AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಏರ್​ಪೋರ್ಟ್​ನಲ್ಲಿ 40 ಕೋಟಿ ರೂ. ಮೌಲ್ಯದ ಕೊಕೇನ್​ ಸಾಗಿಸುತ್ತಿದ್ದ ಥೈಲೆಂಡ್ ಮಹಿಳೆಯ ಬಂಧನ

ಸುಮಾರು 40 ಕೋಟಿ ರೂ. ಮೌಲ್ಯದ ಕೊಕೇನ್(Cocaine)​ ಸಾಗಿಸುತ್ತಿದ್ದ ಥೈಲೆಂಡ್​ ಮಹಿಳೆಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ಶುಕ್ರವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ. ಡಿಆರ್‌ಐ, ವಿಶ್ವಾಸಾರ್ಹ ಮಾಹಿತಿಯ ಮೇರೆಗೆ, ಅಡಿಸ್ ಅಬಾಬಾದಿಂದ ಆಗಮಿಸಿದ ಮಹಿಳೆಯನ್ನು ಬಂಧಿಸಿದ್ದಾರೆ.

ಮುಂಬೈ ಏರ್​ಪೋರ್ಟ್​ನಲ್ಲಿ 40 ಕೋಟಿ ರೂ. ಮೌಲ್ಯದ ಕೊಕೇನ್​ ಸಾಗಿಸುತ್ತಿದ್ದ ಥೈಲೆಂಡ್ ಮಹಿಳೆಯ ಬಂಧನ
ಕೊಕೇನ್Image Credit source: India TV
ನಯನಾ ರಾಜೀವ್
|

Updated on:Jan 12, 2024 | 11:09 AM

Share

ಸುಮಾರು 40 ಕೋಟಿ ರೂ. ಮೌಲ್ಯದ ಕೊಕೇನ್(Cocaine)​ ಸಾಗಿಸುತ್ತಿದ್ದ ಥೈಲೆಂಡ್​ ಮಹಿಳೆಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ(DRI) ಶುಕ್ರವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ. ಡಿಆರ್‌ಐ, ವಿಶ್ವಾಸಾರ್ಹ ಮಾಹಿತಿಯ ಮೇರೆಗೆ, ಅಡಿಸ್ ಅಬಾಬದಿಂದ ಆಗಮಿಸಿದ ಮಹಿಳೆಯನ್ನು ಬಂಧಿಸಿದ್ದಾರೆ.

ಆಕೆಯ ಪರೀಕ್ಷೆ ಮಾಡಿದಾಗ ಯಾವುದೇ ಅನುಮಾನ ಬಂದಿರಲಿಲ್ಲ, ಆದರೂ ಅವರ ಟ್ರಾಲಿ ಬ್ಯಾಗ್​ನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಬಿಳಿ ಪುಡಿಯಂತಹ ವಸ್ತುವನ್ನು ಹೊಂದಿರುವ ಅನೇಕ ಪ್ಯಾಕೆಟ್​ಗಳು ಕಂಡುಬಂದಿವೆ. ನಂತರ ಅದು ಕೊಕೇನ್​ ಎಂದು ದೃಢಪಟ್ಟಿದೆ. ಅಂದಾಜು 40 ಕೋಟಿಗಳಷ್ಟು ಅಂತಾರಾಷ್ಟ್ರೀಯ ಮಾರುಕಟ್ಟೆ ಮೌಲ್ಯವನ್ನು ಹೊಂದಿದೆ.

ಬಂಧಿತ ಮಹಿಳೆಯ ವಿರುದ್ಧ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಬೆಂಗಳೂರು ಏರ್​ಪೋರ್ಟ್​ನಲ್ಲೂ 20 ಕೋಟಿ ಮೌಲ್ಯದ ಕೊಕೇನ್ ಪತ್ತೆಯಾಗಿತ್ತು ಡಿಸೆಂಬರ್​ 20ರಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿದೇಶದಿಂದ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಕೊಕೇನ್ ಜಪ್ತಿ ಮಾಡಿದ್ದರು.

ಮತ್ತಷ್ಟು ಓದಿ: ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ 11 ಜನ ವಿದ್ಯಾರ್ಥಿಗಳ ಬಂಧನ; ಉತ್ತರ ವಿಭಾಗದ ಪೊಲೀಸರಿಂದ ವಿಚಾರಣೆ

ಇಥಿಯೋಪಿಯಾದಿಂದ ಕ್ಯಾಪ್ಸುಲ್‌ಗಳ ರೂಪದಲ್ಲಿ 2 ಕೆಜಿ ಕೊಕೇನ್ ಸಾಗಿಸುತ್ತಿದ್ದ ವಿದೇಶಿ ಪ್ರಜೆ ಕೆಂಪೇಗೌಡ ಏರ್​ಪೋರ್ಟ್‌ನಲ್ಲಿ ಸಿಕ್ಕಿಬಿದ್ದಿದ್ದಾನೆ. ಬಂಧಿತನಿಂದ 20 ಕೋಟಿ ರೂ. ಮೌಲ್ಯದ 2 ಕೆಜಿ ಕೋಕೆನ್ ಡ್ರಗ್ಸ್ ವಶಕ್ಕೆ ಪಡೆದುಕೊಂಡಿದ್ದರು.

ಅದಿಸ್ ಅಬಾಬಾದಿಂದ ಇಥೋಪಿಯಾ ಏರ್ಲೈನ್ಸ್ ನಲ್ಲಿ ಬಂದಿದ್ದ ಆರೋಪಿ, ಡ್ರಗ್ಸ್​ ತುಂಬಿದ್ದ ಕ್ಯಾಪ್ಸೂಲ್‍ಗಳನ್ನು ನುಂಗಿಕೊಂಡು ಸಾಗಿಸುತ್ತಿದ್ದ. ಕಸ್ಟಮ್ಸ್ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು ಸ್ಕ್ಯಾನ್ ಮಾಡಿಸಿದಾಗ ಆರೋಪಿಯ ಹೊಟ್ಟೆಯಲ್ಲಿ 50ಕ್ಕೂ ಅಧಿಕ ಕ್ಯಾಪ್ಸೂಲ್​ಗಳು ಪತ್ತೆಯಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:09 am, Fri, 12 January 24

Follow Us
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ