AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುರಸ್ತೆಯಲ್ಲಿ ಮಹಿಳಾ ಅಧಿಕಾರಿಯ ಕೂದಲು ಹಿಡಿದು ಜಗ್ಗಿ, ಥಳಿಸಿದ ಮಹಿಳೆ; ‘ನನ್ನನ್ನು ಮುಟ್ಟಲು ನೀನ್ಯಾರು’ ಎಂಬ ಆವಾಜ್​ ಬೇರೆ !

ಮಹಿಳೆ ಮೊದಲು ಆಟೋದಲ್ಲಿ ಕುಳಿತೇ ಆ ಮಹಿಳಾ ಅಧಿಕಾರಿಗೆ ಹೊಡೆದರು. ಕಾಲಿನಿಂದ ಒದ್ದರು, ನಂತರ ವಾಹನದಿಂದ ಕೆಳಗಿಳಿದು, ಅಧಿಕಾರಿಯ ತಲೆಕೂದಲನ್ನು ಹಿಡಿದು ಎಳೆದಿದ್ದಾರೆ.

ನಡುರಸ್ತೆಯಲ್ಲಿ ಮಹಿಳಾ ಅಧಿಕಾರಿಯ ಕೂದಲು ಹಿಡಿದು ಜಗ್ಗಿ, ಥಳಿಸಿದ ಮಹಿಳೆ; ‘ನನ್ನನ್ನು ಮುಟ್ಟಲು ನೀನ್ಯಾರು’ ಎಂಬ ಆವಾಜ್​ ಬೇರೆ !
ನಡುಬೀದಿಯಲ್ಲಿ ಮಹಿಳಾ ಅಧಿಕಾರಿಗೆ ಹೊಡೆದ ಮಹಿಳೆ
Lakshmi Hegde
|

Updated on: Mar 21, 2021 | 11:28 AM

Share

ಇಲ್ಲೊಬ್ಬ ಮಹಿಳೆ ಮಾಸ್ಕ್ ಯಾಕೆ ಹಾಕಿಲ್ಲ ಎಂದು ಕೇಳಿದ ಮಹಿಳಾ ಅಧಿಕಾರಿಗೆ ನಡುರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿಸಿದ್ದಾಳೆ. ಅಧಿಕಾರಿಯ ತಲೆಕೂದಲನ್ನೆಲ್ಲ ಹಿಡಿದು ಎಳೆದಿದ್ದಾಳೆ. ಈ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಅಂದ ಹಾಗೆ ಘಟನೆ ನಡೆದಿದ್ದು ಮುಂಬೈನ ಕಂಡಿವಲಿಯಲ್ಲಿ.

ಮಹಿಳೆಯೊಬ್ಬಳು ಆಟೋದಲ್ಲಿ ಬರುತ್ತಾಳೆ. ಮಹಾವೀರ್​ ನಗರ್ ಟ್ರಾಫಿಕ್​ ಸಿಗ್ನಲ್ ಬಳಿ ಬರುತ್ತಿದ್ದಂತೆ ಅಲ್ಲಿದ್ದ ಬೃಹನ್ ​​ಮುಂಬೈ ಕಾರ್ಪೋರೇಶ್​ (BMC) ನ ಮಹಿಳಾ ಅಧಿಕಾರಿಯೊಬ್ಬರು ಆಕೆಯನ್ನು ತಡೆದು ನಿಲ್ಲಿಸುತ್ತಾರೆ. ಮಹಾರಾಷ್ಟ್ರದಲ್ಲಿ ಕೊರೊನಾ ಹೆಚ್ಚುತ್ತಿರುವ ಬೆನ್ನಲ್ಲೇ ಮಾಸ್ಕ್​ ಕಡ್ಡಾಯ ಮಾಡಲಾಗಿದ್ದು, ಸಾರ್ವಜನಿಕರು ಮಾಸ್ಕ್​ ಧರಿಸುತ್ತಿದ್ದಾರಾ? ನಿಯಮಗಳನ್ನು ಪಾಲನೆ ಮಾಡುತ್ತಿದ್ದಾರಾ? ಎಂಬುದನ್ನು ಪರಿಶೀಲನೆ ಮಾಡಲು ಬಿಎಂಸಿ ಹೀಗೆ ಟ್ರಾಫಿಕ್ ಸಿಗ್ನಲ್​ಗಳಲ್ಲಿ ಮಾರ್ಶಲ್​​ಗಳನ್ನು ನೇಮಕ ಮಾಡಿದೆ. ಹಾಗೇ ಈ ಮಹಿಳಾ ಅಧಿಕಾರಿಯನ್ನು ಮಹಾವೀರ ನಗರ ಟ್ರಾಫಿಕ್​ ಸಿಗ್ನಲ್​​​ನಲ್ಲಿ ನಿಯೋಜಿಸಲಾಗಿತ್ತು. ಅವರು ತಮ್ಮ ಕರ್ತವ್ಯ ಮಾಡಿದ್ದಷ್ಟೇ.. ಸಿಗ್ನಲ್​ನಲ್ಲಿ ನಿಂತಿದ್ದ ಆಟೋದಲ್ಲಿದ್ದ ಮಹಿಳೆಗೆ 200 ರೂ. ದಂಡ ತುಂಬಲು ಹೇಳಿದರು. ಅಷ್ಟಕ್ಕೇ ಸಿಟ್ಟಾದ ಮಹಿಳೆ, ಆಟೋದಲ್ಲಿ ಕುಳಿತೇ ಆ ಮಹಿಳಾ ಅಧಿಕಾರಿಗೆ ಹೊಡೆದರು. ಕಾಲಿನಿಂದ ಒದ್ದರು, ನಂತರ ವಾಹನದಿಂದ ಕೆಳಗಿಳಿದು, ಅಧಿಕಾರಿಯ ತಲೆಕೂದಲನ್ನು ಹಿಡಿದು ಎಳೆದಿದ್ದಾರೆ. ನಿನಗೆ ನನ್ನನ್ನು ತಡೆಯಲು, ಮುಟ್ಟಲು ಎಷ್ಟು ಧೈರ್ಯ ಎಂದೂ ಕೂಗಾಡಿದ್ದಾರೆ.

ಹಲ್ಲೆ ಪ್ರಕರಣದ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಬಿಎಂಸಿ ಮೇಲ್ವಿಚಾರಕ ಪ್ರಶಾಂತ್​ ಕಾಂಬ್ಳೆ ತಿಳಿಸಿದ್ದಾರೆ. ಸದ್ಯ ಮಹಾರಾಷ್ಟ್ರದಲ್ಲಿ ಕೊರೊನಾ ಎರಡನೇ ಅಲೆ ಜೋರಾಗಿಯೇ ಇದೆ. ನಾಗ್ಪುರವಂತೂ ಕಂಪ್ಲೀಟ್​ ಲಾಕ್​ ಆಗಿದೆ. ಮಾಸ್ಕ್ ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗಿದೆ. ಪೊಲೀಸರು ಕೂಡ ಇದರ ಬಗ್ಗೆ ನಿಗಾ ವಹಿಸಿದ್ದು, ಮಾಸ್ಕ್ ಧರಿಸದೆ ರಸ್ತೆಗಿಳಿಯುವವರಿಗೆ ದಂಡ ವಿಧಿಸುತ್ತಿದ್ದಾರೆ. ಹೀಗೆ ಕೊರೊನಾ ಹೆಚ್ಚಾದ ಬೆನ್ನಲ್ಲಿ, ಮಾಸ್ಕ್ ಧರಿಸಿ ಎಂದಿದ್ದಕ್ಕೆ ಈ ಮಹಿಳೆ ನಡೆದುಕೊಂಡ ರೀತಿ ಎಷ್ಟು ಸರಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ