AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಣಿನಲ್ಲಿತ್ತು 10 ಸೆಂ.ಮೀ ಉದ್ದದ ಹುಳು, ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆದ ವೈದ್ಯರು

ವ್ಯಕ್ತಿಯ ಕಣ್ಣಿನಲ್ಲಿದ್ದ 10 ಸೆಂ.ಮೀ ಉದ್ದದ ಹುಳುವನ್ನು ವೈದ್ಯರು ಶಸ್ತ್ರ ಚಿಕಿತ್ಸೆ(Surgery) ಮೂಲಕ ಹೊರ ತೆಗೆದಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈ ಮೂಲದ ನೇತ್ರ ತಜ್ಞ ದೇವಾಂಶಿ ಶಾ ಅವರು 60 ವರ್ಷದ ವ್ಯಕ್ತಿಯ ಕಣ್ಣಿನಲ್ಲಿದ್ದ ಹುಳುವನ್ನು ಹೊರ ತೆಗೆದಿದ್ದಾರೆ, ಇದು ಸವಾಲಿನ ಶಸ್ತ್ರ ಚಿಕಿತ್ಸೆಯಾಗಿತ್ತು ಎಂದು ಹೇಳಿದ್ದಾರೆ.

ಕಣ್ಣಿನಲ್ಲಿತ್ತು 10 ಸೆಂ.ಮೀ ಉದ್ದದ ಹುಳು, ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆದ ವೈದ್ಯರು
ರೋಗಿImage Credit source: India Today
ನಯನಾ ರಾಜೀವ್
|

Updated on: May 14, 2025 | 10:59 AM

Share

ಮುಂಬೈ, ಮೇ 14: ವ್ಯಕ್ತಿಯ ಕಣ್ಣಿನಲ್ಲಿದ್ದ 10 ಸೆಂ.ಮೀ ಉದ್ದದ ಹುಳುವನ್ನು ವೈದ್ಯರು ಶಸ್ತ್ರ ಚಿಕಿತ್ಸೆ(Surgery) ಮೂಲಕ ಹೊರ ತೆಗೆದಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈ ಮೂಲದ ನೇತ್ರ ತಜ್ಞ ದೇವಾಂಶಿ ಶಾ ಅವರು 60 ವರ್ಷದ ವ್ಯಕ್ತಿಯ ಕಣ್ಣಿನಲ್ಲಿದ್ದ ಹುಳುವನ್ನು ಹೊರ ತೆಗೆದಿದ್ದಾರೆ, ಇದು ಸವಾಲಿನ ಶಸ್ತ್ರ ಚಿಕಿತ್ಸೆಯಾಗಿತ್ತು ಎಂದು ಹೇಳಿದ್ದಾರೆ.

ಒಂದೊಮ್ಮೆ ಆ ವ್ಯಕ್ತಿಯ ಕಣ್ಣಿನಿಂದ ಹುಳು ತೆಗೆಯದಿದ್ದರೆ ಅದು ಜೀವಕ್ಕೆ ಅಪಾಯವನ್ನುಂಟುಮಾಡುತ್ತಿತ್ತು. ಮುಂಬೈ ನಿವಾಸಿಯಾಗಿರುವ ಶಿವಕುಮಾರ್ ಅವರ ಕಣ್ಣಲ್ಲಿ ಏನೋ ಚುಚ್ಚುತ್ತಿರುವ ಅನುಭವವಾಗುತ್ತಿತ್ತು. ಡಾ. ದೇವಾಂಶಿ ಷಾ ಅವರನ್ನು ಸಂಪರ್ಕಿಸಿದರು, ಅವರ ಕಣ್ಣಿನಲ್ಲಿ 10 ಸೆಂ.ಮೀ ಉದ್ದದ ಹುಳುವನ್ನು ನೋಡಿ ಅವರು ಆಘಾತಕ್ಕೊಳಗಾದರು. ಅದು ವ್ಯಕ್ತಿಯ ದೇಹವನ್ನು ಪ್ರವೇಶಿಸಿ ಅವರ ಕಣ್ಣನ್ನು ತಲುಪಿರಬೇಕು ಎಂದು ವೈದ್ಯರು ಹೇಳಿದರು.

ಹುಳು ಅವನ ಹೃದಯಕ್ಕೆ ಹೋಗಿದ್ದರೆ ಹೃದಯಸಂಬಂಧಿ ಸಮಸ್ಯೆಗಳಿಗೆ ಕಾರಣವಾಗುತ್ತಿತ್ತು, ಹುಳು ಅವನ ಮೆದುಳನ್ನು ತಲುಪಿದ್ದರೆ ಅದು ಮಾರಕವೂ ಆಗಿರಬಹುದು ಎಂದು ಡಾ. ಶಾ ಹೇಳಿದ್ದಾರೆ. ಮೊದಲಿಗೆ ಶಿವಕುಮಾರ್ ಅವರ ಕಣ್ಣುಗಳಲ್ಲಿ ನೋವು ಕಾಣಿಸಿಕೊಂಡಾಗ, ಅದು ಸಾಮಾನ್ಯ ನೋವು ಎಂದು ಅವರು ಭಾವಿಸಿದ್ದರು. ಆದರೆ ನೋವು ತೀವ್ರಗೊಂಡಂತೆ ವೈದ್ಯರನ್ನು ಸಂಪರ್ಕಿಸಿದಾಗ, ಶಿವಕುಮಾರ್ ಮತ್ತು ಅವರ ಮಗ ಸುನಿಲ್ ಅವರ ಕಣ್ಣಿನಲ್ಲಿ ಜೀವಂತ ಹುಳು ಕಂಡುಬಂದ ನಂತರ ಚಿಂತೆಗೊಳಗಾಗಿದ್ದರು.

ಮತ್ತಷ್ಟು ಓದಿ: ವೈದ್ಯರಿಲ್ಲ, ಫೋನ್​ ನೋಡಿಕೊಂಡು ಗರ್ಭಿಣಿಯ ಹೊಟ್ಟೆ ಕೊಯ್ದ ನರ್ಸ್, ಅವಳಿ ಶಿಶುಗಳ ಸಾವು

ಬೆಳಗ್ಗೆ ಇದ್ದಕ್ಕಿದ್ದಂತೆ ನೋವು ಹೆಚ್ಚಾಗಿತ್ತು, ಬಳಿಕ ಕಣ್ಣಿನಲ್ಲಿ ಧೂಳೇನಾದರು ಇದ್ದರೆ ಹೋಗಲಿ ಎಂದು ಕಣ್ಣಿನ ಡ್ರಾಪ್ಸ್​ಬಿಟ್ಟು ಮಲಗಿದೆ. ಸ್ವಲ್ಪ ಸಮಯದ ಬಳಿಕ ಕಣ್ಣಿನಲ್ಲಿ ರಕ್ತಸ್ರಾವವಾಗಲು ಶುರುವಾಗಿತ್ತು.

ಕೂಡಲೇ ಡಾ. ಶಾ ಅವರನ್ನು ಭೇಟಿ ಮಾಡಿದ್ದೇನೆ. ಏತನ್ಮಧ್ಯೆ, ಡಾ. ಶಾ, ಇದು ಅಪರೂಪದ ಪ್ರಕರಣವಾಗಿರುವುದರಿಂದ ಇದು ಸವಾಲಿನ ಪ್ರಕರಣವಾಗಿತ್ತು ಎಂದು ಹೇಳಿದರು. ಅಂತಹ ಪ್ರಕರಣಗಳನ್ನು ಪತ್ತೆಹಚ್ಚುವುದು ಸಹ ಕಷ್ಟ.

ಅಲ್ಲದೆ, ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಅದು ಅಪಾಯಕಾರಿಯಾಗಬಹುದು ಎಂದು ಅವರು ಹೇಳಿದರು.ಕಣ್ಣಿನ ಯಶಸ್ವಿ ಶಸ್ತ್ರಚಿಕಿತ್ಸೆಯ ನಂತರ, ಶಿವಕುಮಾರ್ ಈಗ ಸಾಮಾನ್ಯವಾಗಿ ನೋಡಲು ಸಮರ್ಥರಾಗಿದ್ದಾರೆ, ಮತ್ತು ಅವರ ಕಣ್ಣುಗಳು ಈಗ ನೋಯುತ್ತಿಲ್ಲ. ಶಸ್ತ್ರಚಿಕಿತ್ಸೆಗಾಗಿ ಶಿವಕುಮಾರ್ ಮತ್ತು ಅವರ ಕುಟುಂಬವು ಡಾ. ದೇವಾಂಶಿ ಶಾ ಅವರಿಗೆ ಧನ್ಯವಾದ ಅರ್ಪಿಸಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ