AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈಯಲ್ಲಿ 739 ಹೊಸ ಕೊವಿಡ್ ಪ್ರಕರಣ ಪತ್ತೆ; ಮಹಾರಾಷ್ಟ್ರದಲ್ಲಿ ಪ್ರಕರಣಗಳ ಸಂಖ್ಯೆ 1,081ಕ್ಕೆ ಏರಿಕೆ

ಧಾರಾವಿ ಕೊಳಚೆಗೇರಿಯಲ್ಲಿ ಹೊಸ 10 ಪ್ರಕರಣಗಳು ಪತ್ತೆಯಾಗಿದೆ ಎಂದು ಬಿಎಂಸಿ ಅಧಿಕಾರಿಗಳು ಹೇಳಿದ್ದಾರೆ. ಈ ಪ್ರಕರಣಗಳೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 37ಕ್ಕೇರಿದೆ. ಮೇ ತಿಂಗಳ ಆರಂಭ ವಾರದಲ್ಲಿ ಇಲ್ಲಿ ಯಾವುದೇ...

ಮುಂಬೈಯಲ್ಲಿ 739 ಹೊಸ ಕೊವಿಡ್ ಪ್ರಕರಣ ಪತ್ತೆ; ಮಹಾರಾಷ್ಟ್ರದಲ್ಲಿ ಪ್ರಕರಣಗಳ ಸಂಖ್ಯೆ 1,081ಕ್ಕೆ ಏರಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 01, 2022 | 8:33 PM

Share

ಮುಂಬೈ: ಮಹಾರಾಷ್ಟ್ರದಲ್ಲಿ ಮತ್ತೆ ಕೊವಿಡ್ (Covid-19) ಪ್ರಕರಣ ಏರಿಕೆ ಆಗಿದ್ದು ಬುಧವಾರ 1,081 ಹೊಸ ಪ್ರಕರಣಗಳು ವರದಿ ಆಗಿವೆ. ಫೆಬ್ರುವರಿ 24ರಲ್ಲಿ 1,124 ಪ್ರಕರಣಗಳೊಂದಿಗೆ ಅತೀ ಹೆಚ್ಚು ಕೊವಿಡ್ ಪ್ರಕರಣಗಳು ವರದಿ ಆಗಿದ್ದು, ಇದಾದ ನಂತರ ಇವತ್ತು ಅತೀ ಹೆಚ್ಚು ಪ್ರಕರಣಗಳು ಪತ್ತೆಯಾಗಿದೆ. ಈ ಪೈಕಿ ಮುಂಬೈಯಲ್ಲಿ 739 ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಏತನ್ಮಧ್ಯೆ, ಬೃಹನ್ಮುಂಬೈ ಕಾರ್ಪೊರೇಷನ್ (Brihanmumbai Municipal Corporation) ಕಮಿಷನರ್ ಇಕ್ಬಾಲ್ ಸಿಂಗ್ ಚಹಾಲ್ ಅವರು ಸೋಂಕು ಪತ್ತೆ ಮತ್ತು ಲಸಿಕೆ ಪ್ರಕ್ರಿಯೆಗಳನ್ನು ಹೆಚ್ಚಿಸುವಂತೆ ಆದೇಶಿಸಿದ್ದಾರೆ. ಮುಂಗಾರು ಸನಿಹವಾಗುತ್ತಿದ್ದಂತೆ ರೋಗ ಲಕ್ಷಣಗಳಿರುವ ಕೊವಿಡ್-19 ಪ್ರಕರಣಗಳು ಹೆಚ್ಚುವ ಸಾಧ್ಯತೆ ಇದೆ ಎಂದು ಕಮಿಷನರ್ ಹೇಳಿದ್ದಾರೆ.

ಧಾರಾವಿ ಕೊಳಚೆಗೇರಿಯಲ್ಲಿ 10 ಪ್ರಕರಣಗಳು ಪತ್ತೆ

ಧಾರಾವಿ ಕೊಳಚೆಗೇರಿಯಲ್ಲಿ ಹೊಸ 10 ಪ್ರಕರಣಗಳು ಪತ್ತೆಯಾಗಿದೆ ಎಂದು ಬಿಎಂಸಿ ಅಧಿಕಾರಿಗಳು ಹೇಳಿದ್ದಾರೆ. ಈ ಪ್ರಕರಣಗಳೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 37ಕ್ಕೇರಿದೆ. ಮೇ ತಿಂಗಳ ಆರಂಭ ವಾರದಲ್ಲಿ ಇಲ್ಲಿ ಯಾವುದೇ ಕೊವಿಡ್ ಪ್ರಕರಣಗಳು ವರದಿ ಆಗಿರಲಿಲ್ಲ. ಆದರೆ ಮೇ 15ರ ನಂತರ ಪ್ರಕರಣಗಳ ಸಂಖ್ಯೆ ಧುತ್ತನೆ ಏರಿದೆ. ಕೊವಿಡ್ ಸಾಂಕ್ರಾಮಿಕ ಹಬ್ಬಿದ ನಂತರ ಧಾರಾವಿಯಲ್ಲಿ ಇಲ್ಲಿಯವರೆಗೆ 8,707 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 8,252 ಮಂದಿ ಚೇತರಿಸಿಕೊಂಡಿದ್ದು, 419 ಮಂದಿ ಸಾವಿಗೀಡಾಗಿದ್ದಾರೆ.

ರಾಜ್ಯದಲ್ಲಿ ಮಂಗಳವಾರ 711 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಮವಾರ 431 ಸೋಂಕುಗಳು ದಾಖಲಾಗಿವೆ. ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 4,032 ಆಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಯಾವುದೇ ಕೊವಿಡ್ ಸಂಬಂಧಿತ ಸಾವುಗಳು ವರದಿಯಾಗಿಲ್ಲ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ