AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder News: ಅಮ್ಮನಿಗೆ ಕಿರುಕುಳ ನೀಡುತ್ತಿದ್ದ ಅಪ್ಪನನ್ನು ಕೊಂದ 17 ವರ್ಷದ ಬಾಲಕ

ನನ್ನ ತಂದೆಯನ್ನು ಕೊಲ್ಲುವ ಉದ್ದೇಶ ಹೊಂದಿರಲಿಲ್ಲ, ಆದರೆ, ನನ್ನಪ್ಪನಿಗೆ ತಕ್ಕ ಪಾಠ ಕಲಿಸಲು ಬಯಸಿದ್ದೆ ಎಂದು ಬಾಲಾಪರಾಧಿ ಪೊಲೀಸರಿಗೆ ತಿಳಿಸಿದ್ದಾನೆ.

Murder News: ಅಮ್ಮನಿಗೆ ಕಿರುಕುಳ ನೀಡುತ್ತಿದ್ದ ಅಪ್ಪನನ್ನು ಕೊಂದ 17 ವರ್ಷದ ಬಾಲಕ
ಕೊಲೆ
TV9 Web
| Edited By: |

Updated on:Sep 08, 2022 | 9:59 AM

Share

ನವದೆಹಲಿ: ತನ್ನ ತಾಯಿಗೆ ದಿನವೂ ಕಿರುಕುಳ ನೀಡುತ್ತಿದ್ದ ತಂದೆಯನ್ನು 17 ವರ್ಷದ ಮಗನೇ ಕೊಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ರೋಲಿಂಗ್ ಪಿನ್ ಬಳಸಿ ತಂದೆಯನ್ನು ಕೊಂದ ಆರೋಪದ ಮೇಲೆ 17 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ರೈಲ್ವೇ ಪ್ರೊಟೆಕ್ಷನ್ ಫೋರ್ಸ್‌ನಲ್ಲಿ (ಆರ್‌ಪಿಎಫ್) ಕೆಲಸ ಮಾಡುತ್ತಿದ್ದ ಮೃತ ವ್ಯಕ್ತಿ ದಿನವೂ ತನ್ನ ಹೆಂಡತಿಗೆ ಕಿರುಕುಳ ನೀಡುತ್ತಿದ್ದ. ಇದನ್ನು ನೋಡಿ ಬೇಸತ್ತಿದ್ದ ಮಗ ಅಪ್ಪನನ್ನು ಕೊಲೆ ಮಾಡಿದ್ದಾನೆ.

ಮೃತ ವ್ಯಕ್ತಿಯನ್ನು ರೋಲಿಂಗ್ ಪಿನ್‌ನಿಂದ 20 ಬಾರಿ ಹೊಡೆದು ಕೊಲ್ಲಲಾಗಿದೆ. ನನ್ನ ತಂದೆಯನ್ನು ಕೊಲ್ಲುವ ಉದ್ದೇಶ ಹೊಂದಿರಲಿಲ್ಲ, ಆದರೆ, ನನ್ನಪ್ಪನಿಗೆ ತಕ್ಕ ಪಾಠ ಕಲಿಸಲು ಬಯಸಿದ್ದೆ ಎಂದು ಬಾಲಾಪರಾಧಿ ಪೊಲೀಸರಿಗೆ ತಿಳಿಸಿದ್ದಾನೆ.

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಸೆಕ್ಯುರಿಟಿಗಳ ಸರಣಿ ಹತ್ಯೆ; ಕೊಲೆ ಹಿಂದಿನ ಅಚ್ಚರಿಯ ಕಾರಣ ಇಲ್ಲಿದೆ

ತಂದೆ ಕುಡಿದು ಮನೆಗೆ ಬಂದು ತಾಯಿಯನ್ನು ಬೈಯುತ್ತಿದ್ದ, ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ. ಕೊಲೆ ನಡೆದ ದಿನದಂದು, ಮೃತ ವ್ಯಕ್ತಿ ರಾತ್ರಿ 10 ಗಂಟೆಯ ಸುಮಾರಿಗೆ ಮನೆಗೆ ಬಂದು ಮಗನನ್ನು ಕಾಲಿನಿಂದ ತಳ್ಳಿ, ತನ್ನ ಹೆಂಡತಿಯನ್ನು ನಿಂದಿಸಿದ್ದರು. ಇದರಿಂದ ಕೋಪಗೊಂಡ ಮಗ ರೋಲಿಂಗ್ ಪಿನ್ ಅನ್ನು ಎತ್ತಿಕೊಂಡು ಅಪ್ಪನಿಗೆ ಅನೇಕ ಬಾರಿ ಹೊಡೆದು ಕೊಂದಿದ್ದಾನೆ.

ಮೃತ ದೇಹದ ಮೇಲೆ 19 ಗಾಯಗಳಾಗಿತ್ತು. ಹೊಡೆತದ ಪ್ರಭಾವದಿಂದ ಬ್ರೈನ್ ಹ್ಯಾಮರೇಜ್ ಆಗಿ ಆಘಾತದಿಂದ ವ್ಯಕ್ತಿ ಮೃತಪಟ್ಟಿದ್ದಾರೆ. ಶವಪರೀಕ್ಷೆ ವರದಿಯ ನಂತರ, ಪೊಲೀಸರು ಕೊಲೆ ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ಮೃತರ ಕುಟುಂಬದ ಸದಸ್ಯರನ್ನು ವಿಚಾರಣೆ ಮಾಡಲು ಪ್ರಾರಂಭಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:58 am, Thu, 8 September 22

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ