AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder News: ಅಮ್ಮನಿಗೆ ಕಿರುಕುಳ ನೀಡುತ್ತಿದ್ದ ಅಪ್ಪನನ್ನು ಕೊಂದ 17 ವರ್ಷದ ಬಾಲಕ

ನನ್ನ ತಂದೆಯನ್ನು ಕೊಲ್ಲುವ ಉದ್ದೇಶ ಹೊಂದಿರಲಿಲ್ಲ, ಆದರೆ, ನನ್ನಪ್ಪನಿಗೆ ತಕ್ಕ ಪಾಠ ಕಲಿಸಲು ಬಯಸಿದ್ದೆ ಎಂದು ಬಾಲಾಪರಾಧಿ ಪೊಲೀಸರಿಗೆ ತಿಳಿಸಿದ್ದಾನೆ.

Murder News: ಅಮ್ಮನಿಗೆ ಕಿರುಕುಳ ನೀಡುತ್ತಿದ್ದ ಅಪ್ಪನನ್ನು ಕೊಂದ 17 ವರ್ಷದ ಬಾಲಕ
ಕೊಲೆ
TV9 Web
| Updated By: ಸುಷ್ಮಾ ಚಕ್ರೆ|

Updated on:Sep 08, 2022 | 9:59 AM

Share

ನವದೆಹಲಿ: ತನ್ನ ತಾಯಿಗೆ ದಿನವೂ ಕಿರುಕುಳ ನೀಡುತ್ತಿದ್ದ ತಂದೆಯನ್ನು 17 ವರ್ಷದ ಮಗನೇ ಕೊಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ರೋಲಿಂಗ್ ಪಿನ್ ಬಳಸಿ ತಂದೆಯನ್ನು ಕೊಂದ ಆರೋಪದ ಮೇಲೆ 17 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ರೈಲ್ವೇ ಪ್ರೊಟೆಕ್ಷನ್ ಫೋರ್ಸ್‌ನಲ್ಲಿ (ಆರ್‌ಪಿಎಫ್) ಕೆಲಸ ಮಾಡುತ್ತಿದ್ದ ಮೃತ ವ್ಯಕ್ತಿ ದಿನವೂ ತನ್ನ ಹೆಂಡತಿಗೆ ಕಿರುಕುಳ ನೀಡುತ್ತಿದ್ದ. ಇದನ್ನು ನೋಡಿ ಬೇಸತ್ತಿದ್ದ ಮಗ ಅಪ್ಪನನ್ನು ಕೊಲೆ ಮಾಡಿದ್ದಾನೆ.

ಮೃತ ವ್ಯಕ್ತಿಯನ್ನು ರೋಲಿಂಗ್ ಪಿನ್‌ನಿಂದ 20 ಬಾರಿ ಹೊಡೆದು ಕೊಲ್ಲಲಾಗಿದೆ. ನನ್ನ ತಂದೆಯನ್ನು ಕೊಲ್ಲುವ ಉದ್ದೇಶ ಹೊಂದಿರಲಿಲ್ಲ, ಆದರೆ, ನನ್ನಪ್ಪನಿಗೆ ತಕ್ಕ ಪಾಠ ಕಲಿಸಲು ಬಯಸಿದ್ದೆ ಎಂದು ಬಾಲಾಪರಾಧಿ ಪೊಲೀಸರಿಗೆ ತಿಳಿಸಿದ್ದಾನೆ.

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಸೆಕ್ಯುರಿಟಿಗಳ ಸರಣಿ ಹತ್ಯೆ; ಕೊಲೆ ಹಿಂದಿನ ಅಚ್ಚರಿಯ ಕಾರಣ ಇಲ್ಲಿದೆ

ತಂದೆ ಕುಡಿದು ಮನೆಗೆ ಬಂದು ತಾಯಿಯನ್ನು ಬೈಯುತ್ತಿದ್ದ, ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ. ಕೊಲೆ ನಡೆದ ದಿನದಂದು, ಮೃತ ವ್ಯಕ್ತಿ ರಾತ್ರಿ 10 ಗಂಟೆಯ ಸುಮಾರಿಗೆ ಮನೆಗೆ ಬಂದು ಮಗನನ್ನು ಕಾಲಿನಿಂದ ತಳ್ಳಿ, ತನ್ನ ಹೆಂಡತಿಯನ್ನು ನಿಂದಿಸಿದ್ದರು. ಇದರಿಂದ ಕೋಪಗೊಂಡ ಮಗ ರೋಲಿಂಗ್ ಪಿನ್ ಅನ್ನು ಎತ್ತಿಕೊಂಡು ಅಪ್ಪನಿಗೆ ಅನೇಕ ಬಾರಿ ಹೊಡೆದು ಕೊಂದಿದ್ದಾನೆ.

ಮೃತ ದೇಹದ ಮೇಲೆ 19 ಗಾಯಗಳಾಗಿತ್ತು. ಹೊಡೆತದ ಪ್ರಭಾವದಿಂದ ಬ್ರೈನ್ ಹ್ಯಾಮರೇಜ್ ಆಗಿ ಆಘಾತದಿಂದ ವ್ಯಕ್ತಿ ಮೃತಪಟ್ಟಿದ್ದಾರೆ. ಶವಪರೀಕ್ಷೆ ವರದಿಯ ನಂತರ, ಪೊಲೀಸರು ಕೊಲೆ ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ಮೃತರ ಕುಟುಂಬದ ಸದಸ್ಯರನ್ನು ವಿಚಾರಣೆ ಮಾಡಲು ಪ್ರಾರಂಭಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:58 am, Thu, 8 September 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!