AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ್​​ನ ರೆಸಾರ್ಟ್​​​ನಲ್ಲಿ ಯುವತಿಯ ಹತ್ಯೆ ಪ್ರಕರಣ: ಬಿಜೆಪಿ ನಾಯಕನ ಪುತ್ರ ಬಂಧನ

ಯುವತಿಯನ್ನು ಕೊಂದು ಶವವನ್ನು ಕಾಲುವೆಗೆ ಎಸೆದಿರುವುದಾಗಿ ತಪ್ಪೊಪ್ಪಿಕೊಂಡ ನಂತರ ಪುಲ್ಕಿತ್ ಆರ್ಯ, ರೆಸಾರ್ಟ್ ಮ್ಯಾನೇಜರ್ ಸೌರಭ್ ಭಾಸ್ಕರ್ ಮತ್ತು ಸಹಾಯಕ ವ್ಯವಸ್ಥಾಪಕ ಅಂಕಿತ್ ಗುಪ್ತಾ ಅವರನ್ನು ಬಂಧಿಸಲಾಗಿದೆ ಎಂದು

ಉತ್ತರಾಖಂಡ್​​ನ ರೆಸಾರ್ಟ್​​​ನಲ್ಲಿ ಯುವತಿಯ ಹತ್ಯೆ ಪ್ರಕರಣ: ಬಿಜೆಪಿ ನಾಯಕನ ಪುತ್ರ ಬಂಧನ
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Sep 23, 2022 | 8:28 PM

Share

ಉತ್ತರಾಖಂಡದ (Uttarakhand) ಪೌರಿ ಜಿಲ್ಲೆಯಲ್ಲಿ 19 ವರ್ಷದ ಯುವತಿಯನ್ನು  ಹತ್ಯೆಗೈದ ಆರೋಪದ ಮೇಲೆ ಬಿಜೆಪಿ  ನಾಯಕನ ಮಗನನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಉತ್ತರಾಖಂಡದ ಬಿಜೆಪಿ ನಾಯಕ, ಮಾಜಿ ಸಚಿವ ವಿನೋದ್ ಆರ್ಯ ಅವರ ಪುತ್ರ ಪುಲ್ಕಿತ್ ಆರ್ಯ (Pulkit Arya) ಅವರು ರೆಸಾರ್ಟ್ ಹೊಂದಿದ್ದಾರೆ.  ಅಲ್ಲಿ ಅಂಕಿತಾ ಭಂಡಾರಿ ಎಂದು ಗುರುತಿಸಲಾದ ಹುಡುಗಿ ರೆಸಪ್ಶನಿಸ್ಟ್ ಕೆಲಸ ಮಾಡುತ್ತಿದ್ದರು. ಸೋಮವಾರದಿಂದ ಆಕೆ ನಾಪತ್ತೆಯಾಗಿದ್ದಳು. ನಾಪತ್ತೆಯಾಗಿದ್ದ ಯುವತಿಯನ್ನು ಕೊಂದು ಶವವನ್ನು ಕಾಲುವೆಗೆ ಎಸೆದಿರುವುದಾಗಿ ತಪ್ಪೊಪ್ಪಿಕೊಂಡ ನಂತರ ಪುಲ್ಕಿತ್ ಆರ್ಯ, ರೆಸಾರ್ಟ್ ಮ್ಯಾನೇಜರ್ ಸೌರಭ್ ಭಾಸ್ಕರ್ ಮತ್ತು ಸಹಾಯಕ ವ್ಯವಸ್ಥಾಪಕ ಅಂಕಿತ್ ಗುಪ್ತಾ ಅವರನ್ನು ಬಂಧಿಸಲಾಗಿದೆ ಎಂದು ಪೌರಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಚಂದ್ರ ಸುಯಲ್ ಪಿಟಿಐಗೆ ತಿಳಿಸಿದ್ದಾರೆ. ಮೂವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 201 (ಅಪರಾಧದ ಸಾಕ್ಷ್ಯಾಧಾರಗಳು ನಾಪತ್ತೆ) ಮತ್ತು ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಉತ್ತರಾಖಂಡ್ ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ್ ತಿಳಿಸಿದ್ದಾರೆ.

ಯುವತಿಯ ಶವ ಇನ್ನೂ ಪತ್ತೆಯಾಗಿಲ್ಲ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ಅದನ್ನು ಪತ್ತೆ ಹಚ್ಚುವ ಕೆಲಸ ಮಾಡುತ್ತಿದೆ ಎಂದು ಕುಮಾರ್ ಹೇಳಿದರು. ಸೋಮವಾರ ಬೆಳಗ್ಗೆ ಯುವತಿಯ ಪೋಷಕರು ಕೊಠಡಿಯಲ್ಲಿ ಕಾಣದ ಹಿನ್ನೆಲೆಯಲ್ಲಿ ಮಗಳು ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು.

Published On - 8:10 pm, Fri, 23 September 22

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್