ಇಡೀ ಮುಂಬೈ ಮಹಾನಗರದಲ್ಲಿ ವಿದ್ಯುತ್ ಸಂಪೂರ್ಣ ಸ್ಥಗಿತ

ಮುಂಬೈ: ವಾಣಿಜ್ಯನಗರಿ ಮುಂಬೈ ಮಹಾನಗರದಲ್ಲಿ ವಿದ್ಯುತ್ ಸ್ಥಗಿತಗೊಂಡಿದೆ. ಇಡೀ ನಗರಕ್ಕೆ ವಿದ್ಯುತ್ ಸರಬರಾಜು ಮಾಡುವ ಗ್ರಿಡ್​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕರೆಂಟ್ ಕೈಕೊಟ್ಟಿದೆ. ಬೆಳಿಗ್ಗೆ 10 ಗಂಟೆಯಿಂದ ದಿಢೀರನೆ ಈ ಅವಾಂತರ.. ಮುಂಬೈ ಮಹಾನಗರಾದ್ಯಂತ ವಿದ್ಯುತ್ ಸಂಪೂರ್ಣ ಸ್ಥಗಿತಗೊಂಡಿರುವ ಕಾರಣ ನಗರ ಸಂಚಾರದ ಜೀವನಾಡಿಯಾಗಿರುವ ಉಪನಗರ ರೈಲು ಸೇವೆ ನಿಂತುಹೋಗಿದೆ. ಸಬ್ ಆರ್ಬನ್ ರೈಲು ಅವಲಂಬಿಸಿದ್ದ ಪ್ರಯಾಣಿಕರು ಪರದಾಡುವಂತಾಗಿದೆ. ಆದರೆ, ಪವರ್ ಕಟ್ ನಿಂದ ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್ ಗೆ ತೊಂದರೆಯುಂಟಾಗಿಲ್ಲ.

ಇಡೀ ಮುಂಬೈ ಮಹಾನಗರದಲ್ಲಿ ವಿದ್ಯುತ್ ಸಂಪೂರ್ಣ ಸ್ಥಗಿತ
ಸಾಧು ಶ್ರೀನಾಥ್​

Updated on: Oct 12, 2020 | 1:13 PM

ಮುಂಬೈ: ವಾಣಿಜ್ಯನಗರಿ ಮುಂಬೈ ಮಹಾನಗರದಲ್ಲಿ ವಿದ್ಯುತ್ ಸ್ಥಗಿತಗೊಂಡಿದೆ. ಇಡೀ ನಗರಕ್ಕೆ ವಿದ್ಯುತ್ ಸರಬರಾಜು ಮಾಡುವ ಗ್ರಿಡ್​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕರೆಂಟ್ ಕೈಕೊಟ್ಟಿದೆ.

ಬೆಳಿಗ್ಗೆ 10 ಗಂಟೆಯಿಂದ ದಿಢೀರನೆ ಈ ಅವಾಂತರ..
ಮುಂಬೈ ಮಹಾನಗರಾದ್ಯಂತ ವಿದ್ಯುತ್ ಸಂಪೂರ್ಣ ಸ್ಥಗಿತಗೊಂಡಿರುವ ಕಾರಣ ನಗರ ಸಂಚಾರದ ಜೀವನಾಡಿಯಾಗಿರುವ ಉಪನಗರ ರೈಲು ಸೇವೆ ನಿಂತುಹೋಗಿದೆ. ಸಬ್ ಆರ್ಬನ್ ರೈಲು ಅವಲಂಬಿಸಿದ್ದ ಪ್ರಯಾಣಿಕರು ಪರದಾಡುವಂತಾಗಿದೆ. ಆದರೆ, ಪವರ್ ಕಟ್ ನಿಂದ ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್ ಗೆ ತೊಂದರೆಯುಂಟಾಗಿಲ್ಲ.

Published On - 11:11 am, Mon, 12 October 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us