AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder News: ಅಮ್ಮನಿಗೆ ಕಿರುಕುಳ ನೀಡುತ್ತಿದ್ದ ಅಪ್ಪನನ್ನು ಕೊಂದ 17 ವರ್ಷದ ಬಾಲಕ

ನನ್ನ ತಂದೆಯನ್ನು ಕೊಲ್ಲುವ ಉದ್ದೇಶ ಹೊಂದಿರಲಿಲ್ಲ, ಆದರೆ, ನನ್ನಪ್ಪನಿಗೆ ತಕ್ಕ ಪಾಠ ಕಲಿಸಲು ಬಯಸಿದ್ದೆ ಎಂದು ಬಾಲಾಪರಾಧಿ ಪೊಲೀಸರಿಗೆ ತಿಳಿಸಿದ್ದಾನೆ.

Murder News: ಅಮ್ಮನಿಗೆ ಕಿರುಕುಳ ನೀಡುತ್ತಿದ್ದ ಅಪ್ಪನನ್ನು ಕೊಂದ 17 ವರ್ಷದ ಬಾಲಕ
ಕೊಲೆ
TV9 Web
| Edited By: |

Updated on:Sep 08, 2022 | 9:59 AM

Share

ನವದೆಹಲಿ: ತನ್ನ ತಾಯಿಗೆ ದಿನವೂ ಕಿರುಕುಳ ನೀಡುತ್ತಿದ್ದ ತಂದೆಯನ್ನು 17 ವರ್ಷದ ಮಗನೇ ಕೊಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ರೋಲಿಂಗ್ ಪಿನ್ ಬಳಸಿ ತಂದೆಯನ್ನು ಕೊಂದ ಆರೋಪದ ಮೇಲೆ 17 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ರೈಲ್ವೇ ಪ್ರೊಟೆಕ್ಷನ್ ಫೋರ್ಸ್‌ನಲ್ಲಿ (ಆರ್‌ಪಿಎಫ್) ಕೆಲಸ ಮಾಡುತ್ತಿದ್ದ ಮೃತ ವ್ಯಕ್ತಿ ದಿನವೂ ತನ್ನ ಹೆಂಡತಿಗೆ ಕಿರುಕುಳ ನೀಡುತ್ತಿದ್ದ. ಇದನ್ನು ನೋಡಿ ಬೇಸತ್ತಿದ್ದ ಮಗ ಅಪ್ಪನನ್ನು ಕೊಲೆ ಮಾಡಿದ್ದಾನೆ.

ಮೃತ ವ್ಯಕ್ತಿಯನ್ನು ರೋಲಿಂಗ್ ಪಿನ್‌ನಿಂದ 20 ಬಾರಿ ಹೊಡೆದು ಕೊಲ್ಲಲಾಗಿದೆ. ನನ್ನ ತಂದೆಯನ್ನು ಕೊಲ್ಲುವ ಉದ್ದೇಶ ಹೊಂದಿರಲಿಲ್ಲ, ಆದರೆ, ನನ್ನಪ್ಪನಿಗೆ ತಕ್ಕ ಪಾಠ ಕಲಿಸಲು ಬಯಸಿದ್ದೆ ಎಂದು ಬಾಲಾಪರಾಧಿ ಪೊಲೀಸರಿಗೆ ತಿಳಿಸಿದ್ದಾನೆ.

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಸೆಕ್ಯುರಿಟಿಗಳ ಸರಣಿ ಹತ್ಯೆ; ಕೊಲೆ ಹಿಂದಿನ ಅಚ್ಚರಿಯ ಕಾರಣ ಇಲ್ಲಿದೆ

ತಂದೆ ಕುಡಿದು ಮನೆಗೆ ಬಂದು ತಾಯಿಯನ್ನು ಬೈಯುತ್ತಿದ್ದ, ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ. ಕೊಲೆ ನಡೆದ ದಿನದಂದು, ಮೃತ ವ್ಯಕ್ತಿ ರಾತ್ರಿ 10 ಗಂಟೆಯ ಸುಮಾರಿಗೆ ಮನೆಗೆ ಬಂದು ಮಗನನ್ನು ಕಾಲಿನಿಂದ ತಳ್ಳಿ, ತನ್ನ ಹೆಂಡತಿಯನ್ನು ನಿಂದಿಸಿದ್ದರು. ಇದರಿಂದ ಕೋಪಗೊಂಡ ಮಗ ರೋಲಿಂಗ್ ಪಿನ್ ಅನ್ನು ಎತ್ತಿಕೊಂಡು ಅಪ್ಪನಿಗೆ ಅನೇಕ ಬಾರಿ ಹೊಡೆದು ಕೊಂದಿದ್ದಾನೆ.

ಮೃತ ದೇಹದ ಮೇಲೆ 19 ಗಾಯಗಳಾಗಿತ್ತು. ಹೊಡೆತದ ಪ್ರಭಾವದಿಂದ ಬ್ರೈನ್ ಹ್ಯಾಮರೇಜ್ ಆಗಿ ಆಘಾತದಿಂದ ವ್ಯಕ್ತಿ ಮೃತಪಟ್ಟಿದ್ದಾರೆ. ಶವಪರೀಕ್ಷೆ ವರದಿಯ ನಂತರ, ಪೊಲೀಸರು ಕೊಲೆ ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ಮೃತರ ಕುಟುಂಬದ ಸದಸ್ಯರನ್ನು ವಿಚಾರಣೆ ಮಾಡಲು ಪ್ರಾರಂಭಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:58 am, Thu, 8 September 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ