AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಸ್ತೆಯಲ್ಲಿ ಓಡಾಡುವ ಕುಡುಕರಿಗೆ ಪೊರಕೆಯಲ್ಲಿ ಥಳಿಸಿದ ಮಹಿಳೆಯರು; ವಿಡಿಯೋ ವೈರಲ್

ಮದ್ಯವ್ಯಸನಿಗಳಿಂದ ಬೇಸತ್ತ ಮಹಿಳೆಯರು ರಸ್ತೆಯಲ್ಲಿಯೇ ಅವರಿಗೆ ಪೊರಕೆಗಳಿಂದ ಥಳಿಸಿದ್ದಾರೆ. ಈ ವಿಡಿಯೋದಲ್ಲಿ ಮಹಿಳೆಯರ ಗುಂಪೊಂದು ಕೈಯಲ್ಲಿ ಪೊರಕೆ ಹಿಡಿದು ಮದ್ಯವ್ಯಸನಿಗಳತ್ತ ಸಾಗುತ್ತಿರುವುದನ್ನು ಕಾಣಬಹುದು. ಇವರು ಮದ್ಯಪಾನ ಮಾಡುತ್ತಿದ್ದವರನ್ನು ಕಂಡ ಕೂಡಲೇ ಪೊರಕೆಯಿಂದ ಥಳಿಸಿ ಆ ಜಾಗ ಬಿಟ್ಟು ಹೋಗುವಂತೆ ಮಾಡುತ್ತಾರೆ.

Viral Video: ರಸ್ತೆಯಲ್ಲಿ ಓಡಾಡುವ ಕುಡುಕರಿಗೆ ಪೊರಕೆಯಲ್ಲಿ ಥಳಿಸಿದ ಮಹಿಳೆಯರು; ವಿಡಿಯೋ ವೈರಲ್
ರಸ್ತೆಯಲ್ಲಿ ಓಡಾಡುವ ಕುಡುಕರಿಗೆ ಪೊರಕೆಯಲ್ಲಿ ಥಳಿಸಿದ ಮಹಿಳೆಯರು
ಸುಷ್ಮಾ ಚಕ್ರೆ
|

Updated on:Aug 26, 2024 | 7:45 PM

Share

ಮುಂಬೈ: ಮುಂಬೈನಲ್ಲಿ ಹಲವಾರು ಮಹಿಳೆಯರು ರಸ್ತೆಗಿಳಿದು ಮದ್ಯವ್ಯಸನಿಗಳನ್ನು ರಸ್ತೆಯಲ್ಲಿ ಥಳಿಸಿದ್ದಾರೆ. ಮಹಿಳೆಯರು ರಸ್ತೆಗಳಲ್ಲಿ ನಿರಂತರವಾಗಿ ಕಂಡುಬರುವ ಕುಡುಕರ ಕಾಟದಿಂದ ಬೇಸತ್ತಿದ್ದಾರೆ. ಆದ್ದರಿಂದ ಈ ಸಮಸ್ಯೆಗೆ ತಾವೇ ಪರಿಹಾರ ಕಂಡುಕೊಳ್ಳಲು ನಿರ್ಧರಿಸಿದ ಅವರು ರಸ್ತೆಯಲ್ಲಿ ಕುಡಿದು ಓಡಾಡುತ್ತಿದ್ದವರಿಗೆ ಪೊರಕೆ ಪೂಜೆ ಮಾಡಿದ್ದಾರೆ.

ಈ ಮಹಿಳೆಯರು ರಸ್ತೆಗಿಳಿಯುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಇದೀಗ ವೈರಲ್ ಆಗಿದೆ. ಜನರ ಮತ್ತು ಸಮಾಜದ ಒಳಿತಿಗಾಗಿ ಶ್ರಮಿಸಿದ ಮಹಿಳೆಯರನ್ನು ಹಲವರು ಶ್ಲಾಘಿಸುತ್ತಿದ್ದಾರೆ. ಈ ಘಟನೆಯು ಮುಂಬೈನ ಲಾಲ್ಜಿ ಪದಾ, ಕಂಡಿವಲಿಯಲ್ಲಿ ನಡೆದಿದೆ. ಕುಡಿತದ ಚಟ ಮತ್ತು ಸಾರ್ವಜನಿಕರ ಕಿರುಕುಳದಿಂದ ಹತಾಶರಾದ ಈ ಮಹಿಳೆಯರು ಸಾರ್ವಜನಿಕ ಸ್ಥಳದಲ್ಲಿ ಬಹಿರಂಗವಾಗಿ ಮದ್ಯ ಸೇವಿಸುವ ಪುರುಷರನ್ನು ಎದುರಿಸಲು ನಿರ್ಧರಿಸಿದರು. ಆ ಮೂಲಕ ಅವರನ್ನು ಥಳಿಸಲು ನಿರ್ಧರಿಸಿದರು.

ಇದನ್ನೂ ಓದಿ: Shocking Video: ದೇವಸ್ಥಾನದೊಳಗೆ ಅಶ್ಲೀಲ ಚಿತ್ರ ನೋಡುತ್ತಾ ಹಸ್ತಮೈಥುನ ಮಾಡಿಕೊಂಡ ಯುವಕ; ಶಾಕಿಂಗ್ ವಿಡಿಯೋ ವೈರಲ್

ಈ ವಿಡಿಯೋದಲ್ಲಿ ಮಹಿಳೆಯರ ಗುಂಪೊಂದು ಕೈಯಲ್ಲಿ ಪೊರಕೆ ಹಿಡಿದು ಮದ್ಯವ್ಯಸನಿಗಳತ್ತ ಸಾಗುತ್ತಿರುವುದನ್ನು ಕಾಣಬಹುದು. ಮದ್ಯಪಾನ ಮಾಡುತ್ತಿದ್ದವರನ್ನು ಕಂಡ ಕೂಡಲೇ ಪೊರಕೆಯಿಂದ ಥಳಿಸಿ ಆ ಜಾಗ ಬಿಟ್ಟು ಹೋಗುವಂತೆ ಮಾಡುತ್ತಾರೆ.

ಈ ವೀಡಿಯೊವನ್ನು ಆಗಸ್ಟ್ 24ರಂದು ಹಂಚಿಕೊಳ್ಳಲಾಗಿದೆ. ಇದನ್ನು ಪೋಸ್ಟ್ ಮಾಡಿದ ನಂತರ, ಇದು ಒಂದು ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ಸುಮಾರು 8,000 ಲೈಕ್‌ಗಳನ್ನು ಪಡೆದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:04 pm, Mon, 26 August 24

Follow Us
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ