AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai Rains: ಮುಂಬೈನಲ್ಲಿ ಭಾರೀ ಮಳೆಯಿಂದ ಕೆರೆಯಾದ ರಸ್ತೆಗಳು; ಬಸ್, ರೈಲು ಸಂಚಾರ ಅಸ್ಯವ್ಯಸ್ತ

Weather Today: ಮುಂಬೈನ ಮಳೆಯ ಅವಾಂತರಗಳ ವಿಡಿಯೋಗಳು ಕೂಡ ವೈರಲ್ ಆಗುತ್ತಿವೆ. ಮುಂದಿನ 24 ಗಂಟೆಗಳ ಕಾಲ ಮುಂಬೈನಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಲಿದೆ.

Mumbai Rains: ಮುಂಬೈನಲ್ಲಿ ಭಾರೀ ಮಳೆಯಿಂದ ಕೆರೆಯಾದ ರಸ್ತೆಗಳು; ಬಸ್, ರೈಲು ಸಂಚಾರ ಅಸ್ಯವ್ಯಸ್ತ
ಮುಂಬೈನಲ್ಲಿ ಮಳೆ
TV9 Web
| Edited By: |

Updated on: Jul 16, 2021 | 11:42 AM

Share

ಮುಂಬೈ: ಕಳೆದೊಂದು ವಾರದಿಂದ ದಕ್ಷಿಣ ಭಾರತದಲ್ಲಿ ಭಾರೀ ಮಳೆಯಾಗುತ್ತಿದೆ. ಕರ್ನಾಟಕ, ಕೇರಳ ಸೇರಿದಂತೆ ಹಲವೆಡೆ ವರುಣನ ಆರ್ಭಟ (Weather Today) ಹೆಚ್ಚಾಗಿದೆ. ಪಕ್ಕದ ರಾಜ್ಯವಾದ ಮಹಾರಾಷ್ಟ್ರದಲ್ಲೂ (Maharashtra Rain) ಕಳೆದೆರಡು ವಾರಗಳಿಂದ ಮಳೆ ಸುರಿಯುತ್ತಿದೆ. ಮುಂಬೈನಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಜನಜೀವ ಅಸ್ತವ್ಯಸ್ತವಾಗಿದೆ. ಮಳೆಯಿಂದ ಮುಂಬೈನಲ್ಲಿ (Mumbai Rains) ಬಸ್, ರೈಲು ಸಂಚಾರ ಸ್ಥಗಿತಗೊಂಡಿದೆ. ಅಂಧೇರಿಯಲ್ಲಿ ಮಹಿಳೆಯೊಬ್ಬಳು ಮ್ಯಾನ್​ಹೋಲ್​ನಲ್ಲಿ ಕೊಚ್ಚಿಹೋಗಿರುವ ಘಟನೆಯೂ ನಡೆದಿದೆ.

ಮುಂಬೈ, ಥಾಣೆ, ನವಿ ಮುಂಬೈ, ಪಲ್ಘಾರ್ ಮುಂತಾದ ಪ್ರದೇಶದಲ್ಲಿ ಮಳೆ ಹೆಚ್ಚಾಗಿದೆ. ಮಹಾರಾಷ್ಟ್ರದ ಬಹುತೇಕ ಕಡೆ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆಯ ಆರ್ಭಟವಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬೈ ಸುತ್ತಮುತ್ತಲಿನ ರಸ್ತೆಗಳೆಲ್ಲ ನದಿಗಳಂತಾಗಿದ್ದು, ಜನರು ಒಂದು ಕಡೆಯಿಂದ ಮತ್ತೊಂದು ಕಡೆ ಹೋಗಲು ಪರದಾಡುತ್ತಿದ್ದಾರೆ. ಅಂಧೇರಿ, ಚೆಂಬೂರ್, ಸಿಯೋನ್, ಮುಂಬೈನಲ್ಲಿ ರಸ್ತೆಗಳಲ್ಲಿ ನೀರು ತುಂಬಿ ಬಸ್​ ಸಂಚಾರ ವ್ಯತ್ಯಯವಾಗಿದೆ.

ಮುಂಬೈನ ಮಳೆಯ ಅವಾಂತರಗಳ ವಿಡಿಯೋಗಳು ಕೂಡ ವೈರಲ್ ಆಗುತ್ತಿವೆ. ಮುಂದಿನ 24 ಗಂಟೆಗಳ ಕಾಲ ಮುಂಬೈನಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಲಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಇನ್ನೂ ಮೂರ್ನಾಲ್ಕು ದಿನ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮಳೆಯಿಂದ ಮುಂಬೈನಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ಬಹುತೇಕ ರಸ್ತೆಗಲ್ಲಿ ನೀರು ತುಂಬಿರುವುದರಿಂದ ವಾಹನ ಸಂಚಾರ ಅಸಾಧ್ಯವಾಗಿದೆ. ಬಸ್​ ಮತ್ತು ರೈಲು ಸಂಚಾರದ ಮಾರ್ಗವೂ ಬದಲಾಗಿದೆ.

ಪೂರ್ವ ಅರಬ್ಬಿ ಸಮುದ್ರದಲ್ಲಿ ಮಳೆ ಸುರಿಯುತ್ತಿರುವುದರಿಂದ ದಕ್ಷಿಣ ಭಾರತದಲ್ಲಿ ಮಳೆ ಹೆಚ್ಚಾಗಿದೆ. ಕರ್ನಾಟಕದಲ್ಲೂ ಕಳೆದ ನಾಲ್ಕೈದು ದಿನಗಳಿಂದ ಮಳೆಯಾಗುತ್ತಿದ್ದು, ಇಂದಿನಿಂದ ಜು.18ರವರೆಗೆ ವರುಣನ ಆರ್ಭಟ ಮುಂದುವರೆಯಲಿದೆ. ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನ ಮಳೆ ಮುಂದುವರೆಯಲಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದೆ. ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜುಲೈ 18ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಮಹಾರಾಷ್ಟ್ರದ ಮುಂಬೈನ ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಜನರು ಎತ್ತರದ ಪ್ರದೇಶಗಳಿಗೆ ತೆರಳುವಂತೆ ಮುಂಬೈ ಮಹಾನಗರ ಪಾಲಿಕೆ ಸೂಚನೆ ನೀಡಿದೆ. ಅಂಧೇರಿಯಲ್ಲಿ ಮಹಿಳೆಯೊಬ್ಬರು ಕಾಲು ಜಾರಿ ಮ್ಯಾನ್​ಹೋಲ್​ಗೆ ಬಿದ್ದು, ಕೊಚ್ಚಿಹೋಗಿದ್ದಾರೆ. ಅವರ ದೇಹವಿನ್ನೂ ಪತ್ತೆಯಾಗಿಲ್ಲ.

ಇದನ್ನೂ ಓದಿ: Crime News: ಮಹಾರಾಷ್ಟ್ರದಲ್ಲಿ ಮನೆಯೊಳಗೆ ಜನರೇಟರ್ ಸ್ಫೋಟ; ಒಂದೇ ಕುಟುಂಬದ 6 ಜನ ಸಾವು

ಇದನ್ನೂ ಓದಿ: Karnataka Weather: ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ಕರ್ನಾಟಕದ ಈ ಕೆಳಗಿನ ಜಿಲ್ಲೆಗಳಲ್ಲಿ ಹೆಚ್ಚಲಿದೆ ಮಳೆಯ ಆರ್ಭಟ

(Mumbai Rains LIVE Updates Heavy Rains in Maharashtra Trains and Buses Affected Weather Today)

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ