AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಪಾಕಿಸ್ತಾನ ಸ್ವಾತಂತ್ರ್ಯ ದಿನಾಚರಣೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ ವಿದ್ಯಾರ್ಥಿಗಳ ಬಂಧನ

ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಯ ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಕಾಲೇಜು ವಿದ್ಯಾರ್ಥಿಗಳನ್ನು ಮುಂಬೈ ಪೊಲೀಸರು ಬುದ್ಧವಾರ ತಡರಾತ್ರಿ (ಆ.16) ಬಂಧಿಸಲಾಗಿದೆ. ಕೊಲಾಬಾ ಪ್ರದೇಶದ ಇಬ್ಬರು ವಿದ್ಯಾರ್ಥಿಗಳನ್ನು ತಡರಾತ್ರಿ ಬಂಧಿಸಿ, ಅವರಿಗೆ ಎಚ್ಚರಿಕೆ ನೀಡಿ, ಬಿಡುಗಡೆ ಮಾಡಲಾಗಿದೆ

ಮುಂಬೈ: ಪಾಕಿಸ್ತಾನ ಸ್ವಾತಂತ್ರ್ಯ ದಿನಾಚರಣೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ ವಿದ್ಯಾರ್ಥಿಗಳ ಬಂಧನ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Aug 16, 2023 | 2:55 PM

Share

ಮುಂಬೈ, ಆ.16 : ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆ(Pakistan Independence Day) ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಕಾಲೇಜು ವಿದ್ಯಾರ್ಥಿಗಳಿಬ್ಬರನ್ನು ಮುಂಬೈ ಪೊಲೀಸರು ಬುದ್ಧವಾರ ತಡರಾತ್ರಿ (ಆ.16) ಬಂಧಿಸಲಾಗಿದೆ. ಕೊಲಾಬಾ ಪ್ರದೇಶದ ಇಬ್ಬರು ವಿದ್ಯಾರ್ಥಿಗಳನ್ನು ತಡರಾತ್ರಿ ಬಂಧಿಸಿ, ಅವರಿಗೆ ಎಚ್ಚರಿಕೆ ನೀಡಿ, ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿದ್ಯಾರ್ಥಿಗಳು ತಮ್ಮ ಇನ್‌ಸ್ಟಾಗ್ರಾಮ್ ಸ್ಟೇಟಸ್‌ ಸ್ಟೋರಿಯಲ್ಲಿ ಪಾಕಿಸ್ತಾನದ ಧ್ವಜದ ಕ್ಲಿಪ್ ಪೋಸ್ಟ್ ಮಾಡಿದ್ದಾರೆ ಎಂದು ಕೊಲಾಬಾ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಕೊಲಾಬಾ ಮೂಲದ ಉದ್ಯಮಿಯೊಬ್ಬರು ಪೊಲೀಸರ ಗಮನಕ್ಕೆ ತಂದಿದ್ದು, ಇಬ್ಬರು ನಿವಾಸಿಗಳು ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಯ ಬಗ್ಗೆ Instagram ಸ್ಟೋರಿಯನ್ನು ಪೋಸ್ಟ್ ಮಾಡಿದ್ದಾರೆ. ಇದು ಸಮಾಜದ ಮೇಲೆ ಕೆಟ್ಟ ಪರಿಣಾಮವನ್ನು ಬೀರಬಹುದು ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: 77 ಭಾರತ-ಪಾಕ್​ ಗಡಿಯಲ್ಲಿ ಬೀಟಿಂಗ್ ರಿಟ್ರೀಟ್‌, ಈ ಬಾರಿಯೂ ಮೈನವಿರೇಳಿಸುವ ಸಂಭ್ರಮ

ಈ ದೂರಿನ ಆಧಾರದ ಮೇಲೆ, ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಸೋಮವಾರ ತಡರಾತ್ರಿ ವಿದ್ಯಾರ್ಥಿಗಳನ್ನು ಪತ್ತೆಹಚ್ಚಿ ಕೊಲಾಬಾ ಪೊಲೀಸ್ ಠಾಣೆಗೆ ಕರೆತಂದಿದೆ. ಸಿಆರ್‌ಪಿಸಿ ಸೆಕ್ಷನ್ 151 (3) ಅಡಿಯಲ್ಲಿ ಬಂಧನ ಮಾಡಲಾಗಿತ್ತು. ಇನ್ನು ಈ ಬಗ್ಗೆ ವಿದ್ಯಾರ್ಥಿಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದು, ಈ ಆಕ್ಷೇಪಾರ್ಹ ವೀಡಿಯೊವನ್ನು ತಮ್ಮ ಮೊಬೈಲ್ ಫೋನ್‌ನಿಂದ ಡಿಲೀಟ್​​ ಮಾಡುವಂತೆ ಪೊಲೀಸರು ಇಬ್ಬರು ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್