ಪ್ರವಾದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣ: ನೂಪುರ್ ಶರ್ಮಾಗೆ ಸಮನ್ಸ್ ಕಳಿಸಲಿದೆ ಮುಂಬೈ ಪೊಲೀಸ್

ಜ್ಞಾನವಾಪಿ ಮಸೀದಿ ವಿಷಯದ ಕುರಿತು ಸುದ್ದಿವಾಹಿನಿಯ ಚರ್ಚೆಯ ಸಂದರ್ಭದಲ್ಲಿ ಪ್ರವಾದಿ ಮೊಹಮ್ಮದ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರಿಗೆ ಮುಂಬೈ ಪೊಲೀಸರು ಶೀಘ್ರದಲ್ಲೇ ಸಮನ್ಸ್ ಕಳುಹಿಸಲಿದ್ದಾರೆ.

ಪ್ರವಾದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣ: ನೂಪುರ್ ಶರ್ಮಾಗೆ ಸಮನ್ಸ್ ಕಳಿಸಲಿದೆ ಮುಂಬೈ ಪೊಲೀಸ್
ನೂಪುರ್ ಶರ್ಮಾ
Follow us
| Updated By: ರಶ್ಮಿ ಕಲ್ಲಕಟ್ಟ

Updated on:Jun 06, 2022 | 7:54 PM

ಮುಂಬೈ: ಪ್ರವಾದಿ ಮೊಹಮ್ಮದ್  (Prophet Muhammad) ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ ಅಮಾನತುಗೊಂಡಿರುವ ಬಿಜೆಪಿಯ (BJP) ವಕ್ತಾರೆ ನೂಪುರ್ ಶರ್ಮಾ (Nupur Sharma) ಅವರಿಗೆ ಮುಂಬೈ ಪೊಲೀಸರು (Mumbai Police) ಶೀಘ್ರದಲ್ಲೇ ಸಮನ್ಸ್ ಕಳುಹಿಸಲಿದ್ದಾರೆ ಎಂದು ಮುಂಬೈ ಉನ್ನತ ಪೊಲೀಸ್ ಸಂಜಯ್ ಪಾಂಡೆ ಎಎನ್‌ಐಗೆ ತಿಳಿಸಿದ್ದಾರೆ. ಜ್ಞಾನವಾಪಿ ಮಸೀದಿ ವಿಷಯದ ಕುರಿತು ಸುದ್ದಿವಾಹಿನಿಯ ಚರ್ಚೆಯ ಸಂದರ್ಭದಲ್ಲಿ ಪ್ರವಾದಿ ಮೊಹಮ್ಮದ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರಿಗೆ ಮುಂಬೈ ಪೊಲೀಸರು ಶೀಘ್ರದಲ್ಲೇ ಸಮನ್ಸ್ ಕಳುಹಿಸಲಿದ್ದಾರೆ ಮತ್ತು ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಿದ್ದಾರೆ” ಎಂದು ಪಾಂಡೆ ಹೇಳಿದ್ದಾರೆ. ಟಿವಿ ಸುದ್ದಿ ಚರ್ಚೆಯೊಂದರಲ್ಲಿ ಪ್ರವಾದಿ ಮೊಹಮ್ಮದ್ ಮತ್ತು ಇಸ್ಲಾಂ ಧರ್ಮದ ಬಗ್ಗೆ ಅವರು ಮಾಡಿದ ಹೇಳಿಕೆಯ ವಿವಾದವು ಭಾರೀ ವಿವಾದವನ್ನು ಉಂಟುಮಾಡಿದ ನಂತರ ಶರ್ಮಾ ಅವರನ್ನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ. ಅದೇ ವೇಳೆ ಬಿಜೆಪಿಯ ದೆಹಲಿ ಮಾಧ್ಯಮ ಮುಖ್ಯಸ್ಥ ನವೀನ್ ಜಿಂದಾಲ್ ಅವರು ಸಾಮಾಜಿಕ ಮಾಧ್ಯಮದಲ್ಲಿನ ಅವರ ಅಭಿಪ್ರಾಯಗಳು ಕೋಮು ಸೌಹಾರ್ದತೆಗೆ ಧಕ್ಕೆ ತಂದಿದೆ ಎಂದು ಪಕ್ಷ ಹೇಳಿದೆ. ಕತಾರ್, ಕುವೈತ್, ಇರಾನ್ ಮತ್ತು ಸೌದಿ ಅರೇಬಿಯಾ ಸೇರಿದಂತೆ ಹಲವಾರು ದೇಶಗಳು ಪಕ್ಷ ಕೈಗೊಂಡ ಕ್ರಮವನ್ನು ಸ್ವಾಗತಿಸಿದ್ದು ಹೇಳಿಕೆಯನ್ನು ಖಂಡಿಸಿದೆ.

ಅಮಾನತುಗೊಂಡ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶರ್ಮಾ, “ನನ್ನ ಮಾತುಗಳು ಯಾರಿಗಾದರೂ ತೊಂದರೆ ಉಂಟುಮಾಡಿದರೆ ಅಥವಾ ಧಾರ್ಮಿಕ ಭಾವನೆಗಳಿಗೆ ನೋವುಂಟುಮಾಡಿದರೆ, ನಾನು ಈ ಮೂಲಕ ಬೇಷರತ್ತಾಗಿ ನನ್ನ ಹೇಳಿಕೆಯನ್ನು ಹಿಂತೆಗೆದುಕೊಳ್ಳುತ್ತೇನೆ. ಯಾರ ಧಾರ್ಮಿಕ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ ಎಂದಿದ್ದಾರೆ.

ಭಾರತದಲ್ಲಿ, ಪ್ರತಿಪಕ್ಷಗಳು ಆಡಳಿತಾರೂಢ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ದೂಷಿಸಲು ಕಾರಣವಲಾಗಿದೆ ಎಂದು ಆರೋಪಿಸಿದೆ. ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ಪ್ರವಾದಿ ವಿರುದ್ಧದ ಆಕ್ಷೇಪಾರ್ಹ ಹೇಳಿಕೆಗಳ ಬಗ್ಗೆ ಅಂತರಾಷ್ಟ್ರೀಯ ಆಕ್ರೋಶದ ನಂತರ ಅವರನ್ನು ಬಂಧಿಸುವಂತೆ ಕಾಂಗ್ರೆಸ್ ಒತ್ತಾಯಿಸಿದೆ.

ಇದನ್ನೂ ಓದಿ
Image
ನಿಮ್ಮಂತೆ ಮತಾಂಧರನ್ನು ಸ್ತುತಿಸುವುದಿಲ್ಲ; ಪಾಕ್ ಪ್ರಧಾನಿ ಟ್ವೀಟ್​ಗೆ ಭಾರತ ತಿರುಗೇಟು
Image
ಪ್ರವಾದಿ ಬಗ್ಗೆ ಹೇಳಿಕೆ ವಿವಾದ: ಒಐಸಿ ಟೀಕೆ ಅನಗತ್ಯ ಮತ್ತು ಸಂಕುಚಿತ ಮನಸ್ಸಿನದ್ದು ಎಂದ ಭಾರತ
Image
Nupur Sharma: ಪ್ರವಾದಿ ಮೊಹಮ್ಮದ್ ಕುರಿತ ವಿವಾದಾತ್ಮಕ ಹೇಳಿಕೆಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮ ಯಾರು?
Image
ಪ್ರವಾದಿ ಮೊಹಮ್ಮದ್​ರ ಅವಹೇಳನ: ಇಸ್ಲಾಮಿಕ್ ದೇಶಗಳಿಂದ ಆಕ್ಷೇಪ, ಭಾರತದ ಉತ್ಪನ್ನ ಬಹಿಷ್ಕಾರಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಕರೆ

“ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ದೂಷಿಸಿದ ಪಕ್ಷದಲ್ಲಿನ ಸಮಾಜವಿರೋಧಿಗಳ ವಿರುದ್ಧ ಕ್ರಮದ ನಾಟಕವನ್ನು ಮಾಡುವ ಬದಲು, ತಕ್ಷಣವೇ ಅವರನ್ನು ಬಂಧಿಸಬೇಕು” ಎಂದು ಕಾಂಗ್ರೆಸ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 7:22 pm, Mon, 6 June 22

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ