AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TRP ಹಗರಣದಲ್ಲಿ ಅರ್ನಬ್​ ಗೋಸ್ವಾಮಿ ಶಾಮೀಲು.. ಮೊಟ್ಟಮೊದಲ ಬಾರಿಗೆ ಅರ್ನಬ್​ ಹೆಸರು ಪ್ರಸ್ತಾಪಿಸಿದ ಮುಂಬೈ ಪೊಲೀಸರು

ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ಅರ್ನಬ್​ ಗೋಸ್ವಾಮಿ ಹೆಸರು ನೇರವಾಗಿ ಪ್ರಸ್ತಾಪವಾಗಿಲ್ಲವಾದರೂ ರಿಪಬ್ಲಿಕ್​ ಟಿವಿ ವಾಹಿನಿಯ ಮಾಲೀಕರು ಅಕ್ರಮದಲ್ಲಿ ಶಾಮೀಲಾಗಿದ್ದಾರೆ ಎಂದು ಆಪಾದನೆ ಮಾಡಲಾಗಿದೆ. ಆದರೆ, ಈ ಕುರಿತಾದ ಹೇಳಿಕೆ ನೀಡುವ ಸಂದರ್ಭದಲ್ಲಿ ಮಾತ್ರ ಮುಂಬೈ ಪೊಲೀಸರು ಅರ್ನಬ್​ ಗೋಸ್ವಾಮಿ ಹೆಸರನ್ನು ಉಚ್ಛರಿಸಿದ್ದಾರೆ.

TRP ಹಗರಣದಲ್ಲಿ ಅರ್ನಬ್​ ಗೋಸ್ವಾಮಿ ಶಾಮೀಲು.. ಮೊಟ್ಟಮೊದಲ ಬಾರಿಗೆ ಅರ್ನಬ್​ ಹೆಸರು ಪ್ರಸ್ತಾಪಿಸಿದ ಮುಂಬೈ ಪೊಲೀಸರು
ಅರ್ನಬ್​ ಗೋಸ್ವಾಮಿ
Skanda
| Edited By: |

Updated on: Dec 29, 2020 | 11:30 AM

Share

ಮುಂಬೈ: ಟಿಆರ್​ಪಿ ಗೋಲ್​ಮಾಲ್​ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್​ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಹೆಸರು ಮತ್ತೆ ಮುನ್ನೆಲೆಗೆ ಬಂದಿದೆ. ಸೋಮವಾರದಂದು ಮುಂಬೈ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ವರದಿಯಲ್ಲಿ (Remand Report) ರಿಪಬ್ಲಿಕ್​ ಟಿವಿ ವಾಹಿನಿಯ ಮಾಲೀಕರು, ಮಾಜಿ ಸಿಇಓ ಪಾರ್ಥೋ ದಾಸ್​ಗುಪ್ತಾ ಅವರಿಗೆ ಲಕ್ಷಗಟ್ಟಲೆ ಹಣ ನೀಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ಅರ್ನಬ್​ ಗೋಸ್ವಾಮಿ ಹೆಸರು ನೇರವಾಗಿ ಪ್ರಸ್ತಾಪವಾಗಿಲ್ಲವಾದರೂ ರಿಪಬ್ಲಿಕ್​ ಟಿವಿ ವಾಹಿನಿಯ ಮಾಲೀಕರು ಅಕ್ರಮದಲ್ಲಿ ಶಾಮೀಲಾಗಿದ್ದಾರೆ ಎಂದು ಆಪಾದಿಸಲಾಗಿದೆ. ಆದರೆ,  ಹೇಳಿಕೆಯ ಮುಂದುವರಿದ ಭಾಗದಲ್ಲಿ.. ಮುಂಬೈ ಪೊಲೀಸರು ಅರ್ನಬ್​ ಗೋಸ್ವಾಮಿ ಹೆಸರನ್ನು ಉಲ್ಲೇಖಿಸಿದ್ದಾರೆ.

ರಿಪಬ್ಲಿಕ್​ ಟಿವಿ ಮತ್ತು ರಿಪಬ್ಲಿಕ್​ ಭಾರತ್​ ವಾಹಿನಿಗಳ ಟಿಆರ್​ಪಿಯನ್ನು ಅಕ್ರಮವಾಗಿ ಹೆಚ್ಚಿಸುವ ಸಲುವಾಗಿ ಬಾರ್ಕ್​ ಸಂಸ್ಥೆಯ ಮಾಜಿ ಸಿಇಓ ಪಾರ್ಥೋ ದಾಸ್​ಗುಪ್ತಾ ಅವರಿಗೆ ಅರ್ನಬ್​ ಗೋಸ್ವಾಮಿ ಬೇರೆ ಬೇರೆ ಸಂದರ್ಭದಲ್ಲಿ ಲಕ್ಷಾಂತರ ರೂಪಾಯಿ ಹಣ ಸಂದಾಯಿಸಿದ್ದಾರೆ ಎಂದು ಮುಂಬೈ ಪೊಲೀಸರು ತಾವು ಕೋರ್ಟ್​ಗೆ ಸಲ್ಲಿಸಿರುವ Remand Report ನಲ್ಲಿ ಉಲ್ಲೇಖಿಸಿದ್ದಾರೆ. ಈ ಮೂಲಕ ಟಿಆರ್​ಪಿ ಅಕ್ರಮ ಪ್ರಕರಣದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಮುಂಬೈ ಪೊಲೀಸರು ರಿಪಬ್ಲಿಕ್​ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಹೆಸರನ್ನು ನೇರವಾಗಿ ಪ್ರಸ್ತಾಪಿಸಿದ್ದಾರೆ.

ಪಾರ್ಥೋ ದಾಸ್​ಗುಪ್ತಾ ಅವರು ಬಾರ್ಕ್​ ಸಂಸ್ಥೆಯ ಸಿಇಓ ಆಗಿದ್ದಾಗ ಅವರೊಂದಿಗೆ ಅಂದಿನ ಇತರೆ ಸಿಬ್ಬಂದಿ ಕೂಡಾ ಅಕ್ರಮದಲ್ಲಿ ಶಾಮೀಲಾಗಿರಬಹುದು ಎಂದು Remand Report ವರದಿಯಲ್ಲಿ ಅನುಮಾನಿಸಲಾಗಿದೆ. ಟೈಮ್ಸ್ ನೌ ವಾಹಿನಿಯಲ್ಲಿ ಜೊತೆಯಾಗಿ ಕೆಲಸ ಮಾಡಿದ್ದ ಅರ್ನಬ್​ ಮತ್ತು ದಾಸ್​ಗುಪ್ತಾ ಇಬ್ಬರೂ ರಿಪಬ್ಲಿಕ್ ಟಿವಿಯ ಟಿಆರ್​ಪಿ ಹೆಚ್ಚಳದಲ್ಲಿ ಅಕ್ರಮ ಎಸಗಿದ್ದಾರೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಮುಂಬೈನ ಹೊಟೇಲುಗಳಲ್ಲಿ ಡಾಲರ್​ ರೂಪದಲ್ಲಿ ಹಣ ನೀಡಿದ್ದಾರೆ ಟಿಆರ್​ಪಿ ಹೆಚ್ಚಿಸುವುದಕ್ಕಾಗಿ ಅವರಿಬ್ಬರೂ ಕನಿಷ್ಠ 3 ಬಾರಿ ಮುಂಬೈನ ಬೇರೆ ಬೇರೆ ಹೊಟೇಲುಗಳಲ್ಲಿ ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ದಾಸ್​ಗುಪ್ತಾ ಅವರಿಗೆ ಅರ್ನಬ್​ ದೊಡ್ಡ ಮೊತ್ತದ ನಗದನ್ನು ನೀಡಿದ್ದಾರೆ ಮತ್ತು ಒಂದು ಬಾರಿ ಯುಎಸ್​ ಡಾಲರ್​ನಲ್ಲಿ ಅವರಿಗೆ ಹಣ ಸಂದಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಿಆರ್​ಪಿ ಹಗರಣ: ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖನ್​ಚಂದಾನಿ ಬಂಧನ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!