AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರತಾ ಬೆದರಿಕೆಯಿಂದ ಚೆನ್ನೈಗೆ ತಿರುಗಿದ ಮುಂಬೈ- ಫುಕೆಟ್‌ ಮಾರ್ಗದ ಇಂಡಿಗೋ ವಿಮಾನ

ಮುಂಬೈನಿಂದ ಫುಕೆಟ್ ಮಾರ್ಗದಲ್ಲಿ ಭದ್ರತಾ ಬೆದರಿಕೆ ಉಂಟಾಗಿದ್ದರಿಂದ ಅದನ್ನು ಚೆನ್ನೈಗೆ ತಿರುಗಿಸಲಾಯಿತು. 6E 1089 ವಿಮಾನವು ಮುಂಬೈನಿಂದ ಹೊರಟಿತು. ಆದರೆ, ಚೆನ್ನೈಗೆ ಹೋಗುವ ಮಾರ್ಗವನ್ನು ಬದಲಾಯಿಸಿತು. ಅಲ್ಲಿ ಅಧಿಕಾರಿಗಳಿಗೆ ತಿಳಿಸಲಾಯಿತು ಮತ್ತು ವಿಮಾನವನ್ನು ಸಂಪೂರ್ಣ ಭದ್ರತಾ ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಭದ್ರತಾ ಬೆದರಿಕೆಯಿಂದ ಚೆನ್ನೈಗೆ ತಿರುಗಿದ ಮುಂಬೈ- ಫುಕೆಟ್‌ ಮಾರ್ಗದ ಇಂಡಿಗೋ ವಿಮಾನ
Indigo
ಸುಷ್ಮಾ ಚಕ್ರೆ
|

Updated on: Sep 19, 2025 | 10:54 PM

Share

ಚೆನ್ನೈ, ಸೆಪ್ಟೆಂಬರ್ 19: ಥೈಲ್ಯಾಂಡ್‌ನ ಫುಕೆಟ್‌ಗೆ ಹೋಗುತ್ತಿದ್ದ ಇಂಡಿಗೋ ವಿಮಾನದಲ್ಲಿ (IndiGo Flight) ಪ್ರಯಾಣದ ಮಧ್ಯದಲ್ಲಿ ಭದ್ರತಾ ಬೆದರಿಕೆ ಕಾಣಿಸಿಕೊಂಡ ನಂತರ ಇಂದು ಚೆನ್ನೈಗೆ ತಿರುಗಿಸಲಾಯಿತು. 6E 1089 ವಿಮಾನವು ಮುಂಬೈನಿಂದ ಹೊರಟಿತು. ಆದರೆ, ಚೆನ್ನೈಗೆ ಹೋಗುವ ಮಾರ್ಗವನ್ನು ಬದಲಾಯಿಸಿತು. ಅಲ್ಲಿ ಅಧಿಕಾರಿಗಳಿಗೆ ತಿಳಿಸಲಾಯಿತು ಮತ್ತು ವಿಮಾನವನ್ನು ಸಂಪೂರ್ಣ ಭದ್ರತಾ ಪರಿಶೀಲನೆಗೆ ಒಳಪಡಿಸಲಾಯಿತು.

“ಸೆಪ್ಟೆಂಬರ್ 19ರಂದು ಮುಂಬೈನಿಂದ ಫುಕೆಟ್‌ಗೆ ಹಾರಾಟ ನಡೆಸುತ್ತಿದ್ದ ಇಂಡಿಗೋ ವಿಮಾನ 6E 1089 ಅನ್ನು ವಿಮಾನದಲ್ಲಿ ಭದ್ರತಾ ಬೆದರಿಕೆ ಕಂಡುಬಂದ ಕಾರಣದಿಂದ ಚೆನ್ನೈಗೆ ತಿರುಗಿಸಲಾಯಿತು. ಪ್ರೊಟೋಕಾಲ್ ಪ್ರಕಾರ ಸಂಬಂಧಿತ ಅಧಿಕಾರಿಗಳಿಗೆ ತಕ್ಷಣವೇ ತಿಳಿಸಲಾಯಿತು. ಆ ವಿಮಾನವನ್ನು ಚೆನ್ನೈನಲ್ಲಿ ಅಗತ್ಯ ಭದ್ರತಾ ತಪಾಸಣೆಗೆ ಒಳಪಡಿಸಲಾಯಿತು. ಫುಕೆಟ್ ವಿಮಾನ ನಿಲ್ದಾಣದಲ್ಲಿ ರಾತ್ರಿ ಕರ್ಫ್ಯೂ ಇರುವುದರಿಂದ, ಪ್ರಯಾಣದ ಪುನರಾರಂಭವನ್ನು ರಾತ್ರಿಯ ನಂತರ ನಿಗದಿಪಡಿಸಲಾಗುವುದು” ಎಂದು ಇಂಡಿಗೋ ವಿಮಾನಯಾನ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಬಿಹಾರದಲ್ಲಿ ಹೊಸ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ; ಏನಿದರ ವಿಶೇಷತೆ?

ಗ್ರಾಹಕರಿಗೆ ಅನಾನುಕೂಲತೆಯನ್ನು ಕಡಿಮೆ ಮಾಡಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗಿದೆ. ಅವರಿಗೆ ಉಪಾಹಾರ ನೀಡುವುದು ಮತ್ತು ಅವರಿಗೆ ವಿಮಾನದ ಶೆಡ್ಯೂಲ್ ಕುರಿತ ಅಪ್​ಡೇಟ್ ನೀಡಲಾಗುತ್ತಿದೆ. “ನಮ್ಮ ಗ್ರಾಹಕರು, ಸಿಬ್ಬಂದಿ ಮತ್ತು ವಿಮಾನಗಳ ಸುರಕ್ಷತೆ ನಮ್ಮ ಪ್ರಮುಖ ಆದ್ಯತೆಯಾಗಿದೆ” ಎಂದು ಇಂಡಿಗೋ ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ