AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾನು ಕಳ್ಳತನ ಮಾಡಿದ್ದು ಪ್ರಸಿದ್ಧ ಕವಿಯ ಮನೆ ಎಂಬುದು ಅರಿತು ಕ್ಷಮೆ ಕೋರಿ ಎಲ್ಲವನ್ನೂ ಹಿಂದಿರುಗಿಸಿದ ವ್ಯಕ್ತಿ

ತಾನು ಕಳ್ಳತನ ಮಾಡಿದ್ದ ಮನೆ ಪ್ರಸಿದ್ಧ ಕವಿಯೊಬ್ಬರಿಗೆ ಸೇರಿದ್ದು ಎಂದು ಅರಿತ ಕಳ್ಳನೊಬ್ಬ ತಾನು ಕದ್ದ ವಸ್ತುಗಳನ್ನು ಹಿಂದಿರುಗಿಸಿ ಕ್ಷಮೆಯನ್ನು ಕೂಡ ಕೇಳಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ತಾನು ಕಳ್ಳತನ ಮಾಡಿದ್ದು ಪ್ರಸಿದ್ಧ ಕವಿಯ ಮನೆ ಎಂಬುದು ಅರಿತು ಕ್ಷಮೆ ಕೋರಿ ಎಲ್ಲವನ್ನೂ ಹಿಂದಿರುಗಿಸಿದ ವ್ಯಕ್ತಿ
ಮನೆ ಕಳ್ಳತನImage Credit source: Free Press Journal
ನಯನಾ ರಾಜೀವ್
|

Updated on:Jul 17, 2024 | 11:17 AM

Share

ತಾನು ಕಳ್ಳತನ ಮಾಡಿರುವ ಮನೆ ಪ್ರಸಿದ್ಧ ಕವಿಯೊಬ್ಬರಿಗೆ ಸೇರಿದ್ದು ಎಂಬುದನ್ನು ಅರಿತ ಕಳ್ಳನೊಬ್ಬ ಕ್ಷಮೆ ಕೋರಿ ಕದ್ದಿರುವ ಎಲ್ಲಾ ವಸ್ತುಗಳನ್ನು ಹಿಂದಿರುಗಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 2010 ರಲ್ಲಿ 84 ನೇ ವಯಸ್ಸಿನಲ್ಲಿ ನಿಧನರಾದ ಖ್ಯಾತ ಕವಿ ಮತ್ತು ಸಾಮಾಜಿಕ ಕಾರ್ಯಕರ್ತ ನಾರಾಯಣ ಸುರ್ವೆ ಅವರ ನಿವಾಸದಲ್ಲಿ ಈ ಘಟನೆ ನಡೆದಿದೆ.

ಮಗಳು ಸುಜಾತಾ ಮತ್ತು ಅವರ ಪತಿ ಗಣೇಶ್ ಘರೆ ಅವರು ಈಗ ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ನೇರಲ್‌ನಲ್ಲಿರುವ ಮನೆಯಲ್ಲಿ ವಾಸಿಸುತ್ತಿದ್ದಾರೆ ಆದರೆ ವಿರಾರ್‌ನಲ್ಲಿರುವ ತಮ್ಮ ಮಗನನ್ನು ಭೇಟಿ ಮಾಡಲು ಸುಮಾರು 10 ದಿನಗಳ ಕಾಲ ಹೊರಗೆ ಹೋಗಿದ್ದರು.

ಇದೇ ವೇಳೆ ಮನೆಗೆ ನುಗ್ಗಿದ ಕಳ್ಳ ಎಲ್ ಇಡಿ ಟಿವಿ ಸೆಟ್ ಸೇರಿದಂತೆ ಕೆಲ ವಸ್ತುಗಳನ್ನು ಕದ್ದೊಯ್ದಿದ್ದಾನೆ. ಮರುದಿನ ಇನ್ನೂ ಕೆಲವು ವಸ್ತುಗಳನ್ನು ತೆಗೆದುಕೊಳ್ಳಲು ಹಿಂತಿರುಗಿದಾಗ, ಆತ ಕೋಣೆಯಲ್ಲಿ ಸುರ್ವೆ ಅವರ ಫೋಟೋ ಮತ್ತು ಸ್ಮರಣಿಕೆಗಳನ್ನು ಗಮನಿಸಿದ್ದಾನೆ.

ಮತ್ತಷ್ಟು ಓದಿ: ಹಣ ಹಾಕದೆಯೇ ಎಟಿಎಂ ಕಳ್ಳತನವೆಂದು ದೂರು: ಬೆಡ್ ಶೀಟ್ ಹಾಕ್ಕೊಂಡು ಬಂದಿದ್ದ ಬ್ಯಾಂಕ್ ಸಿಬ್ಬಂದಿಯ ಕಳ್ಳಾಟ ಬಯಲು

ಬಳಿಕ ಆತ ಪಶ್ಚಾತಾಪ ಪಟ್ಟಿದ್ದಾನೆ, ತಾನು ತೆಗೆದುಕೊಂಡು ಹೋಗಿದ್ದ ಎಲ್ಲಾ ವಸ್ತುಗಳನ್ನು ವಾಪಸ್ ತಂದು ಇರಿಸಿದ್ದಷ್ಟೇ ಅಲ್ಲದೆ ಕ್ಷಮಾಪಣಾ ಪತ್ರವನ್ನು ಕೂಡ ಅಲ್ಲಿರಿಸಿ ಹೋಗಿದ್ದಾನೆ.

ಸುಜಾತಾ ಮತ್ತು ಅವರ ಪತಿ ಭಾನುವಾರ ವಿರಾರ್‌ನಿಂದ ಹಿಂದಿರುಗಿದಾಗ ಚೀಟಿ ಸಿಕ್ಕಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಟಿವಿ ಮೇಲೆ ಕಂಡುಬಂದ ಬೆರಳಚ್ಚು ಮತ್ತು ಇತರ ಆಧಾರದ ಮೇಲೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಸರ್ವೆ ಅವರು 16 ಆಗಸ್ಟ್ 2010 ರಂದು ತಮ್ಮ 84 ನೇ ವಯಸ್ಸಿನಲ್ಲಿ ನಿಧನರಾದರು. ಮುಂಬೈನಲ್ಲಿ ಜನಿಸಿದ ಸರ್ವೆಯ ಕವಿತೆಗಳು ತಳಮಟ್ಟದ ಕಾರ್ಮಿಕ ವರ್ಗದ ಹೋರಾಟಗಳಿಗೆ ಧ್ವನಿಯಾಗಿದ್ದರು. ಮುಂಬೈನ ಬೀದಿಗಳಲ್ಲಿ ಅನಾಥವಾಗಿ ಬೆಳೆದ, ಕವಿಯಾಗುವ ಮೊದಲು, ಸರ್ವೆ ಮನೆ ಮತ್ತು ಹೋಟೆಲ್‌ಗಳಲ್ಲಿ ಕೆಲಸ ಮಾಡುವುದರ ಜೊತೆಗೆ ಹಾಲು ಮಾರಾಟವನ್ನೂ ಮಾಡುತ್ತಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:16 am, Wed, 17 July 24

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?