣ: ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖನ್​ಚಂದಾನಿ ಬಂಧನ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ