ತಾನು ಕಳ್ಳತನ ಮಾಡಿದ್ದು ಪ್ರಸಿದ್ಧ ಕವಿಯ ಮನೆ ಎಂಬುದು ಅರಿತು ಕ್ಷಮೆ ಕೋರಿ ಎಲ್ಲವನ್ನೂ ಹಿಂದಿರುಗಿಸಿದ ವ್ಯಕ್ತಿ

ತಾನು ಕಳ್ಳತನ ಮಾಡಿದ್ದ ಮನೆ ಪ್ರಸಿದ್ಧ ಕವಿಯೊಬ್ಬರಿಗೆ ಸೇರಿದ್ದು ಎಂದು ಅರಿತ ಕಳ್ಳನೊಬ್ಬ ತಾನು ಕದ್ದ ವಸ್ತುಗಳನ್ನು ಹಿಂದಿರುಗಿಸಿ ಕ್ಷಮೆಯನ್ನು ಕೂಡ ಕೇಳಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ತಾನು ಕಳ್ಳತನ ಮಾಡಿದ್ದು ಪ್ರಸಿದ್ಧ ಕವಿಯ ಮನೆ ಎಂಬುದು ಅರಿತು ಕ್ಷಮೆ ಕೋರಿ ಎಲ್ಲವನ್ನೂ ಹಿಂದಿರುಗಿಸಿದ ವ್ಯಕ್ತಿ
ಮನೆ ಕಳ್ಳತನImage Credit source: Free Press Journal
Follow us
|

Updated on:Jul 17, 2024 | 11:17 AM

ತಾನು ಕಳ್ಳತನ ಮಾಡಿರುವ ಮನೆ ಪ್ರಸಿದ್ಧ ಕವಿಯೊಬ್ಬರಿಗೆ ಸೇರಿದ್ದು ಎಂಬುದನ್ನು ಅರಿತ ಕಳ್ಳನೊಬ್ಬ ಕ್ಷಮೆ ಕೋರಿ ಕದ್ದಿರುವ ಎಲ್ಲಾ ವಸ್ತುಗಳನ್ನು ಹಿಂದಿರುಗಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 2010 ರಲ್ಲಿ 84 ನೇ ವಯಸ್ಸಿನಲ್ಲಿ ನಿಧನರಾದ ಖ್ಯಾತ ಕವಿ ಮತ್ತು ಸಾಮಾಜಿಕ ಕಾರ್ಯಕರ್ತ ನಾರಾಯಣ ಸುರ್ವೆ ಅವರ ನಿವಾಸದಲ್ಲಿ ಈ ಘಟನೆ ನಡೆದಿದೆ.

ಮಗಳು ಸುಜಾತಾ ಮತ್ತು ಅವರ ಪತಿ ಗಣೇಶ್ ಘರೆ ಅವರು ಈಗ ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ನೇರಲ್‌ನಲ್ಲಿರುವ ಮನೆಯಲ್ಲಿ ವಾಸಿಸುತ್ತಿದ್ದಾರೆ ಆದರೆ ವಿರಾರ್‌ನಲ್ಲಿರುವ ತಮ್ಮ ಮಗನನ್ನು ಭೇಟಿ ಮಾಡಲು ಸುಮಾರು 10 ದಿನಗಳ ಕಾಲ ಹೊರಗೆ ಹೋಗಿದ್ದರು.

ಇದೇ ವೇಳೆ ಮನೆಗೆ ನುಗ್ಗಿದ ಕಳ್ಳ ಎಲ್ ಇಡಿ ಟಿವಿ ಸೆಟ್ ಸೇರಿದಂತೆ ಕೆಲ ವಸ್ತುಗಳನ್ನು ಕದ್ದೊಯ್ದಿದ್ದಾನೆ. ಮರುದಿನ ಇನ್ನೂ ಕೆಲವು ವಸ್ತುಗಳನ್ನು ತೆಗೆದುಕೊಳ್ಳಲು ಹಿಂತಿರುಗಿದಾಗ, ಆತ ಕೋಣೆಯಲ್ಲಿ ಸುರ್ವೆ ಅವರ ಫೋಟೋ ಮತ್ತು ಸ್ಮರಣಿಕೆಗಳನ್ನು ಗಮನಿಸಿದ್ದಾನೆ.

ಮತ್ತಷ್ಟು ಓದಿ: ಹಣ ಹಾಕದೆಯೇ ಎಟಿಎಂ ಕಳ್ಳತನವೆಂದು ದೂರು: ಬೆಡ್ ಶೀಟ್ ಹಾಕ್ಕೊಂಡು ಬಂದಿದ್ದ ಬ್ಯಾಂಕ್ ಸಿಬ್ಬಂದಿಯ ಕಳ್ಳಾಟ ಬಯಲು

ಬಳಿಕ ಆತ ಪಶ್ಚಾತಾಪ ಪಟ್ಟಿದ್ದಾನೆ, ತಾನು ತೆಗೆದುಕೊಂಡು ಹೋಗಿದ್ದ ಎಲ್ಲಾ ವಸ್ತುಗಳನ್ನು ವಾಪಸ್ ತಂದು ಇರಿಸಿದ್ದಷ್ಟೇ ಅಲ್ಲದೆ ಕ್ಷಮಾಪಣಾ ಪತ್ರವನ್ನು ಕೂಡ ಅಲ್ಲಿರಿಸಿ ಹೋಗಿದ್ದಾನೆ.

ಸುಜಾತಾ ಮತ್ತು ಅವರ ಪತಿ ಭಾನುವಾರ ವಿರಾರ್‌ನಿಂದ ಹಿಂದಿರುಗಿದಾಗ ಚೀಟಿ ಸಿಕ್ಕಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಟಿವಿ ಮೇಲೆ ಕಂಡುಬಂದ ಬೆರಳಚ್ಚು ಮತ್ತು ಇತರ ಆಧಾರದ ಮೇಲೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಸರ್ವೆ ಅವರು 16 ಆಗಸ್ಟ್ 2010 ರಂದು ತಮ್ಮ 84 ನೇ ವಯಸ್ಸಿನಲ್ಲಿ ನಿಧನರಾದರು. ಮುಂಬೈನಲ್ಲಿ ಜನಿಸಿದ ಸರ್ವೆಯ ಕವಿತೆಗಳು ತಳಮಟ್ಟದ ಕಾರ್ಮಿಕ ವರ್ಗದ ಹೋರಾಟಗಳಿಗೆ ಧ್ವನಿಯಾಗಿದ್ದರು. ಮುಂಬೈನ ಬೀದಿಗಳಲ್ಲಿ ಅನಾಥವಾಗಿ ಬೆಳೆದ, ಕವಿಯಾಗುವ ಮೊದಲು, ಸರ್ವೆ ಮನೆ ಮತ್ತು ಹೋಟೆಲ್‌ಗಳಲ್ಲಿ ಕೆಲಸ ಮಾಡುವುದರ ಜೊತೆಗೆ ಹಾಲು ಮಾರಾಟವನ್ನೂ ಮಾಡುತ್ತಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:16 am, Wed, 17 July 24

ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?