AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delta Plus Variant: ಮುಂಬೈನಲ್ಲಿ ಡೆಲ್ಟಾ ಪ್ಲಸ್​ ಸೋಂಕಿಗೆ ಮೊದಲ ಬಲಿ; ಎರಡು ಡೋಸ್​ ಕೊರೊನಾ ಲಸಿಕೆ ಪಡೆದ ವೃದ್ಧೆ ಸಾವು

ಮಹಾರಾಷ್ಟ್ರ ರಾಜ್ಯದಲ್ಲಿ ಡೆಲ್ಟಾ ಪ್ಲಸ್​ ಸೋಂಕಿತರ ಸಂಖ್ಯೆ 65 ಆಗಿದೆ ಎಂದು ಬುಧವಾರವಷ್ಟೇ ಅಲ್ಲಿನ ಆರೋಗ್ಯ ಇಲಾಖೆ ಮಾಹಿತಿ ನೀಡಿತ್ತು. ಇದೀಗ ಅದರ ಬೆನ್ನಲ್ಲೇ ರಾಜ್ಯದಲ್ಲಿ ಡೆಲ್ಟಾ ಪ್ಲಸ್​ ಸೋಂಕಿಗೆ ಮೊದಲ ಸಾವು ಸಂಭವಿಸಿರುವ ಸುದ್ದಿಯೂ ಹೊರಬಿದ್ದಿದೆ.

Delta Plus Variant: ಮುಂಬೈನಲ್ಲಿ ಡೆಲ್ಟಾ ಪ್ಲಸ್​ ಸೋಂಕಿಗೆ ಮೊದಲ ಬಲಿ; ಎರಡು ಡೋಸ್​ ಕೊರೊನಾ ಲಸಿಕೆ ಪಡೆದ ವೃದ್ಧೆ ಸಾವು
ಡೆಲ್ಟಾ ಪ್ಲಸ್ ರೂಪಾಂತರಿ
TV9 Web
| Edited By: |

Updated on:Aug 13, 2021 | 11:20 AM

Share

ದೆಹಲಿ: ಭಾರತದ ಕೆಲ ರಾಜ್ಯಗಳಲ್ಲಿ ಕೊರೊನಾ ಸೋಂಕು ಮತ್ತೆ ಹೆಚ್ಚಳವಾಗುತ್ತಿದ್ದು, ಮುಂಬೈನಲ್ಲಿ ಡೆಲ್ಟಾ ಪ್ಲಸ್ ತಳಿ ಸೋಂಕಿಗೆ ಮೊದಲ ಸಾವು ಸಂಭವಿಸಿದೆ. 63 ವರ್ಷದ ವೃದ್ಧೆ ಡೆಲ್ಟಾ ಪ್ಲಸ್ ಕೊವಿಡ್ ಸೋಂಕಿನಿಂದ ಸಾವಿಗೀಡಾಗಿದ್ದು, ಅವರು 2 ಡೋಸ್​ ಕೊರೊನಾ ಲಸಿಕೆಯನ್ನು ತೆಗೆದುಕೊಂಡಿದ್ದರಾದರೂ ಇನ್ನಿತರ ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಮಹಾರಾಷ್ಟ್ರ ರಾಜ್ಯದಲ್ಲಿ ಡೆಲ್ಟಾ ಪ್ಲಸ್​ ಸೋಂಕಿತರ ಸಂಖ್ಯೆ 65 ಆಗಿದೆ ಎಂದು ಬುಧವಾರವಷ್ಟೇ ಅಲ್ಲಿನ ಆರೋಗ್ಯ ಇಲಾಖೆ ಮಾಹಿತಿ ನೀಡಿತ್ತು. ಇದೀಗ ಅದರ ಬೆನ್ನಲ್ಲೇ ರಾಜ್ಯದಲ್ಲಿ ಡೆಲ್ಟಾ ಪ್ಲಸ್​ ಸೋಂಕಿಗೆ ಮೊದಲ ಸಾವು ಸಂಭವಿಸಿರುವ ಸುದ್ದಿಯೂ ಹೊರಬಿದ್ದಿದೆ. ಡೆಲ್ಟಾ ಪ್ಲಸ್​ ಸೋಂಕಿತರ ಪೈಕಿ ಹೊಸದಾಗಿ ಪತ್ತೆಯಾದ 20 ಮಂದಿಯಲ್ಲಿ 7 ಜನ ಮುಂಬೈ, 3 ಜನ ಪುಣೆ, ಹಾಗೂ ನಾಂದೇಡ್​, ಗೋಂದಿಯಾ, ರಾಯ್​ಗಡ, ಪಲ್​ಘರ್​ನಲ್ಲಿ ತಲಾ ಇಬ್ಬರು, ಚಂದ್ರಾಪುರ ಹಾಗೂ ಅಕೋಲಾದಲ್ಲಿ ತಲಾ ಒಬ್ಬರು ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಮಹಾರಾಷ್ಟ್ರ ಆರೋಗ್ಯ ಇಲಾಖೆ ತಿಳಿಸಿದೆ.

ಇನ್ನೊಂದು ಗಮನಾರ್ಹ ಅಂಶವೆಂದರೆ ಮಹಾರಾಷ್ಟ್ರದಲ್ಲಿ ಜೆನೆಟಿಕ್​ ಸೀಕ್ವೆನ್ಸಿಂಗ್​ ಟೆಸ್ಟ್​ ಮೂಲಕ ಪರೀಕ್ಷೆಗೆ ಒಳಪಟ್ಟ ಶೇ.80ಕ್ಕೂ ಹೆಚ್ಚು ಮಾದರಿಗಳಲ್ಲಿ ಡೆಲ್ಟಾ ಪ್ಲಸ್​ ತಳಿ ಸೋಂಕು ಕಂಡುಬಂದಿದೆ. 19ರಿಂದ45 ವರ್ಷ ವಯೋಮಾನದವರಲ್ಲಿ 33 ಜನರಿಗೆ, 46 ರಿಂದ 60 ವಯೋಮಾನದವರಲ್ಲಿ 17 ಜನರಿಗೆ, 18 ವರ್ಷದೊಳಗಿನ 7 ಮಕ್ಕಳಿಗೆ ಹಾಗೂ 60 ವರ್ಷ ಮೇಲ್ಪಟ್ಟ 8 ಮಂದಿಗೆ ಡೆಲ್ಟಾ ಪ್ಲಸ್ ಸೋಂಕು ತಗುಲಿದೆ.

ಮಹಾರಾಷ್ಟ್ರದಲ್ಲಿ ಕೊರೊನಾ ನಿಯಮಾವಳಿಗೆ ಸಂಬಂಧಿಸಿದಂತೆ ಪ್ರಸ್ತುತ ಹೊಸ ಅಧಿಸೂಚನೆಯೊಂದನ್ನು ಹೊರಡಿಸಲಾಗಿದ್ದು, ಅದರ ಪ್ರಕಾರ ಜಿಮ್​, ಪಾರ್ಲರ್​, ಸಲೂನ್​ಗಳಿಗೆ ಶೇ.50ರಷ್ಟು ಜನರೊಂದಿಗೆ ತೆರೆಯಲು ಅನುಮತಿ ನೀಡಲಾಗಿದೆ. ಜತೆಗೆ, ಎಲ್ಲಾ ಅಂಗಡಿಗಳಿಗೆ ರಾತ್ರಿ 10 ರ ತನಕ ತೆರೆಯಲು ಅವಕಾಶ ಕೊಡಲಾಗಿದ್ದು, ಮದುವೆ ಸಮಾರಂಭಗಳಿಗೆ ಗರಿಷ್ಠ 200 ಜನ ಸೇರಲು ಮಾತ್ರ ಅನುಮತಿ ಇದೆ. ಸರ್ಕಾರಿ ಕಚೇರಿಗಳಲ್ಲಿ ಎರಡು ಡೋಸ್​ ಕೊರೊನಾ ಲಸಿಕೆ ಪಡೆದ ನೌಕರರಿಗೆ ಅವಕಾಶವಿದ್ದು, ಖಾಸಗಿ ಸಂಸ್ಥೆಗಳು ಕೂಡಾ 2 ಡೋಸ್​ ಲಸಿಕೆ ಪಡೆದ ಉದ್ಯೋಗಿಗಳೊಂದಿಗೆ 24 ತಾಸು ಕೆಲಸ ಮಾಡಬಹುದಾಗಿದೆ.

ಆದರೆ, ಧಾರ್ಮಿಕ, ರಾಜಕೀಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ನಿರ್ಬಂಧ ಮುಂದುವರೆದಿದ್ದು ಜನ ಗುಂಪುಗೂಡುವುದಕ್ಕೆ ಅವಕಾಶ ಇಲ್ಲ. ಅಂತೆಯೇ ಸಿನಿಮಾ ಹಾಲ್, ಮಲ್ಟಿಪ್ಲೆಕ್ಟ್, ದೇವಸ್ಥಾನಗಳನ್ನು ತೆರೆಯುವುದಕ್ಕೂ ಸದ್ಯ ಅವಕಾಶ ನೀಡಲಾಗಿಲ್ಲ.

ಇದನ್ನೂ ಓದಿ: ಕೊವಿಡ್ -19 ಲಸಿಕೆಗಳಿಗೆ ಡೆಲ್ಟಾ ಪ್ರಸರಣವನ್ನು ನಿಲ್ಲಿಸಲು ಸಾಧ್ಯವಾಗದೇ ಇರಬಹುದು: ಎಚ್ಚರಿಕೆ ನೀಡಿದ ಬ್ರಿಟನ್

ಡೆಲ್ಟಾ ರೂಪಾಂತರಿ ವೈರಾಣು ವಿರುದ್ಧ ಸ್ಪುಟ್ನಿಕ್​ ವಿ ಲಸಿಕೆ ಶೇ.83ರಷ್ಟು ಪ್ರಭಾವಶಾಲಿ..

(Mumbai reports first Death from Covid 19 Delta Plus Variant Fully vaccinated woman died)

Published On - 11:19 am, Fri, 13 August 21

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ