AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕು ಹೆಚ್ಚಳ: ವಿಭಿನ್ನ ರೀತಿಯಲ್ಲಿ ಜಾಗೃತಿ ಮೂಡಿಸಿದ ಮುಂಬೈ ಪೊಲೀಸರು

ಇತ್ತೀಚೆಗೆ ಮುಂಬೈ ಪೊಲೀಸರು ತಮ್ಮ ಅಧಿಕೃತ ಇನ್​ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್​ ಹಂಚಿಕೊಂಡಿರುವುದು ಇದೀಗ ವೈರಲ್​ ಆಗಿದೆ.

ಕೊರೊನಾ ಸೋಂಕು ಹೆಚ್ಚಳ: ವಿಭಿನ್ನ ರೀತಿಯಲ್ಲಿ ಜಾಗೃತಿ ಮೂಡಿಸಿದ ಮುಂಬೈ ಪೊಲೀಸರು
ಇನ್​ಸ್ಟಾಗ್ರಾಂ ಪೋಸ್ಟ್​
shruti hegde
|

Updated on: Apr 23, 2021 | 12:15 PM

Share

ದಿನ ಸಾಗುತ್ತಿದ್ದಂತೆಯೇ ಕೊವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಕೊರೊನಾ ಮಹಾಮಾರಿಯ ಆರ್ಭಟ ಎಲ್ಲರನ್ನೂ ಚಿಂತೆಗೀಡು ಮಾಡಿದೆ. ನಾಗರಿಕರು ಮತ್ತು ಸರ್ಕಾರಿ ಸಂಸ್ಥೆಗಳು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಯ ಮೂಲಕ ಜನರಿಗೆ ಜಾಗೃತಿ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ. ಅಂತೆಯೇ ಹೊರಗಡೆ ತಿರುಗಾಡದೇ ಮನೆಯಲ್ಲಿಯೇ ಇರುವಂತೆ ಸೂಚನೆ ನೀಡುತ್ತಿದ್ದಾರೆ. ಈ ಕುರಿತಂತೆ ನಾಗರಿಕರಿಗೆ ಜಾಗೃತಿ ಮೂಡಿಸಲು ಮುಂಬೈ ಪೊಲೀಸರು ಹಂಚಿಕೊಂಡ ಪೋಸ್ಟ್​ ಇಲ್ಲಿದೆ. 

ಸೋಷಿಯಲ್​ ಮೀಡಿಯಾದಲ್ಲಿ ಮುಂಬೈ ಪೊಲೀಸರನ್ನು ಅನುಸರಿಸುವ ನೆಟ್ಟಿಗರು, ಕೊವಿಡ್​ ತಡೆ ಕ್ರಮಗಳಿಗೆ ಸಂಬಂಧಿಸಿದಂತೆ ಮುಖಗವಸು ಧರಿಸುವುದು ಮತ್ತು ಇತರ ಮಾರ್ಗಸೂಚಿಗಳ ಕುರಿತಾಗಿ ನಿರಂತರವಾಗಿ ಮಾತನಾಡುತ್ತಲೇ ಇರುತ್ತಾರೆ. ಇತ್ತೀಚೆಗೆ ಮುಂಬೈ ಪೊಲೀಸರು ತಮ್ಮ ಅಧಿಕೃತ ಇನ್​ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್​ ಹಂಚಿಕೊಂಡಿರುವುದು ಇದೀಗ ವೈರಲ್​ ಆಗಿದೆ.

ಮುಂಬೈ ಪೊಲೀಸರು ಹಂಚಿಕೊಂಡ ಒಟ್ಟು ನಾಲ್ಕು ಫೋಟೊಗಳಲ್ಲಿ ಪ್ರತಿ ಫೋಟೋವೂ ಕೂಡಾ ತಿಂಡಿ-ತಿನಿಸುಗಳಿಗೆ ಸಂಬಂಧಿಸಿದ ಪೋಸ್ಟ್​ ಆಗಿದೆ. ಇದರಿಂದ ಪ್ರತಿಯೊಬ್ಬರೂ ಮನೆಯಲ್ಲಿಯೇ ಇರಬೇಕು, ಕೊವಿಡ್​ ಸಾಂಕ್ರಾಮಿಕ ಎಲ್ಲೆಡೆ ಹರಡುತ್ತಿದೆ. ಹೊರಗಡೆಯ ಆಹಾರವನ್ನು ಸೇವಿಸುವುದರ ಬದಲು ಮನೆಯಲ್ಲಿಯೇ ಆನ್​ಲೈನ್​ ಆರ್ಡರ್​ ಮಾಡಿ ವಿವಿಧ ತಿಂಡಿಗಳನ್ನು ಸೇವಿಸಿರಿ ಎಂಬ ಕಿವಿಮಾತು ಅಡಗಿದೆ.

ಈ ಪೋಸ್ಟ್​ ಗಮನಿಸಿದ ನೆಟ್ಟಿಗರು ಸಾವಿರಾರು ಲೈಕ್​ ನೀಡಿದ್ದಾರೆ. ನೂರಾರು ಕಮೆಂಟ್​ಗಳು ಕೂಡಾ ಬಂದಿವೆ. ಮುಂಬೈ ಪೊಲೀಸರ ಸೃಜನಾತ್ಮಕತೆಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಅತ್ಯುತ್ತಮವಾದ ಸಾಮಾಜಿಕ ಮಾಧ್ಯಮದ ವಿಷಯವಿದು’ ಎಂಬ ಅಭಿಪ್ರಾಯಗಳೂ ನೆಟ್ಟಿಗರಿಂದ ಬಂದಿವೆ.

ಇದರ ಜೊತೆಗೆ, ನಮ್ಮ ಅಗತ್ಯ ಹಾಗೂ ಅನಿವಾರ್ಯತೆಗಳ ಅಡಿಯಲ್ಲಿ ಇದು ಸೇರುವುದಿಲ್ಲ. ಆದರೆ ಈ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅನಿವಾರ್ಯ. ಜೊತೆಗೆ, ಆರೋಗ್ಯಕರ ಕ್ರಮವೂ ಹೌದು. ಸ್ಟೇ ಹೋಮ್.. ಸ್ಟೇ ಸೇಫ್ ಎಂದು ಮುಂಬೈ ಪೊಲೀಸ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕಳ್ಳನ ಪಶ್ಚಾತ್ತಾಪ: ಸಾರಿ, ಅದು ಕೊರೊನಾ ಲಸಿಕೆ ಅಂತ ಗೊತ್ತಾಗಿದ್ರೆ ಕದೀತಾ ಇರ್ಲಿಲ್ಲ

1 ಲಕ್ಷ ಡೋಸ್ ಕೊರೊನಾ ಲಸಿಕೆ ಖರೀದಿಗೆ ರಾಜ್ಯ ಸರ್ಕಾರ ಆದೇಶ; 400 ಕೋಟಿ ವೆಚ್ಚ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ