AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಮಾಸ್​ ಬೆಂಬಲಿಸಿ ಪೋಸ್ಟ್​, ಶಾಲೆಯ ಮುಖ್ಯ ಶಿಕ್ಷಕಿಯಿಂದ ರಾಜೀನಾಮೆ ಕೇಳಿದ ಆಡಳಿತ ಮಂಡಳಿ

ಹಮಾಸ್ ಪರವಾಗಿ ಪೋಸ್ಟ್​ ಮಾಡಿದ್ದ ಮುಂಬೈನ ಸೋಮಯ್ಯ ಶಾಲೆಯ ಪ್ರಾಂಶುಪಾಲೆ ಪರ್ವೀನ್​ ಶೇಖ್​ಗೆ ರಾಜೀನಾಮೆ ನೀಡುವಂತೆ ಆಡಳಿತ ಮಂಡಳಿ ಸೂಚಿಸಿದೆ.

ಹಮಾಸ್​ ಬೆಂಬಲಿಸಿ ಪೋಸ್ಟ್​, ಶಾಲೆಯ ಮುಖ್ಯ ಶಿಕ್ಷಕಿಯಿಂದ ರಾಜೀನಾಮೆ ಕೇಳಿದ ಆಡಳಿತ ಮಂಡಳಿ
ಶಾಲೆ-ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on: May 08, 2024 | 8:55 AM

Share

ಹಮಾಸ್​-ಇಸ್ರೇಲ್​ ಸಂಘರ್ಷದ ಕುರಿತು ಪೋಸ್ಟ್​ ಮಾಡಿದ್ದ ಮುಂಬೈನ ಸೋಮಯ್ಯ ಶಾಲೆಯ ಪ್ರಾಂಶುಪಾಲೆ ಪರ್ವೀನ್​ ಶೇಖ್​ಗೆ ರಾಜೀನಾಮೆ ನೀಡುವಂತೆ ಆಡಳಿತ ಮಂಡಳಿ ಸೂಚಿಸಿದೆ. ಪರ್ವೀನ್​ ಹಮಾಸ್​ ಪರವಾಗಿ ಪೋಸ್ಟ್ ಮಾಡಿದ್ದು, ಇಸ್ಲಾಮಿಕ್ ಮೂಲಭೂತವಾದಿಗಳ ಬಗ್ಗೆ ತಮ್ಮ ಸಹಾನುಭೂತಿಯನ್ನು ವ್ಯಕ್ತಪಡಿಸಿದ್ದರು.

ಶಾಲಾ ಆಡಳಿತ ಮಂಡಳಿ ಅವರ ರಾಜೀನಾಮೆಯನ್ನು ಕೇಳಿದ್ದು, ಪರ್ವೀನ್​ ಅದನ್ನು ನಿರಾಕರಿಸಿದ್ದಾರೆ. ಪರ್ವೀನ್​ ಕಳೆದ 12 ವರ್ಷಗಳಿಂದ ಆ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದು, 7 ವರ್ಷಗಳಿಂದ ಶಾಲೆಯ ಪ್ರಾಂಶುಪಾಲರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಈ ಶಾಲೆಯು ಮುಂಬೈನ ವಿದ್ಯಾವಿಹಾರ್ ಪ್ರದೇಶದಲ್ಲಿದೆ.

ನಾನು ಪ್ರಜಾಸತ್ತಾತ್ಮಕ ಭಾರತದಲ್ಲಿ ವಾಸಿಸುತ್ತಿದ್ದೇನೆ, ನಾನು ಅಭಿವ್ಯಕ್ತಿ ಸ್ವಾತಂತ್ರ್ಯದ ತತ್ವವನ್ನು ಆಳವಾಗಿ ಗೌರವಿಸುತ್ತೇನೆ ಏಕೆಂದರೆ ಅದು ಪ್ರಜಾಪ್ರಭುತ್ವದ ಮೂಲಾಧಾರವಾಗಿದೆ. ನಾನು ರಾಜೀನಾಮೆ ನೀಡುವುದಿಲ್ಲ ಏಕೆಂದರೆ ನಾನು ಈ ಸಂಸ್ಥೆಗೆ ಸರ್ವಸ್ವವನ್ನೂ ನೀಡಿದ್ದೇನೆ ಎಂದಿದ್ದಾರೆ.

ಮತ್ತಷ್ಟು ಓದಿ: ಗಾಜಾದ ಆಸ್ಪತ್ರೆಯಲ್ಲಿ ಸಾಮೂಹಿಕ ಸಮಾಧಿ, 200ಕ್ಕೂ ಅಧಿಕ ಶವಗಳು ಪತ್ತೆ

ಆಕೆಯ ವೈಯಕ್ತಿಕ ಸಾಮಾಜಿಕ ಮಾಧ್ಯಮ ಚಟುವಟಿಕೆಗಳು ಶಿಕ್ಷಣ ಸಂಸ್ಥೆಯು ಪಾಲಿಸುವ ಮೌಲ್ಯಗಳೊಂದಿಗೆ ಹೊಂದಿಕೆಯಾಗುವುದಿಲ್ಲ ಎಂದು ಶಾಲಾ ಆಡಳಿತ ಮಂಡಳಿ ಹೇಳಿದೆ. ಮೇ 2 ರಂದು ಆಕೆಯ ಸಾಮಾಜಿಕ ಮಾಧ್ಯಮದ ಚಟುವಟಿಕೆಗಳಿಂದಾಗಿ ರಾಜೀನಾಮೆ ನೀಡುವಂತೆ ಶೇಖ್ ಅವರನ್ನು ಮ್ಯಾನೇಜ್‌ಮೆಂಟ್ ಕೇಳಿದೆ.

ಕಳೆದ ವಾರದ ಆರಂಭದಲ್ಲಿ, ಸೋಮಯ್ಯ ಶಾಲಾ ಆಡಳಿತವು ಶೇಖ್‌ನಿಂದ ಲಿಖಿತ ಸ್ಪಷ್ಟೀಕರಣವನ್ನು ಕೇಳಿದೆ ಮತ್ತು ಅವರ ಉತ್ತರಕ್ಕಾಗಿ ಕಾಯುತ್ತಿದೆ.

ಶಾಲಾ ಆಡಳಿತ ಮಂಡಳಿಯು ತನ್ನ ಪರವಾಗಿ ನಿಲ್ಲದಿರಲು ನಿರ್ಧರಿಸಿದ್ದರಿಂದ ಮತ್ತು ಕಠಿಣ ಮತ್ತು ಅನಪೇಕ್ಷಿತ ಕ್ರಮ ತೆಗೆದುಕೊಂಡಿದ್ದರಿಂದ ತಾನು ನಿರಾಶೆಗೊಂಡಿದ್ದೇನೆ ಎಂದು ಪರ್ವೀನ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!