AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುರಸ್ತೆಯಲ್ಲಿ ಮಹಿಳಾ ಅಧಿಕಾರಿಯ ಕೂದಲು ಹಿಡಿದು ಜಗ್ಗಿ, ಥಳಿಸಿದ ಮಹಿಳೆ; ‘ನನ್ನನ್ನು ಮುಟ್ಟಲು ನೀನ್ಯಾರು’ ಎಂಬ ಆವಾಜ್​ ಬೇರೆ !

ಮಹಿಳೆ ಮೊದಲು ಆಟೋದಲ್ಲಿ ಕುಳಿತೇ ಆ ಮಹಿಳಾ ಅಧಿಕಾರಿಗೆ ಹೊಡೆದರು. ಕಾಲಿನಿಂದ ಒದ್ದರು, ನಂತರ ವಾಹನದಿಂದ ಕೆಳಗಿಳಿದು, ಅಧಿಕಾರಿಯ ತಲೆಕೂದಲನ್ನು ಹಿಡಿದು ಎಳೆದಿದ್ದಾರೆ.

ನಡುರಸ್ತೆಯಲ್ಲಿ ಮಹಿಳಾ ಅಧಿಕಾರಿಯ ಕೂದಲು ಹಿಡಿದು ಜಗ್ಗಿ, ಥಳಿಸಿದ ಮಹಿಳೆ; ‘ನನ್ನನ್ನು ಮುಟ್ಟಲು ನೀನ್ಯಾರು’ ಎಂಬ ಆವಾಜ್​ ಬೇರೆ !
ನಡುಬೀದಿಯಲ್ಲಿ ಮಹಿಳಾ ಅಧಿಕಾರಿಗೆ ಹೊಡೆದ ಮಹಿಳೆ
Lakshmi Hegde
|

Updated on: Mar 21, 2021 | 11:28 AM

Share

ಇಲ್ಲೊಬ್ಬ ಮಹಿಳೆ ಮಾಸ್ಕ್ ಯಾಕೆ ಹಾಕಿಲ್ಲ ಎಂದು ಕೇಳಿದ ಮಹಿಳಾ ಅಧಿಕಾರಿಗೆ ನಡುರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿಸಿದ್ದಾಳೆ. ಅಧಿಕಾರಿಯ ತಲೆಕೂದಲನ್ನೆಲ್ಲ ಹಿಡಿದು ಎಳೆದಿದ್ದಾಳೆ. ಈ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಅಂದ ಹಾಗೆ ಘಟನೆ ನಡೆದಿದ್ದು ಮುಂಬೈನ ಕಂಡಿವಲಿಯಲ್ಲಿ.

ಮಹಿಳೆಯೊಬ್ಬಳು ಆಟೋದಲ್ಲಿ ಬರುತ್ತಾಳೆ. ಮಹಾವೀರ್​ ನಗರ್ ಟ್ರಾಫಿಕ್​ ಸಿಗ್ನಲ್ ಬಳಿ ಬರುತ್ತಿದ್ದಂತೆ ಅಲ್ಲಿದ್ದ ಬೃಹನ್ ​​ಮುಂಬೈ ಕಾರ್ಪೋರೇಶ್​ (BMC) ನ ಮಹಿಳಾ ಅಧಿಕಾರಿಯೊಬ್ಬರು ಆಕೆಯನ್ನು ತಡೆದು ನಿಲ್ಲಿಸುತ್ತಾರೆ. ಮಹಾರಾಷ್ಟ್ರದಲ್ಲಿ ಕೊರೊನಾ ಹೆಚ್ಚುತ್ತಿರುವ ಬೆನ್ನಲ್ಲೇ ಮಾಸ್ಕ್​ ಕಡ್ಡಾಯ ಮಾಡಲಾಗಿದ್ದು, ಸಾರ್ವಜನಿಕರು ಮಾಸ್ಕ್​ ಧರಿಸುತ್ತಿದ್ದಾರಾ? ನಿಯಮಗಳನ್ನು ಪಾಲನೆ ಮಾಡುತ್ತಿದ್ದಾರಾ? ಎಂಬುದನ್ನು ಪರಿಶೀಲನೆ ಮಾಡಲು ಬಿಎಂಸಿ ಹೀಗೆ ಟ್ರಾಫಿಕ್ ಸಿಗ್ನಲ್​ಗಳಲ್ಲಿ ಮಾರ್ಶಲ್​​ಗಳನ್ನು ನೇಮಕ ಮಾಡಿದೆ. ಹಾಗೇ ಈ ಮಹಿಳಾ ಅಧಿಕಾರಿಯನ್ನು ಮಹಾವೀರ ನಗರ ಟ್ರಾಫಿಕ್​ ಸಿಗ್ನಲ್​​​ನಲ್ಲಿ ನಿಯೋಜಿಸಲಾಗಿತ್ತು. ಅವರು ತಮ್ಮ ಕರ್ತವ್ಯ ಮಾಡಿದ್ದಷ್ಟೇ.. ಸಿಗ್ನಲ್​ನಲ್ಲಿ ನಿಂತಿದ್ದ ಆಟೋದಲ್ಲಿದ್ದ ಮಹಿಳೆಗೆ 200 ರೂ. ದಂಡ ತುಂಬಲು ಹೇಳಿದರು. ಅಷ್ಟಕ್ಕೇ ಸಿಟ್ಟಾದ ಮಹಿಳೆ, ಆಟೋದಲ್ಲಿ ಕುಳಿತೇ ಆ ಮಹಿಳಾ ಅಧಿಕಾರಿಗೆ ಹೊಡೆದರು. ಕಾಲಿನಿಂದ ಒದ್ದರು, ನಂತರ ವಾಹನದಿಂದ ಕೆಳಗಿಳಿದು, ಅಧಿಕಾರಿಯ ತಲೆಕೂದಲನ್ನು ಹಿಡಿದು ಎಳೆದಿದ್ದಾರೆ. ನಿನಗೆ ನನ್ನನ್ನು ತಡೆಯಲು, ಮುಟ್ಟಲು ಎಷ್ಟು ಧೈರ್ಯ ಎಂದೂ ಕೂಗಾಡಿದ್ದಾರೆ.

ಹಲ್ಲೆ ಪ್ರಕರಣದ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಬಿಎಂಸಿ ಮೇಲ್ವಿಚಾರಕ ಪ್ರಶಾಂತ್​ ಕಾಂಬ್ಳೆ ತಿಳಿಸಿದ್ದಾರೆ. ಸದ್ಯ ಮಹಾರಾಷ್ಟ್ರದಲ್ಲಿ ಕೊರೊನಾ ಎರಡನೇ ಅಲೆ ಜೋರಾಗಿಯೇ ಇದೆ. ನಾಗ್ಪುರವಂತೂ ಕಂಪ್ಲೀಟ್​ ಲಾಕ್​ ಆಗಿದೆ. ಮಾಸ್ಕ್ ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗಿದೆ. ಪೊಲೀಸರು ಕೂಡ ಇದರ ಬಗ್ಗೆ ನಿಗಾ ವಹಿಸಿದ್ದು, ಮಾಸ್ಕ್ ಧರಿಸದೆ ರಸ್ತೆಗಿಳಿಯುವವರಿಗೆ ದಂಡ ವಿಧಿಸುತ್ತಿದ್ದಾರೆ. ಹೀಗೆ ಕೊರೊನಾ ಹೆಚ್ಚಾದ ಬೆನ್ನಲ್ಲಿ, ಮಾಸ್ಕ್ ಧರಿಸಿ ಎಂದಿದ್ದಕ್ಕೆ ಈ ಮಹಿಳೆ ನಡೆದುಕೊಂಡ ರೀತಿ ಎಷ್ಟು ಸರಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ.

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ