AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುರಸ್ತೆಯಲ್ಲಿ ಮಹಿಳಾ ಅಧಿಕಾರಿಯ ಕೂದಲು ಹಿಡಿದು ಜಗ್ಗಿ, ಥಳಿಸಿದ ಮಹಿಳೆ; ‘ನನ್ನನ್ನು ಮುಟ್ಟಲು ನೀನ್ಯಾರು’ ಎಂಬ ಆವಾಜ್​ ಬೇರೆ !

ಮಹಿಳೆ ಮೊದಲು ಆಟೋದಲ್ಲಿ ಕುಳಿತೇ ಆ ಮಹಿಳಾ ಅಧಿಕಾರಿಗೆ ಹೊಡೆದರು. ಕಾಲಿನಿಂದ ಒದ್ದರು, ನಂತರ ವಾಹನದಿಂದ ಕೆಳಗಿಳಿದು, ಅಧಿಕಾರಿಯ ತಲೆಕೂದಲನ್ನು ಹಿಡಿದು ಎಳೆದಿದ್ದಾರೆ.

ನಡುರಸ್ತೆಯಲ್ಲಿ ಮಹಿಳಾ ಅಧಿಕಾರಿಯ ಕೂದಲು ಹಿಡಿದು ಜಗ್ಗಿ, ಥಳಿಸಿದ ಮಹಿಳೆ; ‘ನನ್ನನ್ನು ಮುಟ್ಟಲು ನೀನ್ಯಾರು’ ಎಂಬ ಆವಾಜ್​ ಬೇರೆ !
ನಡುಬೀದಿಯಲ್ಲಿ ಮಹಿಳಾ ಅಧಿಕಾರಿಗೆ ಹೊಡೆದ ಮಹಿಳೆ
Lakshmi Hegde
|

Updated on: Mar 21, 2021 | 11:28 AM

Share

ಇಲ್ಲೊಬ್ಬ ಮಹಿಳೆ ಮಾಸ್ಕ್ ಯಾಕೆ ಹಾಕಿಲ್ಲ ಎಂದು ಕೇಳಿದ ಮಹಿಳಾ ಅಧಿಕಾರಿಗೆ ನಡುರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿಸಿದ್ದಾಳೆ. ಅಧಿಕಾರಿಯ ತಲೆಕೂದಲನ್ನೆಲ್ಲ ಹಿಡಿದು ಎಳೆದಿದ್ದಾಳೆ. ಈ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಅಂದ ಹಾಗೆ ಘಟನೆ ನಡೆದಿದ್ದು ಮುಂಬೈನ ಕಂಡಿವಲಿಯಲ್ಲಿ.

ಮಹಿಳೆಯೊಬ್ಬಳು ಆಟೋದಲ್ಲಿ ಬರುತ್ತಾಳೆ. ಮಹಾವೀರ್​ ನಗರ್ ಟ್ರಾಫಿಕ್​ ಸಿಗ್ನಲ್ ಬಳಿ ಬರುತ್ತಿದ್ದಂತೆ ಅಲ್ಲಿದ್ದ ಬೃಹನ್ ​​ಮುಂಬೈ ಕಾರ್ಪೋರೇಶ್​ (BMC) ನ ಮಹಿಳಾ ಅಧಿಕಾರಿಯೊಬ್ಬರು ಆಕೆಯನ್ನು ತಡೆದು ನಿಲ್ಲಿಸುತ್ತಾರೆ. ಮಹಾರಾಷ್ಟ್ರದಲ್ಲಿ ಕೊರೊನಾ ಹೆಚ್ಚುತ್ತಿರುವ ಬೆನ್ನಲ್ಲೇ ಮಾಸ್ಕ್​ ಕಡ್ಡಾಯ ಮಾಡಲಾಗಿದ್ದು, ಸಾರ್ವಜನಿಕರು ಮಾಸ್ಕ್​ ಧರಿಸುತ್ತಿದ್ದಾರಾ? ನಿಯಮಗಳನ್ನು ಪಾಲನೆ ಮಾಡುತ್ತಿದ್ದಾರಾ? ಎಂಬುದನ್ನು ಪರಿಶೀಲನೆ ಮಾಡಲು ಬಿಎಂಸಿ ಹೀಗೆ ಟ್ರಾಫಿಕ್ ಸಿಗ್ನಲ್​ಗಳಲ್ಲಿ ಮಾರ್ಶಲ್​​ಗಳನ್ನು ನೇಮಕ ಮಾಡಿದೆ. ಹಾಗೇ ಈ ಮಹಿಳಾ ಅಧಿಕಾರಿಯನ್ನು ಮಹಾವೀರ ನಗರ ಟ್ರಾಫಿಕ್​ ಸಿಗ್ನಲ್​​​ನಲ್ಲಿ ನಿಯೋಜಿಸಲಾಗಿತ್ತು. ಅವರು ತಮ್ಮ ಕರ್ತವ್ಯ ಮಾಡಿದ್ದಷ್ಟೇ.. ಸಿಗ್ನಲ್​ನಲ್ಲಿ ನಿಂತಿದ್ದ ಆಟೋದಲ್ಲಿದ್ದ ಮಹಿಳೆಗೆ 200 ರೂ. ದಂಡ ತುಂಬಲು ಹೇಳಿದರು. ಅಷ್ಟಕ್ಕೇ ಸಿಟ್ಟಾದ ಮಹಿಳೆ, ಆಟೋದಲ್ಲಿ ಕುಳಿತೇ ಆ ಮಹಿಳಾ ಅಧಿಕಾರಿಗೆ ಹೊಡೆದರು. ಕಾಲಿನಿಂದ ಒದ್ದರು, ನಂತರ ವಾಹನದಿಂದ ಕೆಳಗಿಳಿದು, ಅಧಿಕಾರಿಯ ತಲೆಕೂದಲನ್ನು ಹಿಡಿದು ಎಳೆದಿದ್ದಾರೆ. ನಿನಗೆ ನನ್ನನ್ನು ತಡೆಯಲು, ಮುಟ್ಟಲು ಎಷ್ಟು ಧೈರ್ಯ ಎಂದೂ ಕೂಗಾಡಿದ್ದಾರೆ.

ಹಲ್ಲೆ ಪ್ರಕರಣದ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಬಿಎಂಸಿ ಮೇಲ್ವಿಚಾರಕ ಪ್ರಶಾಂತ್​ ಕಾಂಬ್ಳೆ ತಿಳಿಸಿದ್ದಾರೆ. ಸದ್ಯ ಮಹಾರಾಷ್ಟ್ರದಲ್ಲಿ ಕೊರೊನಾ ಎರಡನೇ ಅಲೆ ಜೋರಾಗಿಯೇ ಇದೆ. ನಾಗ್ಪುರವಂತೂ ಕಂಪ್ಲೀಟ್​ ಲಾಕ್​ ಆಗಿದೆ. ಮಾಸ್ಕ್ ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗಿದೆ. ಪೊಲೀಸರು ಕೂಡ ಇದರ ಬಗ್ಗೆ ನಿಗಾ ವಹಿಸಿದ್ದು, ಮಾಸ್ಕ್ ಧರಿಸದೆ ರಸ್ತೆಗಿಳಿಯುವವರಿಗೆ ದಂಡ ವಿಧಿಸುತ್ತಿದ್ದಾರೆ. ಹೀಗೆ ಕೊರೊನಾ ಹೆಚ್ಚಾದ ಬೆನ್ನಲ್ಲಿ, ಮಾಸ್ಕ್ ಧರಿಸಿ ಎಂದಿದ್ದಕ್ಕೆ ಈ ಮಹಿಳೆ ನಡೆದುಕೊಂಡ ರೀತಿ ಎಷ್ಟು ಸರಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ.

Follow Us
Lakshmi Hegde
Lakshmi Hegde
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು