AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ ಠಾಕ್ರೆ ನೇತೃತ್ವದ ಎಂಎನ್ಎಸ್ ಪಕ್ಷದ ನಾಯಕನಿಂದ ಮಹಿಳೆ ಮೇಲೆ ಹಲ್ಲೆ, ವಿಡಿಯೊ ವೈರಲ್

ಹಲ್ಲೆ ನಡೆಸಿರುವ ವ್ಯಕ್ತಿ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ ಸೇನೆ  ನಾಯಕ ಎಂದು ಹೇಳಲಾಗುತ್ತದೆ. ವಿಡಿಯೊದಲ್ಲಿ, ಕೆಲವರು ವಿನೋದ್ ಅರ್ಗೈಲ್ ಎಂಬ ವ್ಯಕ್ತಿಯನ್ನು ಹಿಡಿದೆಳೆಯುತ್ತಿದ್ದರೂ...

ರಾಜ್ ಠಾಕ್ರೆ ನೇತೃತ್ವದ ಎಂಎನ್ಎಸ್ ಪಕ್ಷದ ನಾಯಕನಿಂದ ಮಹಿಳೆ ಮೇಲೆ ಹಲ್ಲೆ, ವಿಡಿಯೊ ವೈರಲ್
ಮಹಿಳೆ ಮೇಲೆ ಹಲ್ಲೆ
TV9 Web
| Edited By: |

Updated on:Sep 01, 2022 | 9:30 PM

Share

ಮುಂಬೈ: ರಾಜ್ ಠಾಕ್ರೆ ಅವರ ಪಕ್ಷವಾದ ಮಹಾರಾಷ್ಟ್ರ ನವನಿರ್ಮಾಣ ಸೇನೆಯ (MNS) ಮುಖಂಡರೊಬ್ಬರು ಮುಂಬೈನ ಕಾಮಾಟಿಪುರದ ಪ್ರಕಾಶ್ ದೇವಿ ಎಂಬ ಮಹಿಳೆಗೆ ಕಪಾಳಮೋಕ್ಷ ಮಾಡಿ ತಳ್ಳುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಗಸ್ಟ್ 28, 2022 ರಂದು ಮಹಿಳೆಯ ಔಷಧಿ ಅಂಗಡಿಯ ಮುಂದೆ ಪ್ರಚಾರದ ಬ್ಯಾನರ್‌ಗಳಿಗೆ ಒಪ್ಪಿಗೆಯಿಲ್ಲದೆ ಇರಿಸಿದ್ದಕ್ಕಾಗಿಈ ಘಟನೆ ನಡೆದಿದೆ. ಹಲ್ಲೆ ನಡೆಸಿರುವ ವ್ಯಕ್ತಿ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ ಸೇನೆ  ನಾಯಕ ಎಂದು ಹೇಳಲಾಗುತ್ತದೆ. ವಿಡಿಯೊದಲ್ಲಿ, ಕೆಲವರು ವಿನೋದ್ ಅರ್ಗೈಲ್ ಎಂಬ ವ್ಯಕ್ತಿಯನ್ನು ಹಿಡಿದೆಳೆಯುತ್ತಿದ್ದರೂ ಆತ ಮಹಿಳೆ ಮೇಲೆ ಹಲ್ಲೆ ನಡೆಸಿ ತಳ್ಳುತ್ತಿರುವುದು ಕಾಣುತ್ತದೆ. ಹೀಗೆ ತಳ್ಳಿದಾಗ ಆಕೆ ಬೀದಿಯಲ್ಲಿ ಬೀಳುತ್ತಾಳೆ. ಆದರೆ ದಾರಿಹೋಕರು ಯಾರೂ ಇದರ ಮಧ್ಯಪ್ರವೇಶ ಮಾಡುತ್ತಿಲ್ಲ

ಆರ್ಗೈಲ್ ನಿಂದನೀಯ ಭಾಷೆಯನ್ನು ಬಳಸುವುದನ್ನು ಸಹ ಕೇಳಲಾಗುತ್ತದೆ. ಆಗಸ್ಟ್ 31, 2022 ರಂದು ಆರ್ಗೈಲ್ ವಿರುದ್ಧ ನಾನ್ ಕಾಗ್ನಿಸಬಲ್ ಅಪರಾಧ ದಾಖಲಿಸಲಾಗಿದೆ. ಹಲ್ಲೆಗೊಳಗಾಗಿರುವ ಪ್ರಕಾಶ್ ದೇವಿ ಎಂಬ ಮಹಿಳೆಯ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಯಿತು. ಈ ಬಗ್ಗೆ ಪ್ರತಿಕ್ರಿಯಿಸಿದ ಎಂಎನ್ಎಸ್ ನಾಯಕ ಕೇಶವ್ ಮುಲೆ, “ವಿನೋದ್ ಅರ್ಗೈಲ್ ಅವರನ್ನು ಚಿತ್ರಿಸುವ ವೈರಲ್ ವಿಡಿಯೊ ಪೂರ್ಣಗೊಂಡಿಲ್ಲ. ನಾವು ಅದನ್ನು ಬೆಂಬಲಿಸುವುದಿಲ್ಲ. ಎಂಎನ್ಎಸ್ ಮಹಿಳೆಯರನ್ನು ಗೌರವಿಸುತ್ತದೆ .ಆದರೆ ಆ ಮಹಿಳೆ ನಮ್ಮ ಪಕ್ಷದ ಬ್ಯಾನರ್ ಅನ್ನು ಕಿತ್ತೆಸೆದು ನಮ್ಮ ಪಕ್ಷದ ಕಾರ್ಯಕರ್ತರನ್ನು ನಿಂದಿಸಿದ್ದಾರೆ, ಅದನ್ನು ಎಡಿಟ್ ಮಾಡಲಾಗಿಗೆ. ವಿನೋದ್ ಅರ್ಗೈಲ್ ಅವರಿಗೂ ಬೇಗನೆ ಸಿಟ್ಟು ಬರುತ್ತದೆ ನಮಗೆ ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇದೆ ಎಂದಿದ್ದಾರೆ.

Published On - 9:27 pm, Thu, 1 September 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್