AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈಯಲ್ಲಿ 739 ಹೊಸ ಕೊವಿಡ್ ಪ್ರಕರಣ ಪತ್ತೆ; ಮಹಾರಾಷ್ಟ್ರದಲ್ಲಿ ಪ್ರಕರಣಗಳ ಸಂಖ್ಯೆ 1,081ಕ್ಕೆ ಏರಿಕೆ

ಧಾರಾವಿ ಕೊಳಚೆಗೇರಿಯಲ್ಲಿ ಹೊಸ 10 ಪ್ರಕರಣಗಳು ಪತ್ತೆಯಾಗಿದೆ ಎಂದು ಬಿಎಂಸಿ ಅಧಿಕಾರಿಗಳು ಹೇಳಿದ್ದಾರೆ. ಈ ಪ್ರಕರಣಗಳೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 37ಕ್ಕೇರಿದೆ. ಮೇ ತಿಂಗಳ ಆರಂಭ ವಾರದಲ್ಲಿ ಇಲ್ಲಿ ಯಾವುದೇ...

ಮುಂಬೈಯಲ್ಲಿ 739 ಹೊಸ ಕೊವಿಡ್ ಪ್ರಕರಣ ಪತ್ತೆ; ಮಹಾರಾಷ್ಟ್ರದಲ್ಲಿ ಪ್ರಕರಣಗಳ ಸಂಖ್ಯೆ 1,081ಕ್ಕೆ ಏರಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 01, 2022 | 8:33 PM

Share

ಮುಂಬೈ: ಮಹಾರಾಷ್ಟ್ರದಲ್ಲಿ ಮತ್ತೆ ಕೊವಿಡ್ (Covid-19) ಪ್ರಕರಣ ಏರಿಕೆ ಆಗಿದ್ದು ಬುಧವಾರ 1,081 ಹೊಸ ಪ್ರಕರಣಗಳು ವರದಿ ಆಗಿವೆ. ಫೆಬ್ರುವರಿ 24ರಲ್ಲಿ 1,124 ಪ್ರಕರಣಗಳೊಂದಿಗೆ ಅತೀ ಹೆಚ್ಚು ಕೊವಿಡ್ ಪ್ರಕರಣಗಳು ವರದಿ ಆಗಿದ್ದು, ಇದಾದ ನಂತರ ಇವತ್ತು ಅತೀ ಹೆಚ್ಚು ಪ್ರಕರಣಗಳು ಪತ್ತೆಯಾಗಿದೆ. ಈ ಪೈಕಿ ಮುಂಬೈಯಲ್ಲಿ 739 ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಏತನ್ಮಧ್ಯೆ, ಬೃಹನ್ಮುಂಬೈ ಕಾರ್ಪೊರೇಷನ್ (Brihanmumbai Municipal Corporation) ಕಮಿಷನರ್ ಇಕ್ಬಾಲ್ ಸಿಂಗ್ ಚಹಾಲ್ ಅವರು ಸೋಂಕು ಪತ್ತೆ ಮತ್ತು ಲಸಿಕೆ ಪ್ರಕ್ರಿಯೆಗಳನ್ನು ಹೆಚ್ಚಿಸುವಂತೆ ಆದೇಶಿಸಿದ್ದಾರೆ. ಮುಂಗಾರು ಸನಿಹವಾಗುತ್ತಿದ್ದಂತೆ ರೋಗ ಲಕ್ಷಣಗಳಿರುವ ಕೊವಿಡ್-19 ಪ್ರಕರಣಗಳು ಹೆಚ್ಚುವ ಸಾಧ್ಯತೆ ಇದೆ ಎಂದು ಕಮಿಷನರ್ ಹೇಳಿದ್ದಾರೆ.

ಧಾರಾವಿ ಕೊಳಚೆಗೇರಿಯಲ್ಲಿ 10 ಪ್ರಕರಣಗಳು ಪತ್ತೆ

ಧಾರಾವಿ ಕೊಳಚೆಗೇರಿಯಲ್ಲಿ ಹೊಸ 10 ಪ್ರಕರಣಗಳು ಪತ್ತೆಯಾಗಿದೆ ಎಂದು ಬಿಎಂಸಿ ಅಧಿಕಾರಿಗಳು ಹೇಳಿದ್ದಾರೆ. ಈ ಪ್ರಕರಣಗಳೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 37ಕ್ಕೇರಿದೆ. ಮೇ ತಿಂಗಳ ಆರಂಭ ವಾರದಲ್ಲಿ ಇಲ್ಲಿ ಯಾವುದೇ ಕೊವಿಡ್ ಪ್ರಕರಣಗಳು ವರದಿ ಆಗಿರಲಿಲ್ಲ. ಆದರೆ ಮೇ 15ರ ನಂತರ ಪ್ರಕರಣಗಳ ಸಂಖ್ಯೆ ಧುತ್ತನೆ ಏರಿದೆ. ಕೊವಿಡ್ ಸಾಂಕ್ರಾಮಿಕ ಹಬ್ಬಿದ ನಂತರ ಧಾರಾವಿಯಲ್ಲಿ ಇಲ್ಲಿಯವರೆಗೆ 8,707 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 8,252 ಮಂದಿ ಚೇತರಿಸಿಕೊಂಡಿದ್ದು, 419 ಮಂದಿ ಸಾವಿಗೀಡಾಗಿದ್ದಾರೆ.

ರಾಜ್ಯದಲ್ಲಿ ಮಂಗಳವಾರ 711 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಮವಾರ 431 ಸೋಂಕುಗಳು ದಾಖಲಾಗಿವೆ. ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 4,032 ಆಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಯಾವುದೇ ಕೊವಿಡ್ ಸಂಬಂಧಿತ ಸಾವುಗಳು ವರದಿಯಾಗಿಲ್ಲ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ