AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai Rains: ಮುಂಬೈನಲ್ಲಿ ಭಾರೀ ಮಳೆಯಿಂದ ಕೆರೆಯಾದ ರಸ್ತೆಗಳು; ಬಸ್, ರೈಲು ಸಂಚಾರ ಅಸ್ಯವ್ಯಸ್ತ

Weather Today: ಮುಂಬೈನ ಮಳೆಯ ಅವಾಂತರಗಳ ವಿಡಿಯೋಗಳು ಕೂಡ ವೈರಲ್ ಆಗುತ್ತಿವೆ. ಮುಂದಿನ 24 ಗಂಟೆಗಳ ಕಾಲ ಮುಂಬೈನಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಲಿದೆ.

Mumbai Rains: ಮುಂಬೈನಲ್ಲಿ ಭಾರೀ ಮಳೆಯಿಂದ ಕೆರೆಯಾದ ರಸ್ತೆಗಳು; ಬಸ್, ರೈಲು ಸಂಚಾರ ಅಸ್ಯವ್ಯಸ್ತ
ಮುಂಬೈನಲ್ಲಿ ಮಳೆ
TV9 Web
| Edited By: |

Updated on: Jul 16, 2021 | 11:42 AM

Share

ಮುಂಬೈ: ಕಳೆದೊಂದು ವಾರದಿಂದ ದಕ್ಷಿಣ ಭಾರತದಲ್ಲಿ ಭಾರೀ ಮಳೆಯಾಗುತ್ತಿದೆ. ಕರ್ನಾಟಕ, ಕೇರಳ ಸೇರಿದಂತೆ ಹಲವೆಡೆ ವರುಣನ ಆರ್ಭಟ (Weather Today) ಹೆಚ್ಚಾಗಿದೆ. ಪಕ್ಕದ ರಾಜ್ಯವಾದ ಮಹಾರಾಷ್ಟ್ರದಲ್ಲೂ (Maharashtra Rain) ಕಳೆದೆರಡು ವಾರಗಳಿಂದ ಮಳೆ ಸುರಿಯುತ್ತಿದೆ. ಮುಂಬೈನಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಜನಜೀವ ಅಸ್ತವ್ಯಸ್ತವಾಗಿದೆ. ಮಳೆಯಿಂದ ಮುಂಬೈನಲ್ಲಿ (Mumbai Rains) ಬಸ್, ರೈಲು ಸಂಚಾರ ಸ್ಥಗಿತಗೊಂಡಿದೆ. ಅಂಧೇರಿಯಲ್ಲಿ ಮಹಿಳೆಯೊಬ್ಬಳು ಮ್ಯಾನ್​ಹೋಲ್​ನಲ್ಲಿ ಕೊಚ್ಚಿಹೋಗಿರುವ ಘಟನೆಯೂ ನಡೆದಿದೆ.

ಮುಂಬೈ, ಥಾಣೆ, ನವಿ ಮುಂಬೈ, ಪಲ್ಘಾರ್ ಮುಂತಾದ ಪ್ರದೇಶದಲ್ಲಿ ಮಳೆ ಹೆಚ್ಚಾಗಿದೆ. ಮಹಾರಾಷ್ಟ್ರದ ಬಹುತೇಕ ಕಡೆ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆಯ ಆರ್ಭಟವಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬೈ ಸುತ್ತಮುತ್ತಲಿನ ರಸ್ತೆಗಳೆಲ್ಲ ನದಿಗಳಂತಾಗಿದ್ದು, ಜನರು ಒಂದು ಕಡೆಯಿಂದ ಮತ್ತೊಂದು ಕಡೆ ಹೋಗಲು ಪರದಾಡುತ್ತಿದ್ದಾರೆ. ಅಂಧೇರಿ, ಚೆಂಬೂರ್, ಸಿಯೋನ್, ಮುಂಬೈನಲ್ಲಿ ರಸ್ತೆಗಳಲ್ಲಿ ನೀರು ತುಂಬಿ ಬಸ್​ ಸಂಚಾರ ವ್ಯತ್ಯಯವಾಗಿದೆ.

ಮುಂಬೈನ ಮಳೆಯ ಅವಾಂತರಗಳ ವಿಡಿಯೋಗಳು ಕೂಡ ವೈರಲ್ ಆಗುತ್ತಿವೆ. ಮುಂದಿನ 24 ಗಂಟೆಗಳ ಕಾಲ ಮುಂಬೈನಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಲಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಇನ್ನೂ ಮೂರ್ನಾಲ್ಕು ದಿನ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮಳೆಯಿಂದ ಮುಂಬೈನಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ಬಹುತೇಕ ರಸ್ತೆಗಲ್ಲಿ ನೀರು ತುಂಬಿರುವುದರಿಂದ ವಾಹನ ಸಂಚಾರ ಅಸಾಧ್ಯವಾಗಿದೆ. ಬಸ್​ ಮತ್ತು ರೈಲು ಸಂಚಾರದ ಮಾರ್ಗವೂ ಬದಲಾಗಿದೆ.

ಪೂರ್ವ ಅರಬ್ಬಿ ಸಮುದ್ರದಲ್ಲಿ ಮಳೆ ಸುರಿಯುತ್ತಿರುವುದರಿಂದ ದಕ್ಷಿಣ ಭಾರತದಲ್ಲಿ ಮಳೆ ಹೆಚ್ಚಾಗಿದೆ. ಕರ್ನಾಟಕದಲ್ಲೂ ಕಳೆದ ನಾಲ್ಕೈದು ದಿನಗಳಿಂದ ಮಳೆಯಾಗುತ್ತಿದ್ದು, ಇಂದಿನಿಂದ ಜು.18ರವರೆಗೆ ವರುಣನ ಆರ್ಭಟ ಮುಂದುವರೆಯಲಿದೆ. ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನ ಮಳೆ ಮುಂದುವರೆಯಲಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದೆ. ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜುಲೈ 18ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಮಹಾರಾಷ್ಟ್ರದ ಮುಂಬೈನ ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಜನರು ಎತ್ತರದ ಪ್ರದೇಶಗಳಿಗೆ ತೆರಳುವಂತೆ ಮುಂಬೈ ಮಹಾನಗರ ಪಾಲಿಕೆ ಸೂಚನೆ ನೀಡಿದೆ. ಅಂಧೇರಿಯಲ್ಲಿ ಮಹಿಳೆಯೊಬ್ಬರು ಕಾಲು ಜಾರಿ ಮ್ಯಾನ್​ಹೋಲ್​ಗೆ ಬಿದ್ದು, ಕೊಚ್ಚಿಹೋಗಿದ್ದಾರೆ. ಅವರ ದೇಹವಿನ್ನೂ ಪತ್ತೆಯಾಗಿಲ್ಲ.

ಇದನ್ನೂ ಓದಿ: Crime News: ಮಹಾರಾಷ್ಟ್ರದಲ್ಲಿ ಮನೆಯೊಳಗೆ ಜನರೇಟರ್ ಸ್ಫೋಟ; ಒಂದೇ ಕುಟುಂಬದ 6 ಜನ ಸಾವು

ಇದನ್ನೂ ಓದಿ: Karnataka Weather: ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ಕರ್ನಾಟಕದ ಈ ಕೆಳಗಿನ ಜಿಲ್ಲೆಗಳಲ್ಲಿ ಹೆಚ್ಚಲಿದೆ ಮಳೆಯ ಆರ್ಭಟ

(Mumbai Rains LIVE Updates Heavy Rains in Maharashtra Trains and Buses Affected Weather Today)

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ