AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಲ್ಪ ತಡವಾಗಿದ್ರು ಪ್ರಾಣ ಹೋಗ್ತಿತ್ತು: ಮುಂಬೈನ ಗಗನಚುಂಬಿ ಕಟ್ಟಡದ 22ನೇ ಮಹಡಿಯ ಪ್ಯಾರಪೆಟ್​ನಲ್ಲಿ ಕುಳಿತಿದ್ದ ವೃದ್ಧರ ರಕ್ಷಣೆ

ಮುಂಬೈನ ಕಾಂದಿವಾಲಿ ಹೈರೈಸ್​ನ 22ನೇ ಮಹಡಿಯ ಪ್ಯಾರಪೆಟ್​ನಲ್ಲಿ ಕುಳಿತಿದ್ದ 70 ವರ್ಷದ ವೃದ್ಧರನ್ನು ರಕ್ಷಿಸಲಾಗಿದೆ. ವೃದ್ಧರು ಮಾನಸಿಕ ಅಸ್ವಸ್ಥರಾಗಿದ್ದರು ಎಂಬುದು ತಿಳಿದುಬಂದಿದೆ.

ಸ್ವಲ್ಪ ತಡವಾಗಿದ್ರು ಪ್ರಾಣ ಹೋಗ್ತಿತ್ತು: ಮುಂಬೈನ ಗಗನಚುಂಬಿ ಕಟ್ಟಡದ 22ನೇ ಮಹಡಿಯ ಪ್ಯಾರಪೆಟ್​ನಲ್ಲಿ ಕುಳಿತಿದ್ದ ವೃದ್ಧರ ರಕ್ಷಣೆ
ವೃದ್ಧರ ರಕ್ಷಣೆ
ನಯನಾ ರಾಜೀವ್
|

Updated on: Mar 06, 2023 | 8:41 AM

Share

ಮುಂಬೈನ ಕಾಂದಿವಾಲಿ ಹೈರೈಸ್​ನ 22ನೇ ಮಹಡಿಯ ಪ್ಯಾರಪೆಟ್​ನಲ್ಲಿ ಕುಳಿತಿದ್ದ 70 ವರ್ಷದ ವೃದ್ಧರನ್ನು ರಕ್ಷಿಸಲಾಗಿದೆ. ವೃದ್ಧರು ಮಾನಸಿಕ ಅಸ್ವಸ್ಥರಾಗಿದ್ದರು ಎಂಬುದು ತಿಳಿದುಬಂದಿದೆ. ಅಗ್ನಿಶಾಮಕ ದಳದ ಮಾಹಿತಿಯ ಪ್ರಕಾರ, ವ್ಯಕ್ತಿ 32 ಅಂತಸ್ತಿನ ಕಟ್ಟಡದ 22 ನೇ ಮಹಡಿಯಲ್ಲಿ ಸುಮಾರು 4 ಅಡಿಗಳಷ್ಟು ಸುರಕ್ಷತಾ ಗೋಡೆಯ ಮೇಲೆ ಹತ್ತಿ 6 ಅಡಿ ಆಳದ ಪ್ಯಾರಪೆಟ್ ಗೋಡೆಯ ಮೇಲೆ ಇವರು ಇಳಿದಿದ್ದರು.

ಸ್ವಲ್ಪ ತಡವಾಗಿದ್ದರೂ ಅವರ ಪ್ರಾಣಕ್ಕೆ ಅಪಾಯವಿತ್ತು. ವೃದ್ಧರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪ್ಯಾರಪೆಟ್ ಗೋಡೆಯ ಮೇಲೆ ಕುಳಿತಿರುವ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸುರಕ್ಷತಾ ಸರಂಜಾಮು, ಹಗ್ಗ ಮತ್ತು ವಿವಿಧ ಸಾಧನಗಳನ್ನು ಬಳಸಿ ಪ್ಯಾರಪೆಟ್ ಗೋಡೆಯ ಮೇಲೆ ಇಳಿದು ಅವರನ್ನು ರಕ್ಷಿಸಿದ್ದಾರೆ.

ಮತ್ತಷ್ಟು ಓದಿ: Viral Video: ದೋಸೆ ಹಿಟ್ಟಿನಿಂದ ಬೆಕ್ಕಿನ ಚಿತ್ರ ಬಿಡಿಸಿದ ವಿಡಿಯೋ ವೈರಲ್​​

ಗಗನಚುಂಬಿ ಕಟ್ಟಡದ 22 ನೇ ಮಹಡಿಯಲ್ಲಿರುವ ಆಶ್ರಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಕುಳಿತಿದ್ದಾರೆ ಎಂದು ಸಂಜೆ 5:15 ರ ಸುಮಾರಿಗೆ ಅಗ್ನಿಶಾಮಕ ದಳಕ್ಕೆ ಕರೆ ಬಂದಿತ್ತು ಎಂದು ಅವರು ಹೇಳಿದರು. ಅಲ್ಲಿನ ನಿವಾಸಿಗಳು ಬೆಂಕಿ ಅಥವಾ ಇತರ ತುರ್ತು ಸಂದರ್ಭಗಳಲ್ಲಿ ಆ ಪ್ರದೇಶದ ಮೂಲಕ ಹಾದುಹೋಗಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ