AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನಿ ಉಗ್ರ ಕಸಬ್​ನನ್ನು ಜೀವಂತವಾಗಿ ಸೆರೆಹಿಡಿದಿದ್ದ ಪೊಲೀಸರಿಗೆ ಪ್ರಮೋಷನ್

2008ರ ನವೆಂಬರ್ 26ರಂದು ಮುಂಬೈ ಮೇಲಿನ ದಾಳಿಯಲ್ಲಿ 170ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು ಮತ್ತು 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಪಾಕಿಸ್ತಾನಿ ಉಗ್ರ ಕಸಬ್​ನನ್ನು ಜೀವಂತವಾಗಿ ಸೆರೆಹಿಡಿದಿದ್ದ ಪೊಲೀಸರಿಗೆ ಪ್ರಮೋಷನ್
ಕಸಬ್
TV9 Web
| Edited By: |

Updated on:Mar 30, 2022 | 8:35 PM

Share

ಮುಂಬೈ: 26/11 ಮುಂಬೈ ಭಯೋತ್ಪಾದನಾ ದಾಳಿಯ ಸಂದರ್ಭದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮೊಹಮ್ಮದ್ ಅಜ್ಮಲ್ ಕಸಬ್‌ನನ್ನು ಜೀವಂತವಾಗಿ ಸೆರೆಹಿಡಿದ ವೀರ ಪೊಲೀಸ್ ಸಿಬ್ಬಂದಿಗೆ 2008ರಿಂದ ಜಾರಿಗೆ ಬರುವಂತೆ ಬಡ್ತಿ ನೀಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈಗಾಗಲೇ ಈ ಪೊಲೀಸರು ಪದಕಗಳು, ಪ್ರಶಸ್ತಿಗಳು ಮತ್ತು ನಗದು ಬಹುಮಾನಗಳನ್ನು ಪಡೆದಿದ್ದರು. ಆದರೆ ಇದಕ್ಕೂ ಮೊದಲು ಅವರಿಗೆ ಪ್ರಮೋಷನ್ ನೀಡಿರಲಿಲ್ಲ. ಆದ್ದರಿಂದ 2022ರ ಮಾರ್ಚ್ 22ರಂದು ಸರ್ಕಾರದ ಆದೇಶದ ಪ್ರಕಾರ ಅವರಿಗೆ ಬಡ್ತಿ ನೀಡಲು ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಕಸಬ್​ನನ್ನು ಜೀವಂತವಾಗಿ ಸೆರೆಹಿಡಿದಿದ್ದ ಪೊಲೀಸರಿಗೆ ಒಂದು-ಹಂತದ ಬಡ್ತಿ ನೀಡಲು ನಿರ್ಧರಿಸಲಾಗಿದೆ. ಒಂದು ಹಂತದ ಬಡ್ತಿ ಎಂದರೆ ಈ ಅಧಿಕಾರಿಗಳು 2008ರಿಂದ ಅನ್ವಯವಾಗುವಂತೆ ಮುಂದಿನ ಉನ್ನತ ಶ್ರೇಣಿಗಾಗಿ ಬಾಕಿ ಇರುವ ವೇತನಗಳು ಮತ್ತು ಇತರ ಪ್ರಯೋಜನಗಳನ್ನು ಪಡೆಯುತ್ತಾರೆ.

ಕಸಬ್‌ನನ್ನು ಸೆರೆಹಿಡಿಯುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಒಬ್ಬ ಅಧಿಕಾರಿಯ ಪ್ರಕಾರ, ಕಸಬ್​ನನ್ನು ಹಿಡಿದ ಪೊಲೀಸರಿಗೆ 2 ಲಕ್ಷದಿಂದ 8 ಲಕ್ಷದವರೆಗೆ ಹಣ ನೀಡಲಾಗುತ್ತದೆ. 2008ರ ನವೆಂಬರ್ 26ರಂದು ಮುಂಬೈ ಮೇಲಿನ ದಾಳಿಯಲ್ಲಿ 170ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು ಮತ್ತು 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

26/11ರಂದು ಮುಂಬೈ ಮೇಲೆ ದಾಳಿ ಮಾಡಿದ 10 ಪಾಕಿಸ್ತಾನಿ ಭಯೋತ್ಪಾದಕರ ಪೈಕಿ ಕಸಬ್ ಮಾತ್ರ ಗಿರ್ಗಾಮ್ ಚೌಪಾಟಿಯಲ್ಲಿ ಜೀವಂತವಾಗಿ ಸಿಕ್ಕಿಬಿದ್ದಿದ್ದ. ಈ ಕಾರ್ಯಾಚರಣೆಯಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ತುಕಾರಾಂ ಓಂಬಾಳೆ ಮೃತಪಟ್ಟಿದ್ದರು. ಕಾನ್ಸ್‌ಟೇಬಲ್‌ಗಳಿಂದ ಹಿಡಿದು ಇನ್ಸ್‌ಪೆಕ್ಟರ್‌ಗಳವರೆಗೆ ಒಟ್ಟು 15 ಪೊಲೀಸರು ಕಸಬ್‌ನನ್ನು ಜೀವಂತವಾಗಿ ಸೆರೆಹಿಡಿದ ತಂಡದಲ್ಲಿ ಭಾಗವಾಗಿದ್ದರು. ಅವರಲ್ಲಿ ಎಂಟು ಮಂದಿ ನಿವೃತ್ತರಾಗಿದ್ದಾರೆ.

ಮರಣದಂಡನೆ ಶಿಕ್ಷೆಗೆ ಒಳಗಾಗಿದ್ದ ಕಸಬ್​ನನ್ನು 2012ರ ನವೆಂಬರ್ 21ರಂದು ಪುಣೆಯ ಯರವಾಡ ಕೇಂದ್ರ ಕಾರಾಗೃಹದಲ್ಲಿ ಗಲ್ಲಿಗೇರಿಸಲಾಯಿತು.

ಇದನ್ನೂ ಓದಿ: 26/11 Mumbai Attack: 26/11ಕ್ಕೆ ಮುಂಬೈನಲ್ಲಿ ಏನೇನಾಯ್ತು?; ಇಲ್ಲಿದೆ ಕರಾಳ ಘಟನೆಯ ವಿವರ

Anti Terrorism Day 2021: ಭಾರತವನ್ನು ನಡುಗಿಸಿದ 3 ಭಯೋತ್ಪಾದಕ ದಾಳಿಗಳು ಯಾವುವು?

Published On - 8:35 pm, Wed, 30 March 22

Follow Us
Web contact
Web contact

TV9 Kannada

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ